ಲಾರೆನ್ಸ್ ಬಿಷ್ಣೋಯ್ TNIE
ದೇಶ

ಜೈಲಿನಲ್ಲಿ ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಸಂದರ್ಶನಕ್ಕೆ ಅವಕಾಶ: ಕೆಲಸದಿಂದ ಡಿಎಸ್‌ಪಿ ವಜಾ?

ಗುರ್ಷರ್ ಅವರನ್ನು ವಜಾಗೊಳಿಸಲು ಶಿಫಾರಸು ಮಾಡುವ ಕಡತವನ್ನು ಅಂತಿಮ ಅನುಮೋದನೆಗಾಗಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಕಳುಹಿಸಲಾಗಿದೆ.

ಚಂಡೀಗಢ: ಜೈಲಿನಲ್ಲಿದ್ದಾಗಲೇ ಖಾಸಗಿ ಸುದ್ದಿವಾಹಿನಿಗೆ ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಸಂದರ್ಶನಕ್ಕೆ ಅವಕಾಶ ನೀಡಿದ ಪ್ರಕರಣದಲ್ಲಿ ಪ್ರಮುಖ ಸಂಚುಕೋರ ಎಂದು ಹೆಸರಿಸಲಾದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಗುರ್ಷರ್ ಸಿಂಗ್ ವಜಾಗೊಳಿಸಲು ಪಂಜಾಬ್ ಗೃಹ ಇಲಾಖೆ ಶಿಫಾರಸು ಮಾಡಿದೆ.

ವಿಶೇಷ ಡಿಜಿಪಿ (ಮಾನವ ಹಕ್ಕುಗಳು) ಪ್ರಮೋದ್ ಕುಮಾರ್ ನೇತೃತ್ವದ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯ ಆಧಾರದ ಮೇಲೆ ಡಿಎಸ್‌ಪಿ ಗುರ್ಷರ್ ಸಿಂಗ್ ಅವರನ್ನು ಸೇವೆಯಿಂದ ವಜಾಗೊಳಿಸಲು ಶಿಫಾರಸ್ಸು ಮಾಡಿದೆ. 2023ರ ಮಾರ್ಚ್ ನಲ್ಲಿ ಪ್ರಸಾರವಾದ ವಿವಾದಾತ್ಮಕ ಸಂದರ್ಶನವನ್ನು ಬಿಷ್ಣೋಯ್ 2022ರ ಸೆಪ್ಟೆಂಬರ್ 3-4ರಂದು CIA ಖರಾರ್ ಅವರ ವಶದಲ್ಲಿದ್ದಾಗ ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆಸಲಾಯಿತು ಎಂದು SIT ಬಹಿರಂಗಪಡಿಸಿದೆ. ಆ ಸಮಯದಲ್ಲಿ ಗುರ್ಶರ್ ಡಿಎಸ್ಪಿ (ತನಿಖೆ) ಆಗಿದ್ದು ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಅವರ ಹತ್ಯೆಯಲ್ಲಿ ಬಿಷ್ಣೋಯ್ ಅವರ ಪಾತ್ರಕ್ಕಾಗಿ ತನಿಖೆ ನಡೆಸಲಾಗುತ್ತಿತ್ತು.

ಈ ಬೆಳವಣಿಗೆಗಳ ಬಗ್ಗೆ ತಿಳಿದಿರುವ ಗೃಹ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳುವ ಪ್ರಕಾರ, ಗುರ್ಷರ್ ಅವರನ್ನು ವಜಾಗೊಳಿಸಲು ಶಿಫಾರಸು ಮಾಡುವ ಕಡತವನ್ನು ಅಂತಿಮ ಅನುಮೋದನೆಗಾಗಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಕಳುಹಿಸಲಾಗಿದೆ. ಮುಖ್ಯಮಂತ್ರಿಗಳು ಯಾವ ನಿರ್ಧಾರ ಕೈಗೊಂಡಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಒಂದು ವೇಳೆ ಈ ಕಡತಕ್ಕೆ ಸಹಿ ಬಿದ್ದರೆ ಉನ್ನತ ಪ್ರಕರಣದಲ್ಲಿ ಇದು ಮೊದಲ ಮಹತ್ವದ ಶಿಸ್ತು ಕ್ರಮವಾಗಲಿದೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ಗುರ್ಷರ್ ಅವರ ವಜಾ ಕುರಿತು ರಾಜ್ಯ ಸರ್ಕಾರವು ತನ್ನ ವರದಿಯನ್ನು ಸಲ್ಲಿಸುವ ನಿರೀಕ್ಷೆಯಿದೆ. ಅದು ಸೋಮವಾರದಂದು ವಿಚಾರಣೆಗೆ ನಿಗದಿಯಾಗಿದೆ. ಅಕ್ಟೋಬರ್ 2023ರಲ್ಲಿ, ಗುರ್ಷರ್ ಮತ್ತು ಇನ್ನೊಬ್ಬ ಡಿಎಸ್ಪಿ ಸಮರ್ ವನೀತ್ ಸೇರಿದಂತೆ ಆರು ಪಂಜಾಬ್ ಪೊಲೀಸ್ ಅಧಿಕಾರಿಗಳನ್ನು ಘಟನೆಯಲ್ಲಿ ಅವರ ಪಾತ್ರಕ್ಕಾಗಿ ಅಮಾನತುಗೊಳಿಸಲಾಯಿತು.

ಸುಲಿಗೆ (384), ಕ್ರಿಮಿನಲ್ ಬೆದರಿಕೆ (506) ಮತ್ತು ಕ್ರಿಮಿನಲ್ ಪಿತೂರಿ (120-ಬಿ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆದಾಗ್ಯೂ, ಅಕ್ಟೋಬರ್ 9 ರಂದು ಮೊಹಾಲಿ ನ್ಯಾಯಾಲಯದಲ್ಲಿ ಸಲ್ಲಿಸಲಾದ ಅಂತಿಮ ಆರೋಪಗಳು ಬಿಷ್ಣೋಯ್ ವಿರುದ್ಧ ಕ್ರಿಮಿನಲ್ ಬೆದರಿಕೆಗೆ (ಸೆಕ್ಷನ್ 506) ಸೀಮಿತವಾಗಿತ್ತು. ಇದಾದ ಬಳಿಕ ಹೈಕೋರ್ಟ್ ಅಕ್ಟೋಬರ್ 10ರಂದು ವಿಚಾರಣೆಗೆ ತಡೆ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT