ಜಿಯಾ ಉರ್ ರೆಹಮಾನ್ ಬರ್ಕೆ PTI
ದೇಶ

ಕರೆಂಟ್ ಕಳ್ಳರ ವಿರುದ್ಧ ಸಮರ: ಅಖಿಲೇಶ್ ಪಕ್ಷದ ಸಂಸದ ಜಿಯಾ ಉರ್ ರೆಹಮಾನ್ ವಿರುದ್ಧ FIR, ವಿದ್ಯುತ್ ಸಂಪರ್ಕ ಕಡಿತ!

ಎಸ್ಪಿ ಸಂಸದರ ವಿರುದ್ಧ ಉತ್ತರಪ್ರದೇಶ ವಿದ್ಯುತ್ ಇಲಾಖೆ ವಿದ್ಯುತ್ ಕಳ್ಳತನ ಪ್ರಕರಣ ದಾಖಲಿಸಿರುವುದು ಗಮನಾರ್ಹ. ಅಷ್ಟೇ ಅಲ್ಲದೆ, ಜಿಯಾ ಉರ್ ರೆಹಮಾನ್ ಕಡೆಯವರು ಇಲಾಖೆಯ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಲಖನೌ: ಉತ್ತರಪ್ರದೇಶದ ಸಂಭಾಲ್‌ನ ಸಮಾಜವಾದಿ ಪಕ್ಷದ ಸಂಸದ ಜಿಯಾ ಉರ್ ರೆಹಮಾನ್ ಬರ್ಕೆ ವಿರುದ್ಧ ವಿದ್ಯುತ್ ಕಳ್ಳತನದ ಆರೋಪವಿದೆ. ಆತನ ವಿರುದ್ಧ ವಿದ್ಯುತ್ ಕಳ್ಳತನ ವಿರೋಧಿ ಸೆಕ್ಷನ್ 135ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸಂಸದನ ಮನೆಯಲ್ಲಿ ಝೀರೋ ಮೀಟರ್ ರೀಡಿಂಗ್ ನಂತರ ಪೊಲೀಸರು ಮತ್ತು ಆಡಳಿತ ಕ್ರಮ ಕೈಗೊಂಡಿದೆ. ಅಷ್ಟೇ ಅಲ್ಲದೆ ಸಂಸದರ ಮನೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.

ಎಸ್ಪಿ ಸಂಸದರ ವಿರುದ್ಧ ಉತ್ತರಪ್ರದೇಶ ವಿದ್ಯುತ್ ಇಲಾಖೆ ವಿದ್ಯುತ್ ಕಳ್ಳತನ ಪ್ರಕರಣ ದಾಖಲಿಸಿರುವುದು ಗಮನಾರ್ಹ. ಅಷ್ಟೇ ಅಲ್ಲದೆ, ಜಿಯಾ ಉರ್ ರೆಹಮಾನ್ ಕಡೆಯವರು ಇಲಾಖೆಯ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಬೆದರಿಕೆಗೆ ಸಂಬಂಧಿಸಿದಂತೆ ಎಸ್‌ಪಿ ಸಂಸದನ ತಂದೆ ವಿರುದ್ಧವೂ ಪ್ರಕರಣ ದಾಖಲಾಗಿದೆ.

ವಿದ್ಯುತ್ ಕಳ್ಳತನದ ಆರೋಪ ಎದುರಿಸುತ್ತಿರುವ ಸಂಭಾಲ್ ಸಂಸದ ಜಿಯಾ ಉರ್ ರೆಹಮಾನ್ ಬರ್ಕೆ ಅವರ ದೀಪ್ ಸರಾಯ್ ಮನೆಗೆ ಭಾರೀ ಪೊಲೀಸ್ ಪಡೆಯೊಂದಿಗೆ ವಿದ್ಯುತ್ ಇಲಾಖೆ ತಂಡ ತಲುಪಿತ್ತು. ಎಷ್ಟು ಯೂನಿಟ್ ವಿದ್ಯುತ್ ಬಳಕೆಯಾಗಿದೆ ಎಂದು ವಿದ್ಯುತ್ ಇಲಾಖೆ ತಂಡ ಸ್ಮಾರ್ಟ್ ಮೀಟರ್ ಪರಿಶೀಲಿಸಿದಾಗ ಮೀಟರ್ ಟ್ಯಾಂಪರಿಂಗ್ ಮಾಡಿರುವುದು ಬೆಳಕಿಗೆ ಬಂದಿತ್ತು.

ನ್ಯಾಯಾಲಯದ ಆದೇಶದಂತೆ ನವೆಂಬರ್ 24ರಂದು ನಗರದ ಕೋಟ್ ಗಾರ್ವಿ ಪ್ರದೇಶದಲ್ಲಿರುವ ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ನಡೆಸಲು ಬಂದ ಅಧಿಕಾರಿಗಳ ವಿರುದ್ಧ ಕಲ್ಲು ತೂರಾಟ ನಡೆಸಿದ್ದು ಈ ವೇಳೆ ನಡೆದ ಐವರು ಸ್ಥಳೀಯರ ಸಾವನ್ನಪ್ಪಿದ್ದರು. ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ ಸಂಬಂಧ ಪೊಲೀಸರು ಬಾರ್ಕ್ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!