ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಕಾರು-ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಐವರು ಸಾವು

ಬುಧವಾರ ತಡರಾತ್ರಿ ದೆಹಲಿಗೆ ತೆರಳುತ್ತಿದ್ದ ಎರ್ಟಿಗಾ ಕಾರು ಎದುರಿಗೆ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಶಹಜಹಾನ್‌ಪುರ: ಕಾರು ಮತ್ತು ಟ್ರಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಬರೇಲಿ-ಇಟಾವಾ ಹೆದ್ದಾರಿಯ ಬರ್ಖೇಡಾ ಜೈಪಾಲ್ ಕ್ರಾಸ್‌ರೋಡ್ ಬಳಿ ಈ ಅಪಘಾತ ಸಂಭವಿಸಿದ್ದು, ಬುಧವಾರ ತಡರಾತ್ರಿ ದೆಹಲಿಗೆ ತೆರಳುತ್ತಿದ್ದ ಎರ್ಟಿಗಾ ಕಾರು ಎದುರಿಗೆ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ರಾಜೇಶ್ ಎಸ್ ತಿಳಿಸಿದ್ದಾರೆ.

ಮೃತರನ್ನು ರಿಯಾಜುಲ್ ಅಲಿ(45), ಅಮ್ನಾ(42), ಗುಡಿಯಾ(9), ತಮನ್ನಾ 'ಅನು'(32), ಮತ್ತು ನೂರ್(6) ಎಂದು ಗುರುತಿಸಲಾಗಿದೆ.

ಶಹಜಹಾನ್‌ಪುರದ ಕಾಂತ್ ಪಟ್ಟಣದ ನಿವಾಸಿಯಾಗಿರುವ ರಿಯಾಜುಲ್ ದೆಹಲಿಯಲ್ಲಿ ಗಾರ್ಮೆಂಟ್ ವ್ಯಾಪಾರ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

"ಈ ಕುಟುಂಬವು ಬುಧವಾರ ರಾತ್ರಿ 10 ಗಂಟೆಗೆ ಮದುವೆಯಲ್ಲಿ ಭಾಗವಹಿಸಿದ ನಂತರ ದೆಹಲಿಗೆ ತೆರಳಿದ್ದರು. ಸ್ವಲ್ಪ ಸಮಯದ ನಂತರ ಅವರ ವಾಹನವು ಭೀಕರ ಅಪಘಾತಕ್ಕೀಡಾಗಿದೆ" ಎಂದು ಎಸ್ಪಿ ಹೇಳಿದ್ದಾರೆ.

ಟ್ರಕ್ ಚಾಲಕನನ್ನು ವಶಕ್ಕೆ ಪಡೆದು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಟುಂಬವು ಎರಡು ದಿನಗಳ ಹಿಂದೆ ಮದುವೆಗೆಂದು ಶಹಜಹಾನ್‌ಪುರಕ್ಕೆ ಬಂದಿತ್ತು ಮತ್ತು ದೆಹಲಿಗೆ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ರಿಯಾಜುಲ್ ಅವರ ಚಿಕ್ಕಪ್ಪ ಶಂಶೇರ್ ಅಲಿ ಆಸ್ಪತ್ರೆಯಲ್ಲಿ ತಿಳಿಸಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ