ಸಾಂದರ್ಭಿಕ ಚಿತ್ರ 
ದೇಶ

18 ವರ್ಷ ಕಾನೂನು ಹೋರಾಟ, 44 ವರ್ಷಗಳ ದಾಂಪತ್ಯ; ವಿಚ್ಛೇದಿತ ಪತ್ನಿಗೆ ಪರಿಹಾರ ನೀಡಲು ಬೆಳೆ, ಭೂಮಿ ಮಾರಾಟ ಮಾಡಿದ 70 ವರ್ಷದ ರೈತ!

ಹರ್ಯಾಣದ ಸುಮಾರು 70 ವರ್ಷ ವಯಸ್ಸಿನ ರೈತ ಸುಭಾಷ್ ಚಾಂದ್ ಕೊನೆಗೂ ತನ್ನ 18 ವರ್ಷಗಳ ಸುದೀರ್ಘ ಕಾನೂನು ಹೋರಾಟ ಕೊನೆಗೊಳಿಸಿದ್ದು, ವಿಚ್ಛೇದಿತ ಪತ್ನಿಗೆ ಪರಿಹಾರ ನೀಡಲು ಸುಮಾರು 3 ಕೋಟಿ ರೂ ಮೌಲ್ಯದ ಬೆಳೆ ಮತ್ತು ಭೂಮಿ ಮಾರಾಟ ಮಾಡಿ ಪರಿಹಾರ ನೀಡಿದ್ದಾನೆ.

ಚಂಡೀಗಢ: ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ರ ಕೌಟುಂಬಿಕ ಹಿಂಸಾಚಾರ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಹರಿಯಾಣದಲ್ಲಿ 70 ವರ್ಷದ ರೈತನೊಬ್ಬ ಪತ್ನಿಗೆ ಪರಿಹಾರ ನೀಡಲು ಸುಮಾರು 3 ಕೋಟಿ ರೂ ಮೌಲ್ಯದ ಬೆಳೆ ಮತ್ತು ಭೂಮಿ ಮಾರಾಟ ಮಾಡಿದ್ದಾನೆ.

ಹೌದು.. ಹರ್ಯಾಣದ ಸುಮಾರು 70 ವರ್ಷ ವಯಸ್ಸಿನ ರೈತ ಸುಭಾಷ್ ಚಾಂದ್ ಕೊನೆಗೂ ತನ್ನ 18 ವರ್ಷಗಳ ಸುದೀರ್ಘ ಕಾನೂನು ಹೋರಾಟ ಕೊನೆಗೊಳಿಸಿದ್ದು, ವಿಚ್ಛೇದಿತ ಪತ್ನಿಗೆ ಪರಿಹಾರ ನೀಡಲು ಸುಮಾರು 3 ಕೋಟಿ ರೂ ಮೌಲ್ಯದ ಬೆಳೆ ಮತ್ತು ಭೂಮಿ ಮಾರಾಟ ಮಾಡಿ ಪರಿಹಾರ ನೀಡಿದ್ದಾನೆ.

ವಿಚಿತ್ರವಾದರೂ ಇದು ಸತ್ಯ.. ರೈತ ಸುಭಾಷ್ ಚಾಂದ್ ಮತ್ತು ಈಗ ವಿಚ್ಛೇದಿತರಾಗಿರುವ 73 ವರ್ಷ ವಯಸ್ಸಿನ ಅವರ ಪತ್ನಿ ಸಂತೋಷಿ 1980 ರಲ್ಲಿ ವಿವಾಹವಾಗಿದ್ದರು. ಈ ಜೋಡಿಗೆ 3 ಮಕ್ಕಳು ಕೂಡ ಇದ್ದಾರೆ. ಬಳಿಕ ಈ ಜೋಡಿ ನಡುವೆ ಭಿನ್ನಾಭಿಪ್ರಾಯ ಆರಂಭವಾಗಿತ್ತು.

ಪತ್ನಿಯ ಕ್ರೌರ್ಯವನ್ನು ಉಲ್ಲೇಖಿಸಿ ರೈತ ಸುಭಾಷ್ ಚಾಂದ್ 2006 ರಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ 7 ವರ್ಷಗಳ ನಂತರ, 2013 ರಲ್ಲಿ ಕರ್ನಾಲ್‌ನಲ್ಲಿರುವ ಕುಟುಂಬ ನ್ಯಾಯಾಲಯವು ಅವರ ವಿಚ್ಛೇದನದ ಅರ್ಜಿಯನ್ನು ತಿರಸ್ಕರಿಸಿತು.

ನಂತರ, ಸುಭಾಷ್ ಚಾಂದ್ ಮದುವೆಯನ್ನು ವಿಸರ್ಜಿಸುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಈ ವಿಷಯವು 11 ವರ್ಷಗಳ ಕಾಲ ಬಾಕಿ ಉಳಿದಿದ್ದರಿಂದ, ಈ ವರ್ಷದ ನವೆಂಬರ್‌ನಲ್ಲಿ, ಮೊಕದ್ದಮೆಯನ್ನು ಕೊನೆಗೊಳಿಸಲು ಮಾರ್ಗಗಳನ್ನು ಕಂಡುಕೊಳ್ಳಲು ಹೈಕೋರ್ಟ್ ಮಧ್ಯಸ್ಥಿಕೆ ಮತ್ತು ರಾಜಿ ಕೇಂದ್ರವನ್ನು ಕೇಳಿತ್ತು.

ಪರಿಹಾರಕ್ಕಾಗಿ ಬೆಳೆ ಮತ್ತು ಭೂಮಿ ಮಾರಿದ ರೈತ

ಇನ್ನು ಸಂಧಾನ ಮತ್ತು ಚರ್ಚೆಯ ನಂತರ, ರೈತ ಸುಭಾಷ್ ಚಾಂದ್ ಮತ್ತು ಆತನ ಪತ್ನಿ ಮತ್ತು 3 ಮಕ್ಕಳು ಶಾಶ್ವತ ಜೀವನಾಂಶವಾಗಿ 3 ಕೋಟಿ ರೂ. ಪಾವತಿಸಿದರೆ ಒಪ್ಪಿಕೊಳ್ಳುವುದಾಗಿ ಹೇಳಿದರು. ಇದನ್ನು ಒಪ್ಪಿದ ರೈತ ಸುಭಾಷ್ ಚಾಂದ್ ತನ್ನ ಕೃಷಿ ಭೂಮಿಯನ್ನು ಮಾರಿ 2,16,00,000 ರೂ.ಗಳನ್ನು ಡಿಮ್ಯಾಂಡ್ ಡ್ರಾಫ್ಟ್ ರೂಪದಲ್ಲಿ ಮತ್ತು ಬೆಳೆ ಮಾರಿದ ಹಣ 50 ಲಕ್ಷ ರೂ ಮತ್ತು ಚಿನ್ನಾಭರಣ ಮಾರಿದ ಹಣ ಸುಮಾರು 40 ಲಕ್ಷ ರೂ ನಗದು ಎಲ್ಲ ಒಟ್ಟು ಒಟ್ಟು 3.7 ಕೋಟಿ ರೂ ಪತ್ನಿ ಮತ್ತು 3 ಮಕ್ಕಳಿಗೆ ಪಾವತಿಸಿದ ನಂತರ ವಿಚ್ಛೇದನಕ್ಕೆ ಅನುಮೋದನೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT