ಮನೋಜ್ ಜಾರಂಗೆ 
ದೇಶ

ಮರಾಠ ಮೀಸಲಾತಿ: ಜನವರಿ 25ರಿಂದ ಜಾರಂಗೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ಯಾರೂ ಮನೆಯಲ್ಲಿ ಇರಬೇಡಿ. ಎಲ್ಲರೂ ಅಂತವಾಳಿ ಸಾರ್ತಿಗೆ ಬನ್ನಿ, ನಮ್ಮ ಶಕ್ತಿ ತೋರಿಸೋಣ ಎಂದು ಕರೆ ನೀಡಿದರು.

ಜಾಲ್ನಾ: ಮರಾಠರಿಗೆ ಒಬಿಸಿ ಕೋಟಾದಡಿಯಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಜನವರಿ 25, 2025 ರಂದು ಅನಿರ್ದಿಷ್ಟ ಉಪವಾಸ ಆರಂಭಿಸುವುದಾಗಿ ಹೋರಾಟಗಾರ ಮನೋಜ್ ಜಾರಂಗೆ ಅವರು ಮಂಗಳವಾರ ಘೋಷಿಸಿದ್ದಾರೆ.

ಇಂದು ಮಹಾರಾಷ್ಟ್ರದ ಜಾಲ್ನಾದ ಅಂತರವಾಳಿ ಸಾರ್ತಿ ಗ್ರಾಮದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಜಾರಂಗೆ, ಮರಾಠಾ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಾ ಸ್ಥಳದಲ್ಲಿ ಜಮಾಯಿಸುವಂತೆ ಮನವಿ ಮಾಡಿದರು.

ಯಾರೂ ಮನೆಯಲ್ಲಿ ಇರಬೇಡಿ. ಎಲ್ಲರೂ ಅಂತವಾಳಿ ಸಾರ್ತಿಗೆ ಬನ್ನಿ, ನಮ್ಮ ಶಕ್ತಿ ತೋರಿಸೋಣ ಎಂದು ಕರೆ ನೀಡಿದರು.

ಕೃಷಿಕ ಕುಂಬಿ ಸಮುದಾಯವು ಈಗಾಗಲೇ OBC ವರ್ಗದ ಅಡಿಯಲ್ಲಿ ಮೀಸಲಾತಿ ಪ್ರಯೋಜನಗಳನ್ನು ಪಡೆಯುತ್ತಿದೆ.

ಆದಾಗ್ಯೂ ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಜಾರಂಗೆ, ‘ಸರ್ಕಾರ ನಮಗೆ ಮೋಸ ಮಾಡಿದೆ. ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ನಾವು ಅವರನ್ನು ಬಿಡುವುದಿಲ್ಲ’ ಎಂದರು.

42 ವರ್ಷದ ಮನೋಜ್​ ಜಾರಂಗೆ ಅವರು 2023ರ ಆಗಸ್ಟ್​ 9 ರಿಂದ ಮರಾಠಾ ಮೀಸಲಾತಿಯ ವಿಷಯವಾಗಿ ಪದೇ ಪದೇ ಉಪವಾಸ ಸತ್ಯಾಗ್ರಹಗಳನ್ನು ನಡೆಸುತ್ತಿದ್ದಾರೆ. ಇದು ಜಾರಂಗೆ ಅವರ ಆರನೇ ಉಪವಾಸ ಸತ್ಯಾಗ್ರಹವಾಗಿದೆ. ಮೊದಲು 17 ದಿನಗಳ ಕಾಲ ಉಪವಾಸ ಸತ್ಯಾಗ್ರಹ ಮಾಡಿದ್ದರು.

ಕಳೆದ ಒಂದು ವರ್ಷದಲ್ಲಿ ಆರು ಉಪವಾಸ ಸತ್ಯಾಗ್ರಹಗಳನ್ನು ಕೈಗೊಂಡಿರುವ ಜಾರಂಗೆ ಅವರು, ಈ ಉಪವಾಸ ಸ್ವಯಂಪ್ರೇರಿತವಾಗಿರುತ್ತದೆ ಮತ್ತು ಮರಾಠ ಸಮುದಾಯದ ಯಾವುದೇ ಸದಸ್ಯರು ಭಾಗವಹಿಸಬಹುದು ಎಂದು ಒತ್ತಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT