ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ಸಂಸತ್ತಿಗೆ 'ಬಾಂಗ್ಲಾದೇಶದ ಹಿಂದೂಗಳು ಮತ್ತು ಕ್ರಿಶ್ಚಿಯನ್ನರೊಂದಿಗೆ ನಿಂತುಕೊಳ್ಳಿ' ಎಂಬ ಸಂದೇಶವನ್ನು ಹೊಂದಿರುವ ಬ್ಯಾಗ್ ನ್ನು ಹೊತ್ತು ತಂದರು.  
ದೇಶ

ಬಾಂಗ್ಲಾದೇಶ ಅಲ್ಪಸಂಖ್ಯಾತರಿಗೆ ಬೆಂಬಲ ಸೂಚಿಸುವ ಬ್ಯಾಗ್ ನೊಂದಿಗೆ ಆಗಮನ: ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ

'ಸ್ಟ್ಯಾಂಡ್ ವಿತ್ ಮೈನಾರಿಟೀಸ್ ಬಾಂಗ್ಲಾದೇಶ' ಎಂದು ಬರೆದಿರುವ ಕೈಚೀಲಗಳೊಂದಿಗೆ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.

ನವದೆಹಲಿ: ಬಾಂಗ್ಲಾದೇಶದಲ್ಲಿ ದೌರ್ಜನ್ಯ ಎದುರಿಸುತ್ತಿರುವ ಹಿಂದೂಗಳು ಮತ್ತು ಕ್ರಿಶ್ಚಿಯನ್ನರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರು ಮಂಗಳವಾರ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

'ಸ್ಟ್ಯಾಂಡ್ ವಿತ್ ಮೈನಾರಿಟೀಸ್ ಬಾಂಗ್ಲಾದೇಶ' ಎಂದು ಬರೆದಿರುವ ಕೈಚೀಲಗಳೊಂದಿಗೆ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಸಂಸತ್ತಿಗೆ ಕೆನೆ ಬಣ್ಣದ ಕೈಚೀಲವನ್ನು ಹೊತ್ತುಕೊಂಡು ಆಗಮಿಸಿದ್ದರು. ಅದರ ಮೇಲೆ "ಬಾಂಗ್ಲಾದೇಶ ಕೆ ಹಿಂದೂ ಔರ್ ಇಸೈಯೋಂ ಕೆ ಸಾಥ್ ಖಡೇ ಹೋ" (ಬಾಂಗ್ಲಾದೇಶದ ಹಿಂದೂಗಳು ಮತ್ತು ಕ್ರಿಶ್ಚಿಯನ್ನರೊಂದಿಗೆ ನಿಂತುಕೊಳ್ಳಿ) ಎಂದು ಬರೆಯಲಾಗಿದೆ.

ಪ್ಯಾಲೆಸ್ತೀನಿಯರನ್ನು ಬೆಂಬಲಿಸಿ ನಿನ್ನೆ ಪ್ರಿಯಾಂಕಾ ಗಾಂಧಿ ಸಂಸತ್ತಿಗೆ, 'ಪ್ಯಾಲೆಸ್ತೀನ್' ಎಂದು ಬರೆದಿದ್ದ ಬ್ಯಾಗ್ ನ್ನು ಹಿಡಿದುಕೊಂಡು ಬಂದಿದ್ದು ವ್ಯಾಪಕವಾಗಿ ಸುದ್ದಿಯಾಗಿತ್ತು. ಬಾಂಗ್ಲಾದೇಶದಲ್ಲಿ ದೌರ್ಜನ್ಯ ಎದುರಿಸುತ್ತಿರುವ ಹಿಂದೂಗಳು ಮತ್ತು ಕ್ರೈಸ್ತರಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಹಲವು ಕಾಂಗ್ರೆಸ್ ಸಂಸದರು ನಿನ್ನೆಯೂ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದರು.

ನಿನ್ನೆ ಶೂನ್ಯವೇಳೆಯಲ್ಲಿ ಲೋಕಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಬಾಂಗ್ಲಾದೇಶದ ದಾಳಿಯಿಂದ ನೊಂದವರಿಗೆ ಸರ್ಕಾರದ ಬೆಂಬಲ ಕೋರಿದ್ದರು.

ಸರ್ಕಾರವು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು, ಹಿಂದೂಗಳು ಮತ್ತು ಕ್ರಿಶ್ಚಿಯನ್ನರ ಮೇಲಿನ ದೌರ್ಜನ್ಯದ ವಿಷಯವನ್ನು ಎತ್ತಬೇಕು. ಅದು ಬಾಂಗ್ಲಾದೇಶ ಸರ್ಕಾರದೊಂದಿಗೆ ಚರ್ಚಿಸಬೇಕು ಮತ್ತು ನೋವಿನಲ್ಲಿರುವವರಿಗೆ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್