ದೇವೇಂದ್ರ ಫಡ್ನವೀಸ್ 
ದೇಶ

ನಾಗ್ಪುರ: RSS ಸಂಸ್ಥಾಪಕರ ಸ್ಮಾರಕಕ್ಕೆ ಮಹಾರಾಷ್ಟ್ರ ಸಿಎಂ ಫಡ್ನವಿಸ್, ಡಿಸಿಎಂ ಶಿಂಧೆ ಭೇಟಿ

ರಾಜ್ಯ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್, ಪರಿಷತ್ ಉಪ ಸಭಾಪತಿ ನೀಲಂ ಗೊರ್ಹೆ ಮತ್ತು ಆಡಳಿತಾರೂಢ ಬಿಜೆಪಿ ಹಾಗೂ ಶಿಂಧೆ ನೇತೃತ್ವದ ಶಿವಸೇನೆಯ ವಿವಿಧ ಶಾಸಕರು ಡಾ. ಹೆಡ್ಗೆವಾರ್ ಮತ್ತು ಗೋಳ್ವಾಲ್ಕರ್ ಅವರ ಸ್ಮಾರಕಗಳಿಗೆ ಗೌರವ ಸಲ್ಲಿಸಿದರು.

ನಾಗ್ಪುರ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಗುರುವಾರ ಬೆಳಗ್ಗೆ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕ ಡಾ. ಕೆ.ಬಿ.ಹೆಡ್ಗೆವಾರ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು.

ಆರ್‌ಎಸ್‌ಎಸ್‌ನ ಎರಡನೇ ಸರ್ ಸಂಘಚಾಲಕ್ ಎಂಎಸ್ ಗೋಲ್ವಾಲ್ಕರ್ ಅವರ ಸ್ಮಾರಕಕ್ಕೂ ಸಿಎಂ, ಡಿಸಿಎಂ ಗೌರವ ಸಲ್ಲಿಸಿದರು.

ರಾಜ್ಯ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್, ಪರಿಷತ್ ಉಪ ಸಭಾಪತಿ ನೀಲಂ ಗೊರ್ಹೆ ಮತ್ತು ಆಡಳಿತಾರೂಢ ಬಿಜೆಪಿ ಹಾಗೂ ಶಿಂಧೆ ನೇತೃತ್ವದ ಶಿವಸೇನೆಯ ವಿವಿಧ ಶಾಸಕರು ಡಾ. ಹೆಡ್ಗೆವಾರ್ ಮತ್ತು ಗೋಳ್ವಾಲ್ಕರ್ ಅವರ ಸ್ಮಾರಕಗಳಿಗೆ ಗೌರವ ಸಲ್ಲಿಸಿದರು.

ಇದೇ ವೇಳೆ ಫಡ್ನವಿಸ್ ಮತ್ತು ಶಿಂಧೆ ಅವರು ಸಂಘದ ಪದಾಧಿಕಾರಿಗಳನ್ನು ಭೇಟಿಯಾದರು. ಅವರು ಆರ್‌ಎಸ್‌ಎಸ್‌ನ ಸಂಕ್ಷಿಪ್ತ ಪರಿಚಯ ನೀಡಿದರು.

ಸದ್ಯ ನಾಗ್ಪುರದಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್