ರೇಖಾ ಶರ್ಮಾ 
ದೇಶ

ರಾಜ್ಯಸಭೆ ಉಪಚುನಾವಣೆ: NCW ಮಾಜಿ ಮುಖ್ಯಸ್ಥೆ, ಬಿಜೆಪಿ ಅಭ್ಯರ್ಥಿ ರೇಖಾ ಶರ್ಮಾ ಅವಿರೋಧವಾಗಿ ಆಯ್ಕೆ

ರೇಖಾ ಶರ್ಮಾ ಅವರು ಮಂಗಳವಾರ ಹರಿಯಾಣದಿಂದ ರಾಜ್ಯಸಭೆ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು.

ಚಂಡೀಗಢ: ರಾಜ್ಯಸಭೆಯ ಉಪಚುನಾವಣೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ(NCW) ಮಾಜಿ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ರೇಖಾ ಶರ್ಮಾ ಅವರು ಹರಿಯಾಣದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಶುಕ್ರವಾರ ಘೋಷಿಸಲಾಗಿದೆ.

ರೇಖಾ ಶರ್ಮಾ ಅವರು ಮಂಗಳವಾರ ಹರಿಯಾಣದಿಂದ ರಾಜ್ಯಸಭೆ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿತ್ತು. ಹೀಗಾಗಿ 3 ಗಂಟೆಯ ನಂತರ ಕಣದಲ್ಲಿದ್ದ ಏಕೈಕ ಅಭ್ಯರ್ಥಿ ರೇಖಾ ಶರ್ಮಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.

ಶರ್ಮಾ ಅವರು ಅವಿರೋಧವಾಗಿ ಆಯ್ಕೆಯಾದ ನಂತರ ಚುನಾವಣಾಧಿಕಾರಿ ಪ್ರಮಾಣಪತ್ರವನ್ನು ನೀಡಿದರು. ಈ ವೇಳೆ ಹರಿಯಾಣ ಸಚಿವ ಮಹಿಪಾಲ್ ಧಂಡಾ ಮತ್ತು ಹರಿಯಾಣ ವಿಧಾನಸಭೆಯ ಮಾಜಿ ಸ್ಪೀಕರ್ ಗಿಯಾನ್ ಚಂದ್ ಗುಪ್ತಾ ಅವರು ಇದ್ದರು.

ಡಿಸೆಂಬರ್ 20 ರಂದು ನಡೆಯಲಿರುವ ರಾಜ್ಯಸಭಾ ಉಪಚುನಾವಣೆಗೆ ಶರ್ಮಾ ಅವರ ಹೆಸರನ್ನು ಬಿಜೆಪಿ ಸೋಮವಾರ ಪ್ರಕಟಿಸಿತ್ತು. ಆದರೆ ಪ್ರತಿಪಕ್ಷಗಳು ಉಪಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT