ಬಾಂಬ್ ಪತ್ತೆ ದಳದ ವಾಹನ  
ದೇಶ

ದೆಹಲಿ: ಹಲವು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಇಮೇಲ್

ಇದು ಈ ವಾರ ನಡೆದ ಮೂರನೇ ಘಟನೆಯಾಗಿದೆ. ಈ ಹಿಂದೆ ಡಿಸೆಂಬರ್ 9 ರಂದು, ದೆಹಲಿಯ ಕನಿಷ್ಠ 40 ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿತ್ತು.

ನವದೆಹಲಿ: ದೆಹಲಿಯ ಹಲವು ಶಾಲೆಗಳಿಗೆ ಬರುವ ಬಾಂಬ್ ಬೆದರಿಕೆ ಕರೆ ನಿಲ್ಲುತ್ತಿಲ್ಲ, ದೆಹಲಿಯ ಆರ್‌ಕೆ ಪುರಂನಲ್ಲಿ ಡೆಲ್ಲಿ ಪಬ್ಲಿಕ್ ಸ್ಕೂಲ್ ಸೇರಿದಂತೆ ಹಲವು ಶಾಲೆಗಳಿಗೆ ಇಂದು ಬೆಳಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ. ಕೂಡಲೇ ತನಿಖೆ ಮಾಡಿರುವ ಪೊಲೀಸರು ಇದು ಹುಸಿ ಬಾಂಬ್ ಬೆದರಿಕೆ ಎಂದು ಹೇಳಿದ್ದಾರೆ. ದೆಹಲಿಯಾದ್ಯಂತ 30 ಶಾಲೆಗಳು ನಕಲಿ ಬಾಂಬ್ ಬೆದರಿಕೆ ಸ್ವೀಕರಿಸಿವೆ ಎಂದು ಆಗ್ನೇಯ ದೆಹಲಿ ಪೊಲೀಸ್ ಉಪ ಆಯುಕ್ತ (DCP) ರವಿಕುಮಾರ್ ಸಿಂಗ್ ನಿನ್ನೆ ಹೇಳಿದ ಬಳಿಕ ಇಂದು ಮತ್ತೆ ಬೆದರಿಕೆ ಇಮೇಲ್ ಗಳು ಬಂದಿವೆ.

ಇದು ಈ ವಾರ ನಡೆದ ಮೂರನೇ ಘಟನೆಯಾಗಿದೆ. ಈ ಹಿಂದೆ ಡಿಸೆಂಬರ್ 9 ರಂದು, ದೆಹಲಿಯ ಕನಿಷ್ಠ 40 ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿತ್ತು, ಪಶ್ಚಿಮ ವಿಹಾರ್ ಮತ್ತು ಡಿಪಿಎಸ್ ಆರ್ ಕೆ ಪುರಂನಲ್ಲಿರುವ ಜಿಡಿ ಗೋಯೆಂಕಾ ಶಾಲೆಯಿಂದ ಬೆದರಿಕೆಗಳು ಬಂದಿದ್ದವು. ಮದರ್ ಮೇರಿಸ್ ಸ್ಕೂಲ್, ಬ್ರಿಟಿಷ್ ಸ್ಕೂಲ್, ಸಲ್ವಾನ್ ಪಬ್ಲಿಕ್ ಸ್ಕೂಲ್, ಕೇಂಬ್ರಿಡ್ಜ್ ಸ್ಕೂಲ್ ನಂತಹ ಹಲವಾರು ಶಾಲೆಗಳಿಗೂ ಬಾಂಬ್ ಬೆದರಿಕೆಗಳು ಬಂದಿವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 8 ರಂದು ರಾತ್ರಿ 11:38 ರ ಸುಮಾರಿಗೆ ಕೆಲವು ಶಾಲೆಗಳಿಗೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಲಾಗಿದೆ.

ಎಎಪಿ ಕಳವಳ

ಡಿಸೆಂಬರ್ 13 ರಂದು ಕೇಜ್ರಿವಾಲ್ ಅವರು ಇಂತಹ ಬೆದರಿಕೆಗಳು ಬರುವುದು 'ಅತ್ಯಂತ ಗಂಭೀರ ಮತ್ತು ಚಿಂತಾಜನಕ' ಎಂದು ಹೇಳಿದ್ದಾರೆ. ಇದರಿಂದ ಮಕ್ಕಳ ಮೇಲೆ ಕೆಟ್ಟಪರಿಣಾಮ ಬೀರುತ್ತದೆ ಎಂದಿದ್ದಾರೆ.

ಮತ್ತೊಂದೆಡೆ ದೆಹಲಿ ಸಿಎಂ ಅತಿಶಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಆಡಳಿತದಲ್ಲಿರುವ ಕೇಂದ್ರ ಸರ್ಕಾರ ಭದ್ರತೆ ಒದಗಿಸುವ ಕಾರ್ಯದಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ. ದೆಹಲಿಯಲ್ಲಿ ದಿನನಿತ್ಯ ಸುಲಿಗೆ, ಕೊಲೆಗಳು, ಗುಂಡಿನ ದಾಳಿಯ ಘಟನೆಗಳ ನಂತರ ಈಗ ಶಾಲೆಗಳ ಮೇಲೆ ಬಾಂಬ್ ದಾಳಿಯ ಬೆದರಿಕೆಗಳು ಬರುತ್ತಿವೆ. ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಹಿಂದೆಂದೂ ಇಷ್ಟು ಹದಗೆಟ್ಟಿರಲಿಲ್ಲ. ಬಿಜೆಪಿ ಆಡಳಿತದ ಕೇಂದ್ರ ಸರ್ಕಾರವು ದೆಹಲಿಯ ಜನರಿಗೆ ಭದ್ರತೆ ಒದಗಿಸುವ ಕಾರ್ಯದಲ್ಲಿ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT