ಪ್ರಧಾನಿ ಮೋದಿ ಭೇಟಿಯಾದ ಶ್ರೀಲಂಕಾ ಅಧ್ಯಕ್ಷ ಅನುರಾ ದಿಸ್ಸಾನಾಯಕೆ  
ದೇಶ

ನವದೆಹಲಿ: ಪ್ರಧಾನಿ ಮೋದಿ ಭೇಟಿಯಾದ ಶ್ರೀಲಂಕಾ ಅಧ್ಯಕ್ಷ ಅನುರಾ ದಿಸ್ಸಾನಾಯಕೆ; ಆರ್ಥಿಕ ನೆರವು ನೀಡಿದ ಭಾರತಕ್ಕೆ ಕೃತಜ್ಞತೆ!

ನನ್ನ ಮೊದಲ ವಿದೇಶ ಭೇಟಿಯಲ್ಲಿ ದೆಹಲಿಗೆ ಬರಲು ಸಂತೋಷವಾಗಿದೆ. ನನ್ನನ್ನು ಆಹ್ವಾನಿಸಿದ್ದಕ್ಕೆ ಭಾರತಕ್ಕೆ ಧನ್ಯವಾದ ಹೇಳುತ್ತೇನೆ.

ನವದೆಹಲಿ: ಶ್ರೀಲಂಕಾ ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಅವರು ಅಧಿಕಾರ ಸ್ವೀಕರಿಸಿದ ಬಳಿಕ ತಮ್ಮ ಮೊದಲ ವಿದೇಶಿ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ಭೇಟಿಯಾದರು. ಮುಂದಿನ ತಿಂಗಳು ಚೀನಾಕ್ಕೆ ತೆರಳಲಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗಿನ ಅವರ ಸಭೆಯಲ್ಲಿ 4 ಬಿಲಿಯನ್ ಡಾಲರ್ ಆರ್ಥಿಕ ಸಹಾಯಕ್ಕಾಗಿ ಭಾರತಕ್ಕೆ ದಿಸ್ಸಾನಾಯಕೆ ಧನ್ಯವಾದ ಹೇಳಿದರು. ಶ್ರೀಲಂಕಾದ ಸಾಲ ಪುನರ್ ರಚನೆ ಪ್ರಕ್ರಿಯೆಯಲ್ಲಿ ಭಾರತದ ಬೆಂಬಲವನ್ನು ಒಪ್ಪಿಕೊಂಡರು.

ಪ್ರಧಾನಿ ಮೋದಿ ಅವರನ್ನು ಸೋಮವಾರ ಭೇಟಿ ಮಾಡಿದ ಬಳಿಕ ಮಾತನಾಡಿದ ದಿಸ್ಸಾನಾಯಕೆ, "ನನ್ನ ಮೊದಲ ವಿದೇಶ ಭೇಟಿಯಲ್ಲಿ ದೆಹಲಿಗೆ ಬರಲು ಸಂತೋಷವಾಗಿದೆ. ನನ್ನನ್ನು ಆಹ್ವಾನಿಸಿದ್ದಕ್ಕೆ ಭಾರತಕ್ಕೆ ಧನ್ಯವಾದ ಹೇಳುತ್ತೇನೆ. ಈ ಭೇಟಿಯು ನಮ್ಮ ಉಭಯ ರಾಷ್ಟ್ರಗಳ ನಡುವಿನ ಸಹಕಾರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ದಾರಿ ಮಾಡಿಕೊಟ್ಟಿದೆ ಎಂದು ಹೇಳಿದರು.

ಶ್ರೀಲಂಕಾದ ಸಾಲ ಪುನರ್ ರಚನೆ ಪ್ರಕ್ರಿಯೆಯಲ್ಲಿ ಭಾರತದ ನಿರ್ಣಾಯಕ ನೆರವು ಮತ್ತು 20. 66 ಮಿಲಿಯನ್ ಡಾಲರ್ ಆರ್ಥಿಕ ನೆರವಿನ ವಿಸ್ತರಣೆಗಾಗಿ ಭಾರತಕ್ಕೆ ಧನ್ಯವಾದ ತಿಳಿಸಿದ ದಿಸಾನಾಯಕೆ, ಇದರಿಂದ ಸಂಕಷ್ಟದ ಸಮಯದಲ್ಲಿ ಸಾಲದ ಹೊರೆ ಕಡಿಮೆಯಾಗಿದೆ ಎಂದರು.

ಇದೇ ವೇಳೆ ಮಾತನಾಡಿದ ಪ್ರಧಾನಿ ಮೋದಿ, ದಿಸ್ಸಾನಾಯಕೆ ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಭೇಟಿಗಾಗಿ ಭಾರತವನ್ನು ಆಯ್ಕೆ ಮಾಡಿಕೊಂಡಿರುವುದು ತಮ್ಮಗೆ ಸಂತಸವನ್ನುಂಟು ಮಾಡಿದೆ. ನಮ್ಮ ಪಾಲುದಾರಿಕೆಗೆ ಭವಿಷ್ಯದ ದೃಷ್ಟಿಕೋನವಿದೆ. ಮೀನುಗಾರರ ಸಮಸ್ಯೆಗಳನ್ನು ಮಾನವೀಯ ದೃಷ್ಟಿಕೋನದಿಂದ ಪರಿಹರಿಸಲಾಗುವುದು ಮತ್ತು ಶ್ರೀಲಂಕಾ ಸರ್ಕಾರ ತಮಿಳು ಜನರ ಆಶೋತ್ತರ ಪೂರೈಸುತ್ತದೆ ಮತ್ತು ಪ್ರಾಂತೀಯ ಕೌನ್ಸಿಲ್ ಚುನಾವಣೆ ನಡೆಸುವ ವಿಶ್ವಾಸವಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT