ಲಕ್ಷ್ಮಣ ಸವದಿ , ಆದಿತ್ಯ ಠಾಕ್ರೆ 
ದೇಶ

ಮುಂಬೈ ಕೇಂದ್ರಾಡಳಿತ ಪ್ರದೇಶವಾಗಬೇಕು: ಲಕ್ಷ್ಮಣ ಸವದಿ ವಿರುದ್ಧ ಆದಿತ್ಯ ಠಾಕ್ರೆ ಕಿಡಿ!

ಮುಂಬೈಯನ್ನೂ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂಬ ಸವದಿ ಹೇಳಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಆದಿತ್ಯ ಠಾಕ್ರೆ..

ಮುಂಬೈ: ವಾಣಿಜ್ಯ ನಗರಿ ಮುಂಬೈ ಕ್ರೇಂದ್ರಾಡಳಿತ ಪ್ರದೇಶವಾಗಬೇಕು ಎಂಬ ಕರ್ನಾಟಕದ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ  ವಿರುದ್ಧ ಇಂಡಿಯಾ ಮೈತ್ರಿಕೂಟದ ಶಿವಸೇನಾ (ಯುಬಿಟಿ) ಶಾಸಕ ಆದಿತ್ಯ ಠಾಕ್ರೆ ಕಿಡಿಕಾರಿದ್ದಾರೆ.

ಮಹಾರಾಷ್ಟ್ರದ ನಾಯಕರು ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಹೇಳಿದ್ದಾರೆ. ಹಾಗಿದ್ದರೆ ಮುಂಬೈಯನ್ನೂ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂಬ ಸವದಿ ಹೇಳಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಆದಿತ್ಯ ಠಾಕ್ರೆ, ಮುಂಬೈಯನ್ನು ಮಹಾರಾಷ್ಟ್ರದಿಂದ ಬೇರ್ಪಡಿಸುವ ಯಾವುದೇ ಪ್ರಯತ್ನ ಸಹಿಸುವುದಿಲ್ಲ ಎಂದರು.

ಸವದಿ ಹೇಳಿಕೆಯನ್ನು ಖಂಡಿಸಿದ ಆದಿತ್ಯ ಠಾಕ್ರೆ, ಕಾಂಗ್ರೆಸ್ ಅಥವಾ ಬಿಜೆಪಿ ಯಾವುದೇ ಪಕ್ಷವಾಗಿರಲಿ, ಮುಂಬೈಯನ್ನು ಮಹಾರಾಷ್ಟ್ರದಿಂದ ಬೇರ್ಪಡಿಸುವ ಪ್ರಯತ್ನವನ್ನು ಶಿವಸೇನಾ (ಯುಬಿಟಿ) ಸಹಿಸುವುದಿಲ್ಲ. ಮುಂಬೈ ನಮ್ಮ ಜನ್ಮಭೂಮಿ. ಮರಾಠರು ಅದನ್ನು ರಕ್ತನೀಡಿ ಕಟ್ಟಿದ್ದಾರೆ. ನಮಗೆ ಮುಂಬೈಯನ್ನೂ ಯಾರೂ ಕೊಟ್ಟಿಲ್ಲ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ ಎನ್ ಸಿಪಿ (ಎಸ್ ಪಿ) ಹಾಗೂ ಶಿವಸೇನಾ (ಯುಬಿಟಿ) ಮಹಾ ವಿಕಾಸ್ ಆಘಾಡಿಯ ಮೈತ್ರಿ ಪಕ್ಷಗಳಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT