ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ 
ದೇಶ

ಮುಂದಿನ ವರ್ಷ ಫೆಬ್ರವರಿಯಲ್ಲಿ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ ಸಾಧ್ಯತೆ

ಪ್ರಸ್ತುತ ಕೇಂದ್ರ ಆರೋಗ್ಯ ಸಚಿವರೂ ಆಗಿರುವ ಜೆಪಿ ನಡ್ಡಾ ಅವರು ಫೆಬ್ರವರಿ 2020 ರಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

ನವದೆಹಲಿ: ಮುಂದಿನ ವರ್ಷ ಫೆಬ್ರವರಿ ಅಂತ್ಯದ ವೇಳೆಗೆ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಈಗ ನಡೆಯುತ್ತಿರುವ ಕೇಸರಿ ಪಕ್ಷದ ಸಾಂಸ್ಥಿಕ ಚುನಾವಣೆಯು ಜನವರಿ ಮಧ್ಯದ ವೇಳೆಗೆ ಅರ್ಧಕ್ಕಿಂತ ಹೆಚ್ಚು ರಾಜ್ಯ ಘಟಕಗಳಲ್ಲಿ ಮತದಾನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದು ಪಕ್ಷದ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡುತ್ತದೆ.

ಬಿಜೆಪಿಯ ಸುಮಾರು ಶೇ. 60 ರಷ್ಟು ರಾಜ್ಯ ಘಟಕದ ಅಧ್ಯಕ್ಷರ ಅಧಿಕಾರಾವಧಿ ಮುಗಿದಿದ್ದು, ಮುಂದಿನ ತಿಂಗಳು ರಾಜ್ಯ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆಯಿದೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಬಿಜೆಪಿಯ ಸಂವಿಧಾನವು ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗುವ ಮುನ್ನ, ಕನಿಷ್ಠ ಅರ್ಧದಷ್ಟು ರಾಜ್ಯ ಘಟಕಗಳಲ್ಲಿ ಸಾಂಸ್ಥಿಕ ಚುನಾವಣೆಗಳನ್ನು ಪೂರ್ಣಗೊಳಿಸಬೇಕು ಎಂಬ ಷರತ್ತು ವಿಧಿಸಲಾಗಿದೆ.

"ಫೆಬ್ರವರಿ ಅಂತ್ಯದ ವೇಳೆಗೆ ಹೊಸ ಬಿಜೆಪಿ ಅಧ್ಯಕ್ಷರು ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ" ಎಂದು ಅವರು ತಿಳಿಸಿದ್ದಾರೆ.

ಬಿಜೆಪಿಯ ನೂತನ ಅಧ್ಯಕ್ಷರು ಪ್ರಸ್ತುತ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಯಾಗಬಹುದೇ ಎಂಬ ಪ್ರಶ್ನೆಗೆ, ಅದು ಸರ್ಕಾರದಿಂದ ಆಗಿರಬಹುದು ಅಥವಾ ಸಂಘಟನೆಯಿಂದ ಆಗಿರಬಹುದು, ಇನ್ನೂ ಯಾವುದನ್ನೂ ಅಂತಿಮಗೊಳಿಸಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಕೇಂದ್ರ ಆರೋಗ್ಯ ಸಚಿವರೂ ಆಗಿರುವ ಜೆಪಿ ನಡ್ಡಾ ಅವರು ಫೆಬ್ರವರಿ 2020 ರಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT