ದೇವೇಂದ್ರ ಫಡ್ನವೀಸ್ 
ದೇಶ

ನಾಗ್ಪುರ: RSS ಸಂಸ್ಥಾಪಕರ ಸ್ಮಾರಕಕ್ಕೆ ಮಹಾರಾಷ್ಟ್ರ ಸಿಎಂ ಫಡ್ನವಿಸ್, ಡಿಸಿಎಂ ಶಿಂಧೆ ಭೇಟಿ

ರಾಜ್ಯ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್, ಪರಿಷತ್ ಉಪ ಸಭಾಪತಿ ನೀಲಂ ಗೊರ್ಹೆ ಮತ್ತು ಆಡಳಿತಾರೂಢ ಬಿಜೆಪಿ ಹಾಗೂ ಶಿಂಧೆ ನೇತೃತ್ವದ ಶಿವಸೇನೆಯ ವಿವಿಧ ಶಾಸಕರು ಡಾ. ಹೆಡ್ಗೆವಾರ್ ಮತ್ತು ಗೋಳ್ವಾಲ್ಕರ್ ಅವರ ಸ್ಮಾರಕಗಳಿಗೆ ಗೌರವ ಸಲ್ಲಿಸಿದರು.

ನಾಗ್ಪುರ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಗುರುವಾರ ಬೆಳಗ್ಗೆ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕ ಡಾ. ಕೆ.ಬಿ.ಹೆಡ್ಗೆವಾರ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು.

ಆರ್‌ಎಸ್‌ಎಸ್‌ನ ಎರಡನೇ ಸರ್ ಸಂಘಚಾಲಕ್ ಎಂಎಸ್ ಗೋಲ್ವಾಲ್ಕರ್ ಅವರ ಸ್ಮಾರಕಕ್ಕೂ ಸಿಎಂ, ಡಿಸಿಎಂ ಗೌರವ ಸಲ್ಲಿಸಿದರು.

ರಾಜ್ಯ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್, ಪರಿಷತ್ ಉಪ ಸಭಾಪತಿ ನೀಲಂ ಗೊರ್ಹೆ ಮತ್ತು ಆಡಳಿತಾರೂಢ ಬಿಜೆಪಿ ಹಾಗೂ ಶಿಂಧೆ ನೇತೃತ್ವದ ಶಿವಸೇನೆಯ ವಿವಿಧ ಶಾಸಕರು ಡಾ. ಹೆಡ್ಗೆವಾರ್ ಮತ್ತು ಗೋಳ್ವಾಲ್ಕರ್ ಅವರ ಸ್ಮಾರಕಗಳಿಗೆ ಗೌರವ ಸಲ್ಲಿಸಿದರು.

ಇದೇ ವೇಳೆ ಫಡ್ನವಿಸ್ ಮತ್ತು ಶಿಂಧೆ ಅವರು ಸಂಘದ ಪದಾಧಿಕಾರಿಗಳನ್ನು ಭೇಟಿಯಾದರು. ಅವರು ಆರ್‌ಎಸ್‌ಎಸ್‌ನ ಸಂಕ್ಷಿಪ್ತ ಪರಿಚಯ ನೀಡಿದರು.

ಸದ್ಯ ನಾಗ್ಪುರದಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT