ಪ್ರಿಯಾಂಕಾ ಗಾಂಧಿಗೆ ಗಿಫ್ಟ್ ನೀಡಲಾದ ಬ್ಯಾಗ್ 
ದೇಶ

ಸಂಸದೆ ಪ್ರಿಯಾಂಕಾ ಗಾಂಧಿಗೆ '1984 ದಂಗೆ' ನೆನಪಿಸುವ ಬ್ಯಾಗ್ ಗಿಫ್ಟ್ ನೀಡಿದ ಬಿಜೆಪಿ ಸಂಸದೆ!

ವಯನಾಡು ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಇತ್ತೀಚಿಗೆ ಲೋಕಸಭಾ ಕಲಾಪದ ವೇಳೆ ಪ್ಯಾಲೇಸ್ತಿನ್‌ ಮತ್ತು ಬಾಂಗ್ಲಾದೇಶ ಉಲ್ಲೇಖಿಸುವ ಬ್ಯಾಗ್ ಹಿಡಿದು ಬಂದಿದ್ದು, ದೊಡ್ಡ ಸುದ್ದಿಯಾಗಿತ್ತು. ಇದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.

ನವದೆಹಲಿ: ಬಿಜೆಪಿ ಸಂಸದೆ ಅಪರಾಜಿತಾ ಸಾರಂಗಿ ಅವರು ಶುಕ್ರವಾರ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೆಂಪು ಬಣ್ಣದಲ್ಲಿ '1984' ಎಂದು ಬರೆದ ಬ್ಯಾಗ್ ವೊಂದನ್ನು ಗಿಫ್ಟ್ ಆಗಿ ನೀಡಿದ್ದಾರೆ.

ವಯನಾಡು ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಇತ್ತೀಚಿಗೆ ಲೋಕಸಭಾ ಕಲಾಪದ ವೇಳೆ ಪ್ಯಾಲೇಸ್ತಿನ್‌ ಮತ್ತು ಬಾಂಗ್ಲಾದೇಶ ಉಲ್ಲೇಖಿಸುವ ಬ್ಯಾಗ್ ಹಿಡಿದು ಬಂದಿದ್ದು, ದೊಡ್ಡ ಸುದ್ದಿಯಾಗಿತ್ತು. ಇದಕ್ಕೆ ಪಾಕಿಸ್ತಾನದ ರಾಜಕಾರಣಿಯೊಬ್ಬರು ಶ್ಲಾಘಿಸಿದರೆ, ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.

ಈ ವಿಚಾರ ಸುದ್ದಿಯಲ್ಲಿರುವಾಗಲೇ ಈಗ ಬಿಜೆಪಿ ಸಂಸದೆ ಅಪರಾಜಿತ ಸಾರಂಗಿ ಅವರು ಪ್ರಿಯಾಂಕಾ ಗಾಂಧಿಯವರಿಗೆ ಬ್ಯಾಗೊಂದನ್ನು ಗಿಫ್ಟ್ ನೀಡಿದ್ದಾರೆ.

ಭುವನೇಶ್ವರ್ ಸಂಸದೆಯಾಗಿರುವ ಸಾರಂಗಿ, ಪಾರ್ಲಿಮೆಂಟ್ ಕಾರಿಡಾರ್ ನಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ಬ್ಯಾಗ್ ನೀಡಿದ್ದಾರೆ. ಸಾರಂಗಿಯಿಂದ ಬ್ಯಾಗ್ ಪಡೆದ ಪ್ರಿಯಾಂಕಾ ಗಾಂಧಿ, ಅದರ ಮೇಲೆ ಏನು ಬರೆಯಲಾಗಿದೆ ಎಂಬುದನ್ನು ಗಮನಿಸದೇ ಹಾಗೆಯೇ ಮುಂದೆ ಸಾಗಿದ್ದಾರೆ. ಈ ಬ್ಯಾಗಿನ ಮೇಲೆ 1984 ಎಂದು ಬರೆಯಲಾಗಿದೆ.

ಪ್ರಿಯಾಂಕಾ ಗಾಂಧಿ ಅಜ್ಜಿ ಇಂದಿರಾಗಾಂಧಿ ಸಾವಿನ ನಂತರ ಈ ಸಿಖ್ ದಂಗೆ ನಡೆದಿತ್ತು, ಇದಾರಲ್ಲಿ ಸಿಖ್ ಸಮುದಾಯವನ್ನು ಹುಡುಕಿ ಹುಡುಕಿ ಹತ್ಯೆ ಮಾಡಲಾಗಿತ್ತು. ಇಂದಿರಾಗಾಂಧಿ ಹತ್ಯೆಗೆ ಪ್ರತೀಕಾರವಾಗಿ ಈ ಸಿಖ್ ಹತ್ಯಾಕಾಂಡ ನಡೆದಿತ್ತು. ಹಲವು ಕಾಂಗ್ರೆಸ್ ನಾಯಕರು ಈ ದಂಗೆಯಲ್ಲಿ ಭಾಗಿಯಾದ ಆರೋಪವಿತ್ತು.

1984ರ ದಂಗೆ ಕುರಿತು ನೆನಪಿಸುವ ಬ್ಯಾಗ್ ನ್ನು ಉಡುಗೊರೆಯಾಗಿ ನೀಡಲಾಗಿದೆ. ಈ ವಿಷಯವನ್ನು ಸಹ ಪ್ರಿಯಾಂಕಾ ಗಾಂಧಿ ತನ್ನ ಬ್ಯಾಗ್ ನೊಂದಿಗೆ ಪ್ರಸ್ತಾಪಿಸಲಿ ಎಂದು ಬಿಜೆಪಿ ಸಂಸದೆ ಹೇಳಿದ್ದಾರೆ. ಪ್ಯಾಲೆಸ್ತೀನ್ ಜನರಿಗೆ ಬೆಂಬಲ ಸೂಚಿಸುವ ಸಲುವಾಗಿ ಸೋಮವಾರ ಪ್ರಿಯಾಂಕಾ ಗಾಂಧಿ ಸಂಸತ್ತಿಗೆ ಪ್ಯಾಲೆಸ್ತೀನ್ ಎಂದು ಬರೆದ ಬ್ಯಾಗ್ ನೊಂದಿಗೆ ಬಂದಿದ್ದರು. ಮಂಗಳವಾರ ಬಾಂಗ್ಲಾದೇಶದಲ್ಲಿನ ಅಲ್ಪಸಂಖ್ಯಾತ ಹಿಂದೂ ಮತ್ತು ಕ್ರಿಶ್ಚಿಯನ್ನರ ಪರವಾಗಿ ನಿಲ್ಲಿ ಎಂಬ ಸಂದೇಶವಿರುವ ಬ್ಯಾಗ್ ನೊಂದಿಗೆ ಪ್ರಿಯಾಂಕಾ ಗಾಂಧಿ ಸಂಸತ್ತಿಗೆ ಬಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!

'ನಾನು ಯಂಗ್ ಹೃತಿಕ್ ರೋಷನ್ ತರಹ ಕಾಣುತ್ತೇನೆ ಅಂತ...': ಕಂಗನಾಗೆ CJP ವಕ್ತಾರ ಸೌರವ್ ದಾಸ್ ತಪರಾಕಿ!

ಕಾವೇರಿ: ಕರ್ನಾಟಕಕ್ಕೆ ಅನ್ಯಾಯಗಳ ಪರಂಪರೆ (ನೇರ ನೋಟ)

ಬಿಜೆಪಿಗೆ ಆಘಾತ! ಉಪಸಭಾಪತಿ ಎಂ.ಕೆ ಪ್ರಾಣೇಶ್ ಆಯ್ಕೆ ಅಸಿಂಧು; ಮರು ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ವಿಜಯಭೇರಿ

'ನಾನು ಫಿಟ್ ಆಗಿರಲಿಲ್ಲ, ನನ್ನ ತೂಕ 100 KG ಆಗಿತ್ತು; ಆದ್ರೆ ಥಾಯ್ಲೆಂಡ್​ ಪ್ರವಾಸ ಎಲ್ಲವನ್ನು ಬದಲಿಸಿತು': ನಟಿ ವಿಸ್ಮಯ ಮೋಹನ್​ಲಾಲ್​