ನಟ ಅಲ್ಲು ಅರ್ಜುನ್ 
ದೇಶ

ನಾಗರಿಕರ ಸುರಕ್ಷತೆ ಮತ್ತು ಭದ್ರತೆ ಅತ್ಯಂತ ಮುಖ್ಯ: ಅಲ್ಲು ಅರ್ಜುನ್ ವಿಚಾರವಾಗಿ ತೆಲಂಗಾಣ ಡಿಜಿಪಿ

ನಾಗರಿಕರ ಸುರಕ್ಷತೆ ಮತ್ತು ಭದ್ರತೆ ಅತ್ಯಂತ ಮುಖ್ಯವಾದುದು ಎಂಬುದನ್ನು ಚಿತ್ರರಂಗದ ಗಣ್ಯರು ಮತ್ತು ಇತರರು ಅರ್ಥಮಾಡಿಕೊಳ್ಳಬೇಕು ಹಾಗೂ ಅವರು ಅದರಂತೆ ನಡೆದುಕೊಳ್ಳಬೇಕು ಎಂದು ತೆಲಂಗಾಣ ಡಿಜಿಪಿ ಜಿತೇಂದರ್ ಭಾನುವಾರ ಹೇಳಿದ್ದಾರೆ.

ಹೈದರಾಬಾದ್: ನಾಗರಿಕರ ಸುರಕ್ಷತೆ ಮತ್ತು ಭದ್ರತೆ ಅತ್ಯಂತ ಮುಖ್ಯವಾದುದು ಎಂಬುದನ್ನು ಚಿತ್ರರಂಗದ ಗಣ್ಯರು ಮತ್ತು ಇತರರು ಅರ್ಥಮಾಡಿಕೊಳ್ಳಬೇಕು ಹಾಗೂ ಅವರು ಅದರಂತೆ ನಡೆದುಕೊಳ್ಳಬೇಕು ಎಂದು ತೆಲಂಗಾಣ ಡಿಜಿಪಿ ಜಿತೇಂದರ್ ಭಾನುವಾರ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ 'ಪುಷ್ಪ 2' ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವಿಗೀಡಾದ ವಿಚಾರ ಮತ್ತು ತೆಲುಗು ನಟ ಅಲ್ಲು ಅರ್ಜುನ್ ಅವರ ಕೆಲವು ಹೇಳಿಕೆಗಳ ಕುರಿತು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಪೊಲೀಸರಿಗೆ ಯಾವುದೇ ವ್ಯಕ್ತಿಯ ವಿರುದ್ಧ ವೈಯಕ್ತಿಕವಾಗಿ ಯಾವುದೇ ಸಮಸ್ಯೆ ಇಲ್ಲ. ಆದರೆ, ಅದೇ ಸಮಯದಲ್ಲಿ, ರಾಜ್ಯದ ನಾಗರಿಕರಿಗೆ ಎಲ್ಲರೂ ಜವಾಬ್ದಾರರಾಗಿರಬೇಕು ಎಂದು ಅವರು ಹೇಳಿದರು.

'ಅವರು ಚಲನಚಿತ್ರಗಳಲ್ಲಿ ಹೀರೋಗಳು. ಆದರೆ, ಅವರು ಸಮಾಜದಲ್ಲಿನ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು. ಸಿನಿಮಾ ಪ್ರಚಾರವು ನಾಗರಿಕರ ಸುರಕ್ಷತೆಗಿಂತಲೂ ಮುಖ್ಯವಲ್ಲ. ಏನೋ ತಪ್ಪಾಗಿದೆ. ಅಂತಹ ಘಟನೆಗಳು ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಒಳ್ಳೆಯದಲ್ಲ ಎಂಬುದನ್ನು ನಾವೆಲ್ಲರೂ ಅರ್ಥಮಾಡಿಕೊಳ್ಳಬೇಕು' ಎಂದು ಅವರು ಕರೀಂನಗರ ಜಿಲ್ಲೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಈ ತಿಂಗಳ ಆರಂಭದಲ್ಲಿ ಇಲ್ಲಿನ ಚಿತ್ರಮಂದಿರಗಲ್ಲಿ 'ಪುಷ್ಪ 2' ಚಿತ್ರದ ಪ್ರದರ್ಶನದ ವೇಳೆ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದರೆ, ಅವರ ಎಂಟು ವರ್ಷದ ಮಗ ಗಂಭೀರವಾಗಿ ಗಾಯಗೊಂಡಿದ್ದಾನೆ.

ಈ ವೇಳೆ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದು, ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT