ಛಗನ್ ಭುಜಬಲ್ 
ದೇಶ

ಸಂಪುಟ ವಿಸ್ತರಣೆಗೂ ಮುನ್ನ ರಾಜ್ಯಸಭಾ ಸ್ಥಾನದ ಆಫರ್ ನೀಡಲಾಗಿತ್ತು: NCP ಹಿರಿಯ ನಾಯಕ ಛಗನ್ ಭುಜಬಲ್

ಕಳೆದ ತಿಂಗಳು ನಡೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವ ತನ್ನ ಕ್ಷೇತ್ರದ ಜನತೆಗೆ ದ್ರೋಹ ಬಗೆಯಬಾರದು ಎಂದು ರಾಜ್ಯಸಭಾ ಸ್ಥಾನದ ಆಫರ್ ತಿರಸ್ಕರಿಸಿದ್ದೇನೆ ಎಂದು ತಿಳಿಸಿದರು.

ನಾಗ್ಪುರ: ಮಹಾರಾಷ್ಟ್ರದ ನೂತನ ಮಹಾಯುತಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೆ ನಿರಾಶೆಗೊಂಡಿರುವ ಎನ್‌ಸಿಪಿ ಹಿರಿಯ ನಾಯಕ ಛಗನ್ ಭುಜಬಲ್ ಅವರು, ಎಂಟು ದಿನಗಳ ಹಿಂದೆ ನನಗೆ ರಾಜ್ಯಸಭಾ ಸ್ಥಾನದ ಆಫರ್ ನೀಡಲಾಗಿತ್ತು. ಆದರೆ ನಾನು ಅದನ್ನು ತಿರಸ್ಕರಿಸಿದೆ ಎಂದು ಮಂಗಳವಾರ ಹೇಳಿದ್ದಾರೆ.

ನಾಸಿಕ್ ಜಿಲ್ಲೆಯ ಯೋಲಾ ಶಾಸಕ ಭುಜಬಲ್ ನಾಗ್ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ತಿಂಗಳು ನಡೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವ ತನ್ನ ಕ್ಷೇತ್ರದ ಜನತೆಗೆ ದ್ರೋಹ ಬಗೆಯಬಾರದು ಎಂದು ರಾಜ್ಯಸಭಾ ಸ್ಥಾನದ ಆಫರ್ ತಿರಸ್ಕರಿಸಿದ್ದೇನೆ ಎಂದು ತಿಳಿಸಿದರು.

"ಈ ವರ್ಷದ ಆರಂಭದಲ್ಲಿ ನಾನು ರಾಜ್ಯಸಭೆಗೆ ಆಯ್ಕೆಯಾಗಲು ಬಯಸಿದಾಗ, ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಹೇಳಿದರು. ಈಗ ಗೆದ್ದ ನಂತರ ಎಂಟು ದಿನಗಳ ಹಿಂದೆ ನನಗೆ ಮತ್ತೆ ರಾಜ್ಯಸಭೆ ಸ್ಥಾನದ ಆಫರ್ ನೀಡಿದರು. ಆದರೆ ಅದನ್ನು ನಾನು ತಿರಸ್ಕರಿಸಿದೆ" ಎಂದು ಮಾಜಿ ಸಚಿವ ಹೇಳಿದ್ದಾರೆ.

ನನಗೆ ಸಚಿವ ಸ್ಥಾನ ನಿರಾಕರಿಸಿದ ನಂತರ ಎನ್‌ಸಿಪಿ ಮುಖ್ಯಸ್ಥ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರೊಂದಿಗೆ ಮಾತನಾಡಿಲ್ಲ ಎಂದು ಭುಜಬಲ್ ಹೇಳಿದರು.

ಪ್ರಮುಖ ಒಬಿಸಿ ನಾಯಕ, ಭುಜಬಲ್ ಅವರು ಮರಾಠ ಸಮುದಾಯಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಗಾಗಿ ಒತ್ತಾಯಿಸುತ್ತಿರುವ ಹೋರಾಟಗಾರ ಮನೋಜ್ ಜಾರಂಜ್ ಅವರನ್ನು ಬೆಂಬಲಿಸಿದ್ದಕ್ಕೆ ನನ್ನನ್ನು ಸಂಪುಟದಿಂದ ಹೊರಗಿಡಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT