ಮೃತರು  
ದೇಶ

ಜಮ್ಮು-ಕಾಶ್ಮೀರ: ಕಥುವಾದಲ್ಲಿ ಮನೆಯೊಂದರಲ್ಲಿ ಬೆಂಕಿ; ಉಸಿರುಗಟ್ಟಿ ಮಾಜಿ ಡಿಎಸ್ಪಿ ಸೇರಿ ಆರು ಮಂದಿ ಸಾವು

ಕಥುವಾ ಜಿಲ್ಲೆಯ ಶಿವನಗರ ಪ್ರದೇಶದಲ್ಲಿ ಮನೆಯೊಂದರಲ್ಲಿ ಇದ್ದವರು ಮಲಗಿದ್ದಾಗ ದಟ್ಟ ಹೊಗೆ ತುಂಬಿಕೊಂಡು, ಮನೆಯೊಳಗೆ ಬೆಂಕಿ ಕಾಣಿಸಿಕೊಂಡಿದೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಮನೆಯೊಂದರಲ್ಲಿ ಬೆಂಕಿ ಹತ್ತಿ ಉಸಿರುಗಟ್ಟಿ ಮಾಜಿ ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅವರ ಮೂರು ವರ್ಷದ ಮೊಮ್ಮಗ ಸೇರಿದಂತೆ ಆರು ಜನರು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವ ಇತರ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ ಪ್ರಕಾರ, ಬೆಳಗಿನ ಜಾವ 2:30 ರ ಸುಮಾರಿಗೆ ಮನೆಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಅಲ್ಲಿನ ನಿವಾಸಿಗಳನ್ನು ರಕ್ಷಿಸಲು ಮುಂದಾದರು. ಮನೆಯಲ್ಲಿ ದಟ್ಟ ಹೊಗೆ ತುಂಬಿದ್ದರೂ ಮನೆಯವರೆಲ್ಲರೂ ನಿದ್ದೆಯಲ್ಲಿದ್ದ ಕಾರಣ ತಕ್ಷಣಕ್ಕೆ ಗೊತ್ತಾಗಲಿಲ್ಲ.

ಸಂತ್ರಸ್ತರನ್ನು ಕಥುವಾದಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು (GMC) ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು 81 ವರ್ಷದ ಮಾಜಿ ಉಪ ಎಸ್ಪಿ ಅವತಾರ್ ಕೃಷ್ಣ ರೈನಾ, ಅವರ ಮಗಳು ಬರ್ಖಾ ರೈನಾ (25), ಮಗ ತಕಾಶ್ (3), 17 ವರ್ಷದ ಗಂಗಾ ಭಗತ್, 15 ವರ್ಷದ ಡ್ಯಾನಿಶ್ ಭಗತ್ ಮತ್ತು 6 ವರ್ಷದ ಅದ್ವಿಕ್ ಎಂದು ಗುರುತಿಸಲಾಗಿದೆ.

ಗಾಯಗೊಂಡವರು ಮತ್ತು ಚಿಕಿತ್ಸೆ ಪಡೆಯುತ್ತಿರುವವರು 61 ವರ್ಷದ ಸ್ವರ್ಣ (ಅವತಾರ್ ಕೃಷ್ಣ ರೈನಾ ಅವರ ಪತ್ನಿ), ನೀತು ದೇವಿ (40), ಅರುಣ್ ಕುಮಾರ್ (15), ಮತ್ತು 69 ವರ್ಷದ ಮಹಿಳೆ ಎಂದು ಗುರುತಿಸಲಾಗಿದೆ.

ಆಸ್ಪತ್ರೆಯ ಪ್ರಾಂಶುಪಾಲ ಡಾ.ಸುರೀಂದರ್ ಅತ್ರಿ, ಹತ್ತು ಜನರನ್ನು ಆಸ್ಪತ್ರೆಗೆ ಕರೆತರಲಾಗಿತ್ತು, ಅವರಲ್ಲಿ ಆರು ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.

ಸಂತ್ರಸ್ತರು ಉಸಿರುಗಟ್ಟುವಿಕೆಯಿಂದ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಯಾವುದೇ ಸುಟ್ಟ ಗಾಯಗಳು ವರದಿಯಾಗಿಲ್ಲ ಎಂದು ಹೇಳಿದರು.

ಇದೊಂದು ದುರದೃಷ್ಟಕರ ಘಟನೆ. ಇತ್ತೀಚೆಗಷ್ಟೇ ನಿವೃತ್ತರಾದ ನಮ್ಮ ಸಹಾಯಕ ಮೇಟ್ರನ್ ಅವರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಘಟನೆಯು ಮಧ್ಯರಾತ್ರಿ 2 ರಿಂದ 3 ಗಂಟೆ ಮಧ್ಯೆ ಸಂಭವಿಸಿದೆ. ನಾನು ತಕ್ಷಣ ಪೊಲೀಸ್ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದೇನೆ ಎಂದು ವೈದ್ಯರು ತಿಳಿಸಿದರು.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT