ನಟ ಅಲ್ಲು ಅರ್ಜುನ್ 
ದೇಶ

ನಾಗರಿಕರ ಸುರಕ್ಷತೆ ಮತ್ತು ಭದ್ರತೆ ಅತ್ಯಂತ ಮುಖ್ಯ: ಅಲ್ಲು ಅರ್ಜುನ್ ವಿಚಾರವಾಗಿ ತೆಲಂಗಾಣ ಡಿಜಿಪಿ

ನಾಗರಿಕರ ಸುರಕ್ಷತೆ ಮತ್ತು ಭದ್ರತೆ ಅತ್ಯಂತ ಮುಖ್ಯವಾದುದು ಎಂಬುದನ್ನು ಚಿತ್ರರಂಗದ ಗಣ್ಯರು ಮತ್ತು ಇತರರು ಅರ್ಥಮಾಡಿಕೊಳ್ಳಬೇಕು ಹಾಗೂ ಅವರು ಅದರಂತೆ ನಡೆದುಕೊಳ್ಳಬೇಕು ಎಂದು ತೆಲಂಗಾಣ ಡಿಜಿಪಿ ಜಿತೇಂದರ್ ಭಾನುವಾರ ಹೇಳಿದ್ದಾರೆ.

ಹೈದರಾಬಾದ್: ನಾಗರಿಕರ ಸುರಕ್ಷತೆ ಮತ್ತು ಭದ್ರತೆ ಅತ್ಯಂತ ಮುಖ್ಯವಾದುದು ಎಂಬುದನ್ನು ಚಿತ್ರರಂಗದ ಗಣ್ಯರು ಮತ್ತು ಇತರರು ಅರ್ಥಮಾಡಿಕೊಳ್ಳಬೇಕು ಹಾಗೂ ಅವರು ಅದರಂತೆ ನಡೆದುಕೊಳ್ಳಬೇಕು ಎಂದು ತೆಲಂಗಾಣ ಡಿಜಿಪಿ ಜಿತೇಂದರ್ ಭಾನುವಾರ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ 'ಪುಷ್ಪ 2' ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವಿಗೀಡಾದ ವಿಚಾರ ಮತ್ತು ತೆಲುಗು ನಟ ಅಲ್ಲು ಅರ್ಜುನ್ ಅವರ ಕೆಲವು ಹೇಳಿಕೆಗಳ ಕುರಿತು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಪೊಲೀಸರಿಗೆ ಯಾವುದೇ ವ್ಯಕ್ತಿಯ ವಿರುದ್ಧ ವೈಯಕ್ತಿಕವಾಗಿ ಯಾವುದೇ ಸಮಸ್ಯೆ ಇಲ್ಲ. ಆದರೆ, ಅದೇ ಸಮಯದಲ್ಲಿ, ರಾಜ್ಯದ ನಾಗರಿಕರಿಗೆ ಎಲ್ಲರೂ ಜವಾಬ್ದಾರರಾಗಿರಬೇಕು ಎಂದು ಅವರು ಹೇಳಿದರು.

'ಅವರು ಚಲನಚಿತ್ರಗಳಲ್ಲಿ ಹೀರೋಗಳು. ಆದರೆ, ಅವರು ಸಮಾಜದಲ್ಲಿನ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು. ಸಿನಿಮಾ ಪ್ರಚಾರವು ನಾಗರಿಕರ ಸುರಕ್ಷತೆಗಿಂತಲೂ ಮುಖ್ಯವಲ್ಲ. ಏನೋ ತಪ್ಪಾಗಿದೆ. ಅಂತಹ ಘಟನೆಗಳು ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಒಳ್ಳೆಯದಲ್ಲ ಎಂಬುದನ್ನು ನಾವೆಲ್ಲರೂ ಅರ್ಥಮಾಡಿಕೊಳ್ಳಬೇಕು' ಎಂದು ಅವರು ಕರೀಂನಗರ ಜಿಲ್ಲೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಈ ತಿಂಗಳ ಆರಂಭದಲ್ಲಿ ಇಲ್ಲಿನ ಚಿತ್ರಮಂದಿರಗಲ್ಲಿ 'ಪುಷ್ಪ 2' ಚಿತ್ರದ ಪ್ರದರ್ಶನದ ವೇಳೆ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದರೆ, ಅವರ ಎಂಟು ವರ್ಷದ ಮಗ ಗಂಭೀರವಾಗಿ ಗಾಯಗೊಂಡಿದ್ದಾನೆ.

ಈ ವೇಳೆ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದು, ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿಗೆ CM ಗದ್ದುಗೆ! ನಾಳೆ ನಿತೀಶ್ ರಾಜೀನಾಮೆ? ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

ಬೈಕ್ ಚಾಲನೆ ಮಾಡುತ್ತಾ Reels ರೆಕಾರ್ಡ್, ಭೀಕರ ಅಪಘಾತದಲ್ಲಿ ಯುವತಿ ಸಾವು, ಯುವಕ ಗಂಭೀರ! video

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

SCROLL FOR NEXT