ಅತುಲ್ ಸುಭಾಷ್ ಅವರ ಪತ್ನಿಯ ನಿವಾಸದ ಹೊರಗೆ ಪೊಲೀಸರು ನೋಟಿಸ್ ಅಂಟಿಸಿರುವುದು. 
ದೇಶ

ಟೆಕ್ಕಿ ಆತ್ಮಹತ್ಯೆ: ಕೌಟುಂಬಿಕ ನ್ಯಾಯಾಲಯದಿಂದ ದಾಖಲೆ ಸಂಗ್ರಹ, ಅತುಲ್ ಪತ್ನಿಗೆ ನೋಟಿಸ್

ಜೌನ್‌ಪುರದಲ್ಲಿರುವ ಅತುಲ್ ಸುಭಾಷ್ ಅವರ ಪತ್ನಿಯ ನಿವಾಸದ ಹೊರಗೆ ಪೊಲೀಸರು ನೋಟಿಸ್ ಅಂಟಿಸಿದ್ದಾರೆ.

ಜೌನ್‌ಪುರ: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಬೆಂಗಳೂರು ಪೊಲೀಸರು ಶುಕ್ರವಾರ ಜೌನ್‌ಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ರೆಕಾರ್ಡ್ ರೂಂಗೆ ತೆರಳಿ ದಾಖಲೆ ಸಂಗ್ರಹಿಸಿದ್ದಾರೆ.

ಒಬ್ಬ ಮಹಿಳಾ ಪೊಲೀಸ್ ಸಿಬ್ಬಂದಿ ಸೇರಿದಂತೆ ನಾಲ್ಕು ಸದಸ್ಯರ ಪೊಲೀಸ್ ತಂಡ ಬೆಂಗಳೂರಿನಿಂದ ಉತ್ತರ ಪ್ರದೇಶದ ಜೌನ್‌ಪುರಕ್ಕೆ ಇಂದು ಬೆಳಗ್ಗೆ ಆಗಮಿಸಿದ್ದು, ಸ್ಥಳೀಯ ಪೊಲೀಸರ ಸಹಾಯದಿಂದ ಅತುಲ್ ಸುಭಾಷ್ ಅವರ ಪತ್ನಿ ಮನೆಗೆ ಭೇಟಿ ನೀಡಿದ್ದಾರೆ. ಆದರೆ ಅತುಲ್ ಪತ್ನಿ ಹಾಗೂ ಅತ್ತೆ ಮನೆಯವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು, ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾರೆ.

ಜೌನ್‌ಪುರದಲ್ಲಿರುವ ಅತುಲ್ ಸುಭಾಷ್ ಅವರ ಪತ್ನಿಯ ನಿವಾಸದ ಹೊರಗೆ ಪೊಲೀಸರು ನೋಟಿಸ್ ಅಂಟಿಸಿದ್ದು, ಅದರಲ್ಲಿ 'ನಿಮ್ಮನ್ನು ವಿಚಾರಣೆ ಮಾಡಲು ಸಮಂಜಸವಾದ ಆಧಾರಗಳಿವೆ. ಮೂರು ದಿನಗಳೊಳಗೆ ಬೆಂಗಳೂರಿನ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಖಾಸಗಿ ಸಂಸ್ಥೆಯೊಂದರ ಡೆಪ್ಯುಟಿ ಜನರಲ್ ಮ್ಯಾನೇಜರ್ ಆಗಿದ್ದ 34 ವರ್ಷದ ಅತುಲ್ ಸುಭಾಷ್ ಅವರು ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಸಾವಿಗೆ ಪತ್ನಿ ಹಾಗೂ ಆಕೆಯ ಸಂಬಂಧಿಕರ ಕಿರುಕುಳವೇ ಕಾರಣ ಎಂದು ಆರೋಪಿಸಿ 24 ಪುಟಗಳ ಸೂಸೈಡ್ ನೋಟ್ ಬರೆದಿದ್ದಾರೆ.

ಪ್ರಕರಣವನ್ನು ಇತ್ಯರ್ಥಪಡಿಸಲು ನ್ಯಾಯಾಧೀಶರು 5 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದಾರೆ ಎಂದು ಅವರು ಅತುಲ್ ತಮ್ಮ ಆತ್ಮಹತ್ಯೆ ಪತ್ರದಲ್ಲಿ ಆರೋಪಿಸಿದ್ದಾರೆ.

ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಅವರ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಮಾರತಹಳ್ಳಿ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ವಿಶೇಷ ತಂಡ ರಚಿಸಿ ತನಿಖೆ ಕೈಗೊಳ್ಳಲಾಗಿದೆ ಮತ್ತು ಸಾಕ್ಷ್ಯಾಧಾರಗಳನ್ನು ಕಲೆ ಹಾಕಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ