ದೇಶ

ಕಾಂಗ್ರೆಸ್ ಬಾಯಿ ಬಡಿದುಕೊಳ್ಳುವುದು ನಿಲ್ಲಿಸಲಿ; ವೀರ ಸಾವರ್ಕರ್​ಗೆ 'ಭಾರತ ರತ್ನ' ನೀಡುವಂತೆ ಉದ್ಧವ್ ಠಾಕ್ರೆ ಬೇಡಿಕೆ!

ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ಯಾವಾಗ ನೀಡುತ್ತೀರಿ ಎಂದು ಬಿಜೆಪಿಯನ್ನು ಪ್ರಶ್ನಿಸಿದರು. ವೀರ್ ಸಾವರ್ಕರ್ ಅವರ ಬಗ್ಗೆ ನಾನು ಕೇಳಲು ಬಯಸುತ್ತೇನೆ. ಅವರಿಗೆ ಭಾರತ ರತ್ನ ಏಕೆ ನೀಡಬಾರದು ಎಂದು ಪ್ರಶ್ನಿಸಿದರು.

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಹಿಂದುತ್ವ ಸಿದ್ಧಾಂತವಾದಿ ವೀರ್ ಸಾವರ್ಕರ್ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಬೇಕೆಂಬ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಮಂಗಳವಾರ ನಾಗ್ಪುರಕ್ಕೆ ಬಂದಿದ್ದ ಠಾಕ್ರೆ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ಯಾವಾಗ ನೀಡುತ್ತೀರಿ ಎಂದು ಬಿಜೆಪಿಯನ್ನು ಪ್ರಶ್ನಿಸಿದರು. ವೀರ್ ಸಾವರ್ಕರ್ ಅವರ ಬಗ್ಗೆ ನಾನು ಕೇಳಲು ಬಯಸುತ್ತೇನೆ. ಅವರಿಗೆ ಭಾರತ ರತ್ನ ಏಕೆ ನೀಡಬಾರದು ಎಂದು ಪ್ರಶ್ನಿಸಿದರು. ದೇವೇಂದ್ರ ಫಡ್ನವೀಸ್ ಅವರು ಸಿಎಂ ಆಗಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಬೇಡಿಕೆಗೆ ಸಂಬಂಧಿಸಿದಂತೆ ಪತ್ರ ಬರೆದಿದ್ದರು. ಆದರೆ ಅದು ಏನಾಯಿತು? ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ಇನ್ನೂ ಕೊಟ್ಟಿಲ್ಲ. ಇದೀಗ ಫಡ್ನವಿಸ್ ಮತ್ತೆ ಮುಖ್ಯಮಂತ್ರಿಯಾಗಿದ್ದಾರೆ. ಒಂದು ವೇಳೆ ಭಾರತ ರತ್ನ ನೀಡಿದ್ದರೆ ವೀರ್ ಸಾವರ್ಕರ್ ಅವರ ಬಗ್ಗೆ ಮಾತನಾಡಲು ಬಿಜೆಪಿಗೆ ಯಾವುದೇ ಹಕ್ಕಿಲ್ಲ ಎಂದು ಠಾಕ್ರೆ ಹೇಳಿದರು.

ಕಾಂಗ್ರೆಸ್ ಅನ್ನು ಗುರಿಯಾಗಿಸಿ ಮಾತನಾಡಿದ ಮಾಜಿ ಸಿಎಂ, ಕಾಂಗ್ರೆಸ್ ಮತ್ತು ಬಿಜೆಪಿ ಎರಡಕ್ಕೂ ನಾನು ಹೇಳುವುದೇನೆಂದರೆ ಕಾಂಗ್ರೆಸ್ಸಿಗರು ವೀರ್ ಸಾವರ್ಕರ್ ವಿರುದ್ಧ ಮಾತನಾಡುವುದನ್ನು ನಿಲ್ಲಿಸಬೇಕು ಮತ್ತು ಬಿಜೆಪಿ ನೆಹರೂ ಅವರನ್ನು ಗುರಿಯಾಗಿಸುವುದನ್ನು ಬಿಡಬೇಕು ಎಂದರು. ಭೂತಕಾಲದ ಬಗ್ಗೆ ಯೋಚಿಸುವ ಬದಲು ನಾವು ಭವಿಷ್ಯವನ್ನು ನಿರ್ಮಿಸುವತ್ತ ಗಮನಹರಿಸಬೇಕು. ಇಬ್ಬರೂ ನಾಯಕರು ಯಾವುದೇ ನಿರ್ಧಾರ ತೆಗೆದುಕೊಳ್ಳಲಿ. ಅವರ ಕಾಲದಲ್ಲಿ ಮಾಡಿರುವುದು ಅವರ ಯುಗಕ್ಕೆ ಸೂಕ್ತವಾಗಿದೆ. ಆದ್ದರಿಂದ ಪ್ರಧಾನಿ ಮೋದಿ ಅವರು ನೆಹರೂ ಅವರ ಹೆಸರನ್ನು ಪದೇ ಪದೇ ಹೇಳುವುದನ್ನು ನಿಲ್ಲಿಸಬೇಕು ಎಂದರು.

ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ನೀಡಬೇಕೆಂಬ ಠಾಕ್ರೆ ಅವರ ಬೇಡಿಕೆಗೆ ರಾಜಕೀಯ ಮಿತ್ರರು ಮತ್ತು ಪ್ರತಿಸ್ಪರ್ಧಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿವೆ. ಮಹಾರಾಷ್ಟ್ರದಲ್ಲಿ ಠಾಕ್ರೆಯ ಪ್ರಮುಖ ಮಿತ್ರ ಪಕ್ಷವಾಗಿರುವ ಶರದ್ ಪವಾರ್ ಅವರ ಎನ್‌ಸಿಪಿ ಈ ವಿಷಯದ ಬಗ್ಗೆ ಮೌನವಹಿಸಿದೆ. ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್, ಉದ್ಧವ್ ಠಾಕ್ರೆ ಒತ್ತಾಯಿಸಿರುವುದೇನು ಎಂದು ನನಗೆ ತಿಳಿದಿಲ್ಲ, ಹಾಗಾಗಿ ನಾನು ಅದರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.

ಮತ್ತೊಂದೆಡೆ, ಏಕನಾಥ್ ಶಿಂಧೆ ಅವರ ಶಿವಸೇನೆ, ಠಾಕ್ರೆ ಅವರ ನಿಲುವನ್ನು ಟೀಕಿಸಿದೆ. ಪಕ್ಷದ ನಾಯಕ ಮತ್ತು ಕ್ಯಾಬಿನೆಟ್ ಸಚಿವ ಭರತ್ ಗೋಗಾವಲೆ, "ಉದ್ಧವ್ ಠಾಕ್ರೆ ಅವರು ಬೇಡಿಕೆ ಇಟ್ಟಿದ್ದಾರೆ. ಅದು ಸರಿ, ವೀರ್ ಸಾವರ್ಕರ್‌ಗೆ ಭಾರತ ರತ್ನ ನೀಡುವ ವಿಷಯದಲ್ಲಿ ಮಹಾಯುತಿಯ ನಾಯಕರು ಸಾಮೂಹಿಕವಾಗಿ ನಿರ್ಧರಿಸುತ್ತಾರೆ. ಆದರೆ, ಹಿಂದುತ್ವವನ್ನು ತೊರೆದ ಉದ್ಧವ್ ಠಾಕ್ರೆ, ವೀರ್ ಸಾವರ್ಕರ್ ಬಗ್ಗೆ ಮಾತನಾಡುವ ಹಕ್ಕು ಇಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 ವಿಶ್ವಕಪ್ 2026: ವಿಂಡೀಸ್ ವಿರುದ್ಧ 196 ರನ್ ದಾಖಲೆಯ ರನ್ ಚೇಸ್; ಸೆಮಿಫೈನಲ್‌ಗೆ ಭಾರತ ಎಂಟ್ರಿ!

ಒಂದೇ ದಾಳಿಯಲ್ಲಿ ಖಮೇನಿ ಸೇರಿ 48 ಇರಾನಿನ ನಾಯಕರ ಹತ್ಯೆ: ಟ್ರಂಪ್ ಘೋಷಣೆ

ಕನ್ನಡಿಗರ ರಕ್ಷಣೆ ನಮ್ಮ ಆದ್ಯತೆ: ಸಹಾಯವಾಣಿ ಪ್ರಾರಂಭಿಸಿದ ರಾಜ್ಯ ಸರ್ಕಾರ! ಮಾಹಿತಿ ಇಲ್ಲಿದೆ...

ನಮ್ಮ ಪ್ರತೀಕಾರ ಭೀಕರವಾಗಿರುತ್ತೇ: ಖಮೇನಿ ಸಾವಿನ ಬೆನ್ನಲ್ಲೇ ಜಮ್ಕರನ್ ಮಸೀದಿ ಮೇಲೆ ಕೆಂಪು ಧ್ವಜ ಹಾರಾಟ, ಇಸ್ರೇಲ್ ಕಟ್ಟಡಗಳು ಧ್ವಂಸ!

ಸೆಮಿಸ್ ನಿರ್ಣಾಯಕ ಪಂದ್ಯದಲ್ಲಿ ಭಾರತ ಕಳಪೆ ಫೀಲ್ಡಿಂಗ್; 195 ರನ್ ಬಾರಿಸಿದ ವೆಸ್ಟ್ ಇಂಡೀಸ್!

SCROLL FOR NEXT