ರಾಹುಲ್ ಗಾಂಧಿ. 
ದೇಶ

ಸಂಸತ್ ಮುಂದೆ ಹೈಡ್ರಾಮಾ: ರಾಹುಲ್ ಗಾಂಧಿ, ಇತರ ಸಂಸದರ ವಿರುದ್ಧ FIR ದಾಖಲು

ಬಿಜೆಪಿ ನೀಡಿದ ದೂರಿನ ಅನ್ವಯ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 115 (ನೋವುಂಟು ಮಾಡುವುದು), 117 (ಗಾಯ ಮಾಡುವುದು), 125 (ಇತರರ ಜೀವಕ್ಕೆ ಅಪಾಯ), 131 (ಅಪರಾಧ ಶಕ್ತಿ ಬಳಕೆ), 351 (ಬೆದರಿಕೆ) ಆರೋಪಗಳಡಿ ಎಫ್​​ಆರ್​​ಐ ದಾಖಲಿಸಲಾಗಿದೆ.

ನವದೆಹಲಿ: ಸಂಸತ್​ ಆವರಣದಲ್ಲಿ ಸಂಸದರ ಪ್ರತಿಭಟನೆಯ ವೇಳೆ ನಡೆದ ತಿಕ್ಕಾಟದಲ್ಲಿ ಹಲ್ಲೆ, ಪ್ರಚೋದನೆ ನೀಡಿದ ಆರೋಪದ ಮೇಲೆ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ ಹಾಗೂ ಇತರೆ ಸಂಸದರ ವಿರುದ್ಧ ವಿರುದ್ಧ ದೆಹಲಿ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ.

ಬಿಜೆಪಿ ನೀಡಿದ ದೂರಿನ ಅನ್ವಯ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 115 (ನೋವುಂಟು ಮಾಡುವುದು), 117 (ಗಾಯ ಮಾಡುವುದು), 125 (ಇತರರ ಜೀವಕ್ಕೆ ಅಪಾಯ), 131 (ಅಪರಾಧ ಶಕ್ತಿ ಬಳಕೆ), 351 (ಬೆದರಿಕೆ) ಆರೋಪಗಳಡಿ ಎಫ್​​ಆರ್​​ಐ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲಂ 109, 115, 117, 125, 131 ಮತ್ತು 351 ಅಡಿಯಲ್ಲಿ ಬಿಜೆಪಿ ದೂರು ದಾಖಲಿಸಿದೆ. ಸೆಕ್ಷನ್ 109 ಕೊಲೆ ಯತ್ನದ ವಿಭಾಗವಾಗಿದೆ, ಸೆಕ್ಷನ್ 117 ಉದ್ದೇಶಪೂರ್ವಕವಾಗಿ ಗಂಭೀರ ಗಾಯವನ್ನು ಉಂಟುಮಾಡುತ್ತದೆ. ಆದರೆ, ದೆಹಲಿ ಪೊಲೀಸರು ರಾಹುಲ್ ಗಾಂಧಿ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 109ರ ಅಡಿಯಲ್ಲಿ ಕೊಲೆ ಯತ್ನದ ಅಡಿಯಲ್ಲಿ ಪ್ರಕರಣ ದಾಖಲಿಸದಿರಲು ನಿರ್ಧರಿಸಿದ್ದಾರೆ.

ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಆರೋಪದ ಮೇಲೆ ಗುಹುವಾಹ ಸಂಸತ್ ಭವನದೊಳಗೆ ವಿರೋಧ ಪಕ್ಷದ ಸಂಸದರು ಮತ್ತು ಬಿಜೆಪಿ ಸದಸ್ಯರ ನಡುವೆ ಘರ್ಷಣೆಯಾಗಿ ಎದುರಾಗಿತ್ತು.

ಇಂಡಿಯಾ ಒಕ್ಕೂಟದ ಸಂಸದರು ಸಂಸತ್​ನ ಮುಖ್ಯ ಪ್ರವೇಶದ್ವಾರದ ಬಳಿ ಘರ್ಷಣೆ ನಡೆಸಿದರು. ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಸಂಸದರು ಆಕ್ರಮಿಸಿಕೊಂಡಿರುವ ಪ್ರದೇಶದ ಮೂಲಕ ಸಂಸತ್ತಿಗೆ ಪ್ರವೇಶಿಸಲು ಇಂಡಿಯಾ ಬ್ಲಾಕ್ ಪ್ರಯತ್ನಿಸಿತು. ಮೆಟ್ಟಿಲುಗಳ ಖಾಲಿ ಭಾಗವನ್ನು ಬಳಸುವ ಬದಲು, ಪ್ರತಿಪಕ್ಷ ನಾಯಕರು ಬಿಜೆಪಿ ಸಂಸದರ ನಡುವಲ್ಲೇ ನುಗ್ಗಿದರು. ಇದರಿಂದ ತಳ್ಳಾಟ ಉಂಟಾಯಿತು.

ಘಟನೆಯಲ್ಲಿ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಗಾಯಗೊಂಡಿದ್ದರು. ಬಳಿಕ ಸಂಸತ್ ಆವರಣದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಅವರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಸಾಗಿಸಲಾಯಿತು. ಬಿಜೆಪಿ ಸಂಸದ ಮುಖೇಶ್ ರಜಪೂತ್ ಕೂಡ ಘರ್ಷಣೆಯಲ್ಲಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಿರಿಯ ಸಂಸದರನ್ನು ತಳ್ಳಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ, ರಾಹುಲ್ ಗಾಂಧಿ ಆ ಆರೋಪವನ್ನು ನಿರಾಕರಿಸಿದ್ದಾರೆ.

ಅಲ್ಲದೆ, ತಮ್ಮ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (80) ಅವರನ್ನು ಬಿಜೆಪಿ ಸದಸ್ಯರು ನೆಲಕ್ಕೆ ತಳ್ಳಿದ್ದರಿಂದ ಗಾಯಗೊಂಡಿದ್ದಾರೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT