ರಾಹುಲ್ ಗಾಂಧಿ ಭಾಷಣ online desk
ದೇಶ

"ತಪಸ್ ಎಂದರೆ....": ರಾಹುಲ್ ಗಾಂಧಿ ಮಾತಿಗೆ ಬಿದ್ದು ಬಿದ್ದು ನಕ್ಕ ಸದಸ್ಯರು!

ಏಕಲವ್ಯನ ಬಗ್ಗೆ ಮಾತನಾಡುತ್ತಾ, ರಾಹುಲ್ ಗಾಂಧಿ ಯಡವಟ್ಟು ಮಾಡಿಕೊಂಡಿದ್ದಾರೆ. ಮುಂಜಾನೆ ಬಿಲ್ಲು ಬಾಣ ಹಿಡಿದು ಅಭ್ಯಾಸ ಮಾಡುವ ಮೂಲಕ ಏಕಲವ್ಯ ಎಂಬ ಬಾಲಕ ತಪಸ್ ಮಾಡುತ್ತಿದ್ದ.

ನವದೆಹಲಿ: ಲೋಕಸಭೆಯಲ್ಲಿ ಸಂವಿಧಾನದ ಬಗ್ಗೆ ಭಾಷಣ ಮಾಡುತ್ತಾ, ಬಿಜೆಪಿಯನ್ನು ಟೀಕಿಸಿರುವ ಭರದಲ್ಲಿ ರಾಹುಲ್ ಗಾಂಧಿ ಮತ್ತೊಮ್ಮೆ ಯಡವಟ್ಟು ಮಾಡಿಕೊಂಡಿದ್ದಾರೆ.

ಮಹಾಭಾರತ, ದ್ರೋಣಾಚಾರ್ಯ, ಏಕಲ್ಯ ಮುಂತಾದ ಉಲ್ಲೇಖಗಳನ್ನು ನೀಡುತ್ತಾ, ರಾಹುಲ್ ಗಾಂಧಿ ಮೋದಿ ಸರ್ಕಾರ ದೇಶದ ಯುವಕರ ಹೆಬ್ಬೆರಳು ಕತ್ತರಿಸುತ್ತಿದೆ. ಇದು ಮಹಾಭಾರತದಲ್ಲಿ ಗುರುದಕ್ಷಿಣೆ ಪಡೆಯಲು ದ್ರೋಣಾಚಾರ್ಯ ಏಕಲವ್ಯನಿಂದ ಹೆಬ್ಬೆರಳು ಕತ್ತರಿಸಿದಂತೆಯೇ ಆಗಿದೆ ಎಂದು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಏಕಲವ್ಯನ ಬಗ್ಗೆ ಮಾತನಾಡುತ್ತಾ, ರಾಹುಲ್ ಗಾಂಧಿ ಯಡವಟ್ಟು ಮಾಡಿಕೊಂಡಿದ್ದಾರೆ. ಮುಂಜಾನೆ ಬಿಲ್ಲು ಬಾಣ ಹಿಡಿದು ಅಭ್ಯಾಸ ಮಾಡುವ ಮೂಲಕ ಏಕಲವ್ಯ ಎಂಬ ಬಾಲಕ ತಪಸ್ ಮಾಡುತ್ತಿದ್ದ. ಧನುಸ್ಸಿನಲ್ಲಿ (ಬಿಲ್ಲು) ತಪಸ್ಸಿದೆ. ಮನ್ರೇಗಾದಲ್ಲಿ ತಪಸ್ಸಿದೆ. ತಪಸ್ಸೆಂದರೆ, ಶರೀರದಲ್ಲಿ ಶಾಖ ಉತ್ಪತ್ತಿಸುವುದಾಗಿದೆ, ಅರ್ಥಮಾಡಿಕೊಳ್ಳಿ ತಪನ ಎಂದರೆ ಅದೇ ಅರ್ಥ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ರಾಹುಲ್ ಗಾಂಧಿ ಮಾತಿಗೆ ಆಡಳಿತಪಕ್ಷದ ಸದಸ್ಯರು ನಕ್ಕಿದ್ದಾರೆ. ಬಿಜೆಪಿ ರಾಹುಲ್ ಗಾಂಧಿ ಮಾತಿಗೆ ವ್ಯಂಗ್ಯವಾಡಿದ್ದು, ಜಾರ್ಜ್ ಸೊರೊಸ್ ಅವರಿಂದ ಮಾತ್ರ ಇಂತಹ ಜ್ಞಾನ ಬರಲು ಸಾಧ್ಯ ಎಂದು ಸಂಬಿತ್ ಪಾತ್ರ ಟ್ವಿಟರ್ ನಲ್ಲಿ ಕಾಲೆಳೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2nd PUC exam 2026-ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ-1: 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ, ಸಾವಿರಕ್ಕೂ ಅಧಿಕ ಮಕ್ಕಳಿಗೆ ನಿರಾಕರಣೆ

ಹಣ ಸಾಗಿಸುತ್ತಿದ್ದ ಕಾರ್ಗೊ ವಿಮಾನ ಪತನ; 15 ಮಂದಿ ಸಾವು, ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ನೋಟುಗಳು, ಮುಗಿಬಿದ್ದ ಜನರು: Video

'ನೀವೇ CM ಆಗಿ, ಇಲ್ಲದಿದ್ದರೇ ದಲಿತರನ್ನು ಮುಖ್ಯಮಂತ್ರಿ ಮಾಡಿ: ಅಧಿಕಾರವಿದ್ದರೂ ಅವಕಾಶ ನೀಡದಿದ್ದರೇ ಇತಿಹಾಸ ನಿಮ್ಮನ್ನು ಶಪಿಸುತ್ತೆ'

ರಂಜಾನ್ ಉಪವಾಸದ ಸಮಯದಲ್ಲಿ ಆರೋಗ್ಯಕರ ಆಹಾರ ಸೇವನೆ

ಅಹಿಂದ ಉತ್ತರಾಧಿಕಾರಕ್ಕೆ ಜಾರಕಿಹೊಳಿ ಸಿದ್ದತೆ: ಹಿಂದುಳಿದ ವರ್ಗಗಳ ಚ್ಯಾಂಪಿಯನ್ ಪಟ್ಟಕ್ಕೆ 'ಸಾಹುಕಾರ್' ಸಮರ್ಥರೇ?

SCROLL FOR NEXT