ಅಮಿತ್ ಶಾ, ಪ್ರಕಾಶ್ ಅಂಬೇಡ್ಕರ್ ಸಾಂದರ್ಭಿಕ ಚಿತ್ರ 
ದೇಶ

ಅಮಿತ್ ಶಾ ಹೇಳಿಕೆ ಬಿಜೆಪಿಯ ಹಳೆಯ ಮನಸ್ಥಿತಿ ಪ್ರದರ್ಶನ ಎಂದ ಪ್ರಕಾಶ್ ಅಂಬೇಡ್ಕರ್!

ಬಿಜೆಪಿ ಅಸ್ತಿತ್ವಕ್ಕೆ ಬರುವ ಮೊದಲು ಅದರ ಮಾರ್ಗದರ್ಶಕರಾದ ಜನ ಸಂಘ ಹಾಗೂ ಆರ್ ಎಸ್ ಎಸ್ ಸಂವಿಧಾನವನ್ನು ಅಂಗೀಕರಿಸುವಾಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ವಿರೋಧಿಸಿದ್ದರು

ಪುಣೆ: ಸಂವಿಧಾನದ ಪಿತಾಮಹ ಡಾ. ಅಂಬೇಡ್ಕರ್ ಕುರಿತು ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ನಿನ್ನೆ ಆಡಿರುವ ಮಾತುಗಳು ಬಿಜೆಪಿಯ ಹಳೆಯ ಮನಸ್ಥಿತಿಯ ಪ್ರದರ್ಶನವಾಗಿದೆ ಎಂದು ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಬುಧವಾರ ಕಿಡಿಕಾರಿದ್ದಾರೆ.

ಅಂಬೇಡ್ಕರ್ ಕುರಿತ ಹೇಳಿಕೆ ಹಿನ್ನೆಲೆಯಲ್ಲಿ ಸಂಸತ್ ಹಾಗೂ ಸಾರ್ವಜನಿಕವಾಗಿ ಅಮಿತ್ ಶಾ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಸಂಸದರು ಪ್ರತಿಭಟನೆ ನಡೆಸುತ್ತಿರುವಂತೆಯೇ ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಕಾಶ್ ಅಂಬೇಡ್ಕರ್, ಬಿಜೆಪಿ ಅಸ್ತಿತ್ವಕ್ಕೆ ಬರುವ ಮೊದಲು ಅದರ ಮಾರ್ಗದರ್ಶಕರಾದ ಜನ ಸಂಘ ಹಾಗೂ ಆರ್ ಎಸ್ ಎಸ್ ಸಂವಿಧಾನವನ್ನು ಅಂಗೀಕರಿಸುವಾಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ವಿರೋಧಿಸಿದ್ದರು ಎಂದು ತಿಳಿಸಿದರು.

ಅಮಿತ್ ಶಾ ಅವರ ಹೇಳಿಕೆ ಬಿಜೆಪಿಯ ಹಳೆಯ ಮನಸ್ಥಿತಿಯನ್ನು ತೋರಿಸಿದೆ. ಅದರಲ್ಲಿ ಯಾವುದೇ ಹೊಸದು ಇಲ್ಲ. ಅಂಬೇಡ್ಕರ್ ಕಾರಣದಿಂದ ಅವರು ತಮ್ಮ ಹಳೆಯ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರನ್ನು ದೂಷಿಸುತ್ತಲೇ ಇದ್ದಾರೆ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದರು.

ಈ ಮಧ್ಯೆ ರಾಜ್ಯಸಭೆಯಲ್ಲಿ ಅಮಿತ್ ಶಾ ನೀಡಿರುವ ವಿಡಿಯೋ ತುಣುಕನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಳ್ಳುವ ಮೂಲಕ ಕೇಂದ್ರ ಗೃಹ ಸಚಿವರ ವಿರುದ್ಧ ಕಿಡಿಕಾರಿದ್ದಾರೆ. ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಿನ್ನೆ ರಾಜ್ಯಸಭೆಯಲ್ಲಿ ಸಂವಿಧಾನ ಅಂಗೀಕಾರವಾಗಿ 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಾತನಾಡಿದ್ದ ಅಮಿತ್ ಶಾ, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎಂದು ಹೇಳುವುದು ಈಗ ಪ್ಯಾಶನ್ ಆಗಿಬಿಟ್ಟಿದೆ. ಅದರ ಬದಲು ದೇವರ ಹೆಸರನ್ನು ಹಲವು ಸಲ ಹೇಳಿದ್ದರೆ ಸ್ವರ್ಗದಲ್ಲಿ ಸ್ಥಾನ ಪಡೆಯಬಹುದಿತ್ತು ಎಂದು ಹೇಳಿದ್ದರು. ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT