ಜಗದೀಪ್ ಧನ್ ಕರ್ ಮತ್ತು ಮಲ್ಲಿಕಾರ್ಜುನ ಖರ್ಗೆ(ಸಂಗ್ರಹ ಚಿತ್ರ) 
ದೇಶ

ರಾಜ್ಯಸಭೆ: ಸಭಾಪತಿ ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಜಟಾಪಟಿ; ಕಲಾಪ ಡಿಸೆಂಬರ್ 16ಕ್ಕೆ ಮುಂದೂಡಿಕೆ

ಇಂದು ಬೆಳಗ್ಗೆ ಸದನ ಕಲಾಪಕ್ಕೆ ಸೇರುತ್ತಿದ್ದಂತೆ ಪ್ರತಿಪಕ್ಷ ಸದಸ್ಯರು ಪ್ರಸ್ತಾವನೆಯ ಮೇಲೆ ಚರ್ಚೆಗೆ ಒತ್ತಾಯಿಸುತ್ತಿದ್ದಂತೆ ಕೋಲಾಹಲ ಉಂಟಾಯಿತು, ಆಡಳಿತ ಪಕ್ಷ ಸದಸ್ಯರು ಆಕ್ಷೇಪ ಎತ್ತಿದರು. ಈ ವೇಳೆ ತೀವ್ರ ಗದ್ದಲ, ಕೋಲಾಹಲ ಉಂಟಾಗಿ ಕಲಾಪ ಮುಂದೂಡಿಕೆಗೆ ಕಾರಣವಾಯಿತು.

ನವದೆಹಲಿ: ರಾಜ್ಯಸಭೆ ಸಭಾಪತಿ ಜಗದೀಪ್ ಧಂಖರ್ ವಿರುದ್ಧದ ಅವಿಶ್ವಾಸ ನಿರ್ಣಯದ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ವಾಗ್ವಾದದ ನಂತರ ರಾಜ್ಯಸಭೆ ಕಲಾಪವನ್ನು ಡಿಸೆಂಬರ್ 16 ಕ್ಕೆ ಮುಂದೂಡಲಾಯಿತು.

ಇಂದು ಬೆಳಗ್ಗೆ ಸದನ ಕಲಾಪಕ್ಕೆ ಸೇರುತ್ತಿದ್ದಂತೆ ಪ್ರತಿಪಕ್ಷ ಸದಸ್ಯರು ಪ್ರಸ್ತಾವನೆಯ ಮೇಲೆ ಚರ್ಚೆಗೆ ಒತ್ತಾಯಿಸುತ್ತಿದ್ದಂತೆ ಕೋಲಾಹಲ ಉಂಟಾಯಿತು, ಆಡಳಿತ ಪಕ್ಷ ಸದಸ್ಯರು ಆಕ್ಷೇಪ ಎತ್ತಿದರು. ಈ ವೇಳೆ ತೀವ್ರ ಗದ್ದಲ, ಕೋಲಾಹಲ ಉಂಟಾಗಿ ಕಲಾಪ ಮುಂದೂಡಿಕೆಗೆ ಕಾರಣವಾಯಿತು.

'ಅತ್ಯಂತ ಪಕ್ಷಪಾತಿ' ಎಂದು ಆರೋಪಿಸಿ ರಾಜ್ಯಸಭಾಧ್ಯಕ್ಷ ಜಗದೀಪ್ ಧಂಖರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಅವಿಶ್ವಾಸ ನಿರ್ಣಯದ ನೋಟಿಸ್ ನ್ನು ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ಮಂಡಿಸಿದವು.

ಗದ್ದಲದ ನಡುವೆಯೇ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಧನಕರ್ ಅವಕಾಶ ನೀಡಿದರು. ಆಡಳಿತ ಪಕ್ಷದ ಸದಸ್ಯರಿಗೆ ಮಾತನಾಡಲು ಹೆಚ್ಚಿನ ಸಮಯಾವಕಾಶ ನೀಡುವ ಮೂಲಕ ಸಭಾಪತಿಗಳು ಒಲವು ತೋರುತ್ತಿದ್ದಾರೆ, ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಅಗೌರವ ತೋರಿಸುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಧಂಖರ್ ಅವರು ಖರ್ಗೆ ಮತ್ತು ಸಭಾನಾಯಕ ಜೆಪಿ ನಡ್ಡಾ ಅವರನ್ನು ಅಧ್ಯಕ್ಷರ ಚೇಂಬರ್‌ನಲ್ಲಿ ಬಿಕ್ಕಟ್ಟನ್ನು ಪರಿಹರಿಸುವ ಪ್ರಯತ್ನದಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನಿಸಿ ಕಲಾಪವನ್ನು ಡಿಸೆಂಬರ್ 16 ಕ್ಕೆ ಮುಂದೂಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Ukraine war ನ ಪ್ರಾಥಮಿಕ ಹೂಡಿಕೆದಾರರು'.. ರಷ್ಯಾ ಇಂಧನ ಖರೀದಿ ಕೂಡಲೇ ನಿಲ್ಲಿಸಿ': ಭಾರತ, ಚೀನಾ ವಿರುದ್ಧ ಮತ್ತೆ Donald Trump ಕಿಡಿ!

ಮೋಹನ್ ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; SRK, ವಿಕ್ರಾಂತ್ ಮಾಸ್ಸೆ ಹಾಗೂ ರಾಣಿ ಮುಖರ್ಜಿಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ ಪ್ರದಾನ!

Bengaluru: 'ನನ್ ಗಂಡ ನಪುಂಸಕ.. 2 ಕೋಟಿ ರೂ ಕೊಡ್ಸಿ...'; ನವ ವಿವಾಹಿತೆ ಬೇಡಿಕೆ! ಆದ್ರೆ ಗಂಡನಿಂದಲೇ FIR

'ಭಾರತ ವಿರುದ್ಧ ಗೆಲ್ಲಬೇಕಿದ್ರೆ ಪಾಕ್ ಸೇನಾ ಮುಖ್ಯಸ್ಥರೇ ಬ್ಯಾಟ್ ಹಿಡೀಬೇಕು': PCB ವಿರುದ್ಧ Imran Khan ಗರಂ!

KRS, Mysuru: 5 ದಿನ ‘ಕಾವೇರಿ ಆರತಿ’; ಸೆಪ್ಟೆಂಬರ್ 26ಕ್ಕೆ DCM ಡಿ.ಕೆ ಶಿವಕುಮಾರ್ ಉದ್ಘಾಟನೆ

SCROLL FOR NEXT