ಪ್ರಧಾನಿ ನರೇಂದ್ರ ಮೋದಿ online desk
ದೇಶ

ನವ ಕುವೈತ್ ನಿರ್ಮಾಣಕ್ಕೆ ಭಾರತೀಯ ಮಾನವಶಕ್ತಿ, ಕೌಶಲ್ಯ ನೆರವು: ಪ್ರಧಾನಿ ನರೇಂದ್ರ ಮೋದಿ

ಕುವೈತ್ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಕುವೈತ್‌ಗೆ ಮೋದಿ ಭೇಟಿ ನೀಡಿದ್ದಾರೆ. ಕುವೈತ್‌ಗೆ 43 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರದಂದು ಕುವೈತ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ್ದು, ಹೊಸ ಕುವೈತ್ ಗೆ ಅಗತ್ಯವಿರುವ ಮಾನವಶಕ್ತಿ, ಕೌಶಲ್ಯ ತಂತ್ರಜ್ಞಾನವನ್ನು ಭಾರತ ಹೊಂದಿದೆ ಎಂದು ಹೇಳಿದ್ದಾರೆ.

ಕುವೈತ್ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಕುವೈತ್‌ಗೆ ಮೋದಿ ಭೇಟಿ ನೀಡಿದ್ದಾರೆ. ಕುವೈತ್‌ಗೆ 43 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡಿದ್ದಾರೆ.

"ಭಾರತದಿಂದ ಇಲ್ಲಿಗೆ ತಲುಪಲು ನಿಮಗೆ ನಾಲ್ಕು ಗಂಟೆಗಳು ಬೇಕಾಗುತ್ತದೆ ಆದರೆ ಭಾರತದ ಪ್ರಧಾನಿಯೊಬ್ಬರು ಕುವೈತ್‌ಗೆ ಪ್ರಯಾಣಿಸಲು ನಾಲ್ಕು ದಶಕಗಳನ್ನು ತೆಗೆದುಕೊಂಡರು" ಎಂದು ಅವರು ಹೇಳಿದರು.

ಮುಂದಿನ ಕೆಲವು ವಾರಗಳಲ್ಲಿ ಆಚರಿಸಲಾಗುವ ಹಬ್ಬಗಳ ಸರಣಿಗಾಗಿ ಸಭೆಗೆ ಶುಭಾಶಯ ಕೋರಿದ ಮೋದಿ, "ನೀವೆಲ್ಲರೂ ಭಾರತದ ವಿವಿಧ ಭಾಗಗಳಿಂದ ಬಂದಿದ್ದೀರಿ, ಆದರೆ ನಿಮ್ಮೆಲ್ಲರನ್ನು ನೋಡಿದರೆ ಮಿನಿ ಭಾರತವು ಇಲ್ಲಿ ನೆರೆದಿರುವಂತೆ ಭಾಸವಾಗುತ್ತಿದೆ" ಎಂದು ಹೇಳಿದರು.

"ಪ್ರತಿ ವರ್ಷ, ನೂರಾರು ಭಾರತೀಯರು ಕುವೈತ್‌ಗೆ ಬರುತ್ತಾರೆ; ನೀವು ಕುವೈತ್ ಸಮಾಜಕ್ಕೆ ಭಾರತೀಯ ಸ್ಪರ್ಶವನ್ನು ಸೇರಿಸಿದ್ದೀರಿ. ನೀವು ಕುವೈತ್‌ನ ಕ್ಯಾನ್ವಾಸ್‌ನಲ್ಲಿ ಭಾರತೀಯ ಕೌಶಲ್ಯಗಳ ಬಣ್ಣಗಳನ್ನು ತುಂಬಿದ್ದೀರಿ, ಭಾರತದ ಪ್ರತಿಭೆ, ತಂತ್ರಜ್ಞಾನ ಮತ್ತು ಸಂಪ್ರದಾಯದ ಸಾರವನ್ನು ಬೆರೆಸಿದ್ದೀರಿ" ಎಂದು ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ಹೊಸ ಕುವೈತ್‌ಗೆ ಅಗತ್ಯವಿರುವ ಮಾನವಶಕ್ತಿ, ಕೌಶಲ್ಯ ಮತ್ತು ತಂತ್ರಜ್ಞಾನವನ್ನು ಭಾರತ ಹೊಂದಿದೆ ಎಂದು ಮೋದಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

SCROLL FOR NEXT