ಗಾಯಕ ಟಿಎಂ ಕೃಷ್ಣ 
ದೇಶ

ಗಾಯಕ ಟಿಎಂ ಕೃಷ್ಣರನ್ನು ಸುಬ್ಬುಲಕ್ಷ್ಮಿ ಪ್ರಶಸ್ತಿ ಪುರಸ್ಕೃತರೆಂದು ಗುರುತಿಸಬಾರದು: ಸುಪ್ರೀಂ ಕೋರ್ಟ್

ಪ್ರಶಸ್ತಿಯನ್ನು ಈಗಾಗಲೇ ಕೃಷ್ಣ ಅವರಿಗೆ ಪ್ರದಾನ ಮಾಡಲಾಗಿದೆ. ಹೀಗಾಗಿ ಅವರನ್ನು ಎಂ.ಎಸ್. ಸುಬ್ಬುಲಕ್ಷ್ಮಿ ಪ್ರಶಸ್ತಿಗೆ ಭಾಜನರಾದವರು ಎಂದು ಗುರುತಿಸುವುದು ಬೇಡ.

ನವದೆಹಲಿ: ಖ್ಯಾತ ಕರ್ನಾಟಕ ಸಂಗೀತ ಗಾಯಕ ಟಿ.ಎಂ ಕೃಷ್ಣ ಅವರನ್ನು ಎಂ.ಎಸ್. ಸುಬ್ಬುಲಕ್ಷ್ಮಿ ಪ್ರಶಸ್ತಿ ಪುರಸ್ಕೃತರು ಎಂದು ಗುರುತಿಸಬಾರದು ಸುಪ್ರೀಂ ಕೋರ್ಟ್ ಸೋಮವಾರ ತನ್ನ ಮಧ್ಯಂತರ ಆದೇಶದಲ್ಲಿ ಹೇಳಿದೆ.

ದಿವಂಗತ ಗಾಯಕಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಆರೋಪದ ಮೇರೆಗೆ ಅವರ ಹೆಸರಿನಲ್ಲಿ ಕೃಷ್ಣ ಅವರಿಗೆ ಪ್ರಶಸ್ತಿ ನೀಡಬಾರದು ಎಂದು ಅವರ ಮೊಮ್ಮಗ ವಿ.ಶ್ರೀನಿವಾಸನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್.ವಿ.ಎನ್. ಭಟ್ಟಿ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ನೀಡಿದೆ.

ಎಲ್ಲಾ ಸಂಗೀತ ಅಭಿಮಾನಿಗಳು ಆರಾಧಿಸುವ ಎಂ.ಎಸ್. ಸುಬ್ಬುಲಕ್ಷ್ಮಿ ಅವರಿಗೆ ನ್ಯಾಯಾಲಯವು ಗೌರವ ಸಲ್ಲಿಸುತ್ತದೆ. ಅವರು ವಿಶಿಷ್ಟ ಗಾಯಕರು. ಅವರು ಡಿಸೆಂಬರ್ 2004ರಲ್ಲಿ ನಿಧನರಾದರೂ ಅವರ ಸುಮಧುರ ಕಂಠಸಿರಿಯನ್ನು ಕೇಳಿ ಅಭಿಮಾನಿಗಳು ಆನಂದಪಡುವುದನ್ನು ಮುಂದುವರೆಸಿದ್ದಾರೆ. ಪ್ರಶಸ್ತಿಯನ್ನು ಈಗಾಗಲೇ ಕೃಷ್ಣ ಅವರಿಗೆ ಪ್ರದಾನ ಮಾಡಲಾಗಿದೆ. ಹೀಗಾಗಿ ಅವರನ್ನು ಎಂ.ಎಸ್. ಸುಬ್ಬುಲಕ್ಷ್ಮಿ ಪ್ರಶಸ್ತಿಗೆ ಭಾಜನರಾದವರು ಎಂದು ಗುರುತಿಸುವುದು ಬೇಡ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಗಾಯಕ ಕೃಷ್ಣ, ಮ್ಯೂಸಿಕ್ ಅಕಾಡೆಮಿ, ದಿ ಹಿಂದೂ ಮತ್ತು ಟಿಹೆಚ್ ಜಿ ಪಬ್ಲಿಕೇಷನ್ ಲಿಮೆಟೆಡ್ ಗೆ ನ್ಯಾಯಪೀಠ ನೋಟಿಸ್ ನೀಡಿದ್ದು, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT