ಪ್ರಿಯಾಂಕ ವಾದ್ರ online desk
ದೇಶ

Palestine ಬ್ಯಾಗ್ ಹಿಡಿದು ಸಂಸತ್ ಭವನಕ್ಕೆ ಬಂದ Priyanka Gandhi: BJP ಕೆಂಡಾಮಂಡಲ

ಪ್ರಿಯಾಂಕ ಹಿಡಿದುಬಂದ ಬ್ಯಾಗ್, ಕಲ್ಲಂಗಡಿ, ಈ ಪ್ರದೇಶದಲ್ಲಿ ಪ್ರತಿರೋಧದ ದೀರ್ಘಕಾಲದಿಂದ ಗುರುತಿಸಲ್ಪಟ್ಟ ಮೋಟಿಫ್ ಸೇರಿದಂತೆ ಪ್ಯಾಲೆಸ್ಟೀನಿಯಾದೊಂದಿಗಿನ ಐಕಮತ್ಯವನ್ನು ಸಂಕೇತಿಸುವ ಲಾಂಛನಗಳನ್ನು ಒಳಗೊಂಡಿತ್ತು.

ನವದೆಹಲಿ: ಕಾಂಗ್ರೆಸ್ ಸಂಸದೆ ಪ್ರಿಯಾಂಕ ಗಾಂಧಿ ವಾಧ್ರ ಸಂಸತ್ ಭವನಕ್ಕೆ Palestine ಎಂದು ಬರೆದಿದ್ದ ಬ್ಯಾಗ್ ಹಿಡಿದು ಬಂದಿದ್ದು ಇಂದು ಸದನದ ಕೇಂದ್ರಬಿಂದುವಾಗಿತ್ತು.

ಪ್ರಿಯಾಂಕ ಹಿಡಿದುಬಂದ ಬ್ಯಾಗ್, ಕಲ್ಲಂಗಡಿ, ಈ ಪ್ರದೇಶದಲ್ಲಿ ಪ್ರತಿರೋಧದ ದೀರ್ಘಕಾಲದಿಂದ ಗುರುತಿಸಲ್ಪಟ್ಟ ಮೋಟಿಫ್ ಸೇರಿದಂತೆ ಪ್ಯಾಲೆಸ್ಟೀನಿಯಾದೊಂದಿಗಿನ ಐಕಮತ್ಯವನ್ನು ಸಂಕೇತಿಸುವ ಲಾಂಛನಗಳನ್ನು ಒಳಗೊಂಡಿತ್ತು. ಪ್ರಿಯಾಂಕ ಗಾಂಧಿ ಪ್ಯಾಲೆಸ್ಟೀನಿಯನ್ ನ ದೀರ್ಘಾವಧಿಯ ಪ್ರತಿಪಾದಕರಾಗಿದ್ದಾರೆ ಮತ್ತು ಗಾಜಾದಲ್ಲಿನ ಸಂಘರ್ಷಕ್ಕೆ ತಮ್ಮ ವಿರೋಧವನ್ನು ಬಲವಾಗಿ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರು ಸಂಸತ್ತಿನ ಆವರಣದಲ್ಲಿ ಬ್ಯಾಗ್ ಸುತ್ತುತ್ತಿರುವ ಫೋಟೋವನ್ನು ಕಾಂಗ್ರೆಸ್ ವಕ್ತಾರ ಶಾಮಾ ಮೊಹಮ್ಮದ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಬಿಜೆಪಿ ನಾಯಕ ಸಂಬಿತ್ ಪಾತ್ರ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

"ಗಾಂಧಿ ಕುಟುಂಬ ಯಾವಾಗಲೂ ತುಷ್ಟೀಕರಣದ ಬ್ಯಾಗ್ ನ್ನು ಹೊತ್ತಿದೆ. ಚುನಾವಣೆಯಲ್ಲಿ ಅವರ ಸೋಲಿಗೆ ತುಷ್ಟೀಕರಣದ ಚೀಲವೇ ಕಾರಣ" ಎಂದು ಪತ್ರಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಪ್ಯಾಲೆಸ್ಟೈನ್ ರಾಯಭಾರಿ ಕಚೇರಿಯ ಉಸ್ತುವಾರಿ ಅಬೇದ್ ಎಲ್ರಾಜೆಗ್ ಅಬು ಜಝರ್ ಅವರೊಂದಿಗಿನ ಸಭೆಯ ಸಂದರ್ಭದಲ್ಲಿ ಪ್ರಿಯಾಂಕ ಗಾಂಧಿ ಕಪ್ಪು-ಬಿಳುಪು ಕೆಫಿಯೆಹ್ (ಸಾಂಪ್ರದಾಯಿಕ ಪ್ಯಾಲೆಸ್ಟೀನಿಯಾದ ಸ್ಕಾರ್ಫ್) ಧರಿಸಿದ್ದರು. ಈ ಘಟನೆಯ ಕೆಲವು ದಿನಗಳ ನಂತರ ಪ್ರಿಯಾಂಕ ಗಾಂಧಿ ವಾದ್ರ ಪ್ಯಾಲೆಸ್ತೇನ್ ಬ್ಯಾಗ್ ಧರಿಸಿ ಬಂದಿದ್ದಾರೆ.

ಪ್ಯಾಲೆಸ್ತೇನ್ ಗೆ ಬೆಂಬಲ ವ್ಯಕ್ತಪಡಿಸುತ್ತಿರುವ ಪ್ರಿಯಾಂಕ ವಾದ್ರ, ಆಗಾಗ್ಗೆ ಇಸ್ರೇಲ್‌ನಲ್ಲಿ ನೆತನ್ಯಾಹು ಸರ್ಕಾರವನ್ನು ದೂಷಿಸುತ್ತಿರುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

SCROLL FOR NEXT