ಜವಾಹರ ಲಾಲ್ ನೆಹರು ಮತ್ತು ಸೋನಿಯಾಗಾಂಧಿ 
ದೇಶ

Nehru's Letter: 'ಯಾರ ವೈಯುಕ್ತಿಕ ಆಸ್ತಿಯಲ್ಲ.. ವಾಪಸ್ ಮಾಡಿ'- Sonia Gandhi ಗೆ ಬಿಜೆಪಿ ಆಗ್ರಹ

BJP ಸೋಮವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ದೇಶದ ಮೊದಲ ಪ್ರಧಾನ ಮಂತ್ರಿಗಳ (ಜವಾಹರ್ ಲಾಲ್ ನೆಹರು) ವಸ್ತುಗಳನ್ನು ಸಂಗ್ರಹಾಲಯ ಮತ್ತು ಗ್ರಂಥಾಲಯಕ್ಕೆ ಹಿಂದಿರುಗಿಸುವಂತೆ ಒತ್ತಾಯಿಸಿದೆ.

ನವದೆಹಲಿ: ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಪತ್ರದ ವಿಚಾರವಾಗಿ ಮತ್ತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, 'ಯಾರ ವೈಯುಕ್ತಿಕ ಆಸ್ತಿಯಲ್ಲ.. ವಾಪಸ್ ಮಾಡಿ' ಎಂದು ಆಗ್ರಹಿಸಿದೆ.

ಭಾರತೀಯ ಜನತಾ ಪಕ್ಷ (BJP) ಸೋಮವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ದೇಶದ ಮೊದಲ ಪ್ರಧಾನ ಮಂತ್ರಿಗಳ (ಜವಾಹರ್ ಲಾಲ್ ನೆಹರು) ವಸ್ತುಗಳನ್ನು ಸಂಗ್ರಹಾಲಯ ಮತ್ತು ಗ್ರಂಥಾಲಯಕ್ಕೆ ಹಿಂದಿರುಗಿಸುವಂತೆ ಒತ್ತಾಯಿಸಿದೆ.

ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಹಲವಾರು ವ್ಯಕ್ತಿಗಳೊಂದಿಗೆ ಹೊಂದಿದ್ದ ಪತ್ರ ವ್ಯವಹಾರಗಳು ಮತ್ತು ಅವುಗಳ ಕುರಿತ ದಾಖಲೆಗಳು ದೇಶಕ್ಕೆ ಸೇರಿದ್ದಾಗಿದ್ದು, ಅವು ಯಾರ ವೈಯಕ್ತಿಕ ಆಸ್ತಿಯಲ್ಲ. ಹೀಗಾಗಿ ಕೂಡಲೇ ಅವುಗಳನ್ನು ಸಂಗ್ರಹಾಲಯ ಮತ್ತು ಗ್ರಂಥಾಲಯಕ್ಕೆ ಹಿಂದಿರುಗಿಸಬೇಕು ಎಂದು ಕಿಡಿಕಾರಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ಈ ವಿಷಯದ ಕುರಿತು ಪಿಎಂಎಂಎಲ್ ನಡೆಸಿದ ಚರ್ಚೆಗಳ ವರದಿಗಳನ್ನು ಉಲ್ಲೇಖಿಸಿದರು. 'ಭಾರತದ ಕೊನೆಯ ಬ್ರಿಟಿಷ್ ವೈಸ್‌ರಾಯ್ ಅವರ ಪತ್ನಿ ಎಡ್ವಿನಾ ಮೌಂಟ್‌ ಬ್ಯಾಟನ್ ಮತ್ತು ಅಂದಿನ ನಾಯಕರಾದ ಜಯಪ್ರಕಾಶ್ ನಾರಾಯಣ್ ಮತ್ತು ಜಗಜೀವನ್ ರಾಮ್ ಅವರೊಂದಿಗಿನ ನೆಹರು ಅವರ ಸಾಕಷ್ಟು ಪತ್ರವ್ಯವಹಾರ ನಡೆಸಿದ್ದರು.

ಈ ಹಿಂದೆ ಇವು ನೆಹರು ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯಲ್ಲಿ ಜೋಪಾನವಾಗಿದ್ದವು. ಆದರೆ 2008 ರಲ್ಲಿ ಸೋನಿಯಾ ಗಾಂಧಿ ಅವರು ಅವುಗಳನ್ನು ಪಡೆದುಕೊಂಡಿದ್ದರು ಎಂದು ಆರೋಪಿಸಿದ್ದಾರೆ.

ಈ ಕುರಿತು ಇಂದು ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಗೆಜೇಂದ್ರ ಸಿಂಗ್ ಶೇಖಾವತ್ ತಮ್ಮ ಸಚಿವಾಲಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾಗ ಸಂಬಿತ್ ಪಾತ್ರ ಅವರು ಈ ವಿಷಯವನ್ನು ಪ್ರಸ್ತಾಪಿಸಿದರು. ಆದರೆ ಇದಕ್ಕೆ ಉತ್ತರಿಸಿದ ಶೇಖಾವತ್ ಅವರು, ಸಂಬಿತ್ ಪಾತ್ರಾ ಅವರ ಪ್ರಶ್ನೆಯು ಬಿಜೆಪಿ ಸದಸ್ಯ ಸೌಮಿತ್ರ ಖಾನ್ ಅವರು ಸದನದಲ್ಲಿ ಎತ್ತಿದ ಮುಖ್ಯ ಪ್ರಶ್ನೆಗೆ ಸಂಬಂಧಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಅಂತೆಯೇ ಸಂಬಿತ್ ಪಾತ್ರ ಅವರ ಸಲಹೆಗಳನ್ನು ತಾವು ದಾಖಲಿಸಿಕೊಂಡಿದ್ದು, ಈ ವಿಷಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಬಹುದು ಎಂದು ಸಚಿವರು ಹೇಳಿದರು.

ಅಂದಹಾಗೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನೆಹರು ವಸ್ತು ಸಂಗ್ರಹಾಲಯವನ್ನು ಎಲ್ಲಾ ಪ್ರಧಾನ ಮಂತ್ರಿಗಳ ಸ್ಮಾರಕಗಳನ್ನು ಸೇರಿಸಲು ವಿಸ್ತರಿಸಲಾಯಿತು. ಅಲ್ಲದೆ ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಎಂದು ಮರುನಾಮಕರಣ ಮಾಡಲಾಯಿತು. ವಸ್ತು ಸಂಗ್ರಹಾಲಯದ ಆಗಿನ ನಿರ್ದೇಶಕರ ಅನುಮೋದನೆಯ ನಂತರ ನೆಹರು ಅವರ ಪತ್ರ ವ್ಯವಹಾರಗಳ 51 ಪೆಟ್ಟಿಗೆಗಳನ್ನು ಸೋನಿಯಾ ಗಾಂಧಿ ಅವರಿಗೆ ನೀಡಲಾಗಿತ್ತು ಎಂದು ಸದನದ ಬಳಿಕ ಸಂಬಿತ್ ಪಾತ್ರ ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT