ವಿಹೆಚ್ ಪಿ online desk
ದೇಶ

ಕೇರಳ: ಪಾಲಕ್ಕಾಡ್‌ ಶಾಲೆಯಲ್ಲಿ ಕ್ರಿಸ್‌ಮಸ್ ಆಚರಣೆಗೆ ಅಡ್ಡಿ; ಇಬ್ಬರು ವಿಎಚ್‌ಪಿ ಮುಖಂಡರು, ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ

ಕ್ರಿಸ್‌ಮಸ್ ಹಬ್ಬವನ್ನಷ್ಟೇ ಏಕೆ ಆಚರಿಸುತ್ತಿದ್ದಾರೆ ಎಂದು ಪ್ರಶ್ನಿಸಿ ಮೂವರು ಆರೋಪಿಗಳು ನಲ್ಲೇಪಿಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಶ್ರೀಕೃಷ್ಣ ಜಯಂತಿಯನ್ನೂ ಆಚರಿಸಬೇಕು ಎಂದು ಒತ್ತಾಯಿಸಿದರು.

ಪಾಲಕ್ಕಾಡ್: ಪಾಲಕ್ಕಾಡ್‌ನ ನಲ್ಲೆಪಿಲ್ಲಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಕ್ರಿಸ್‌ಮಸ್ ಆಚರಣೆಗೆ ಅಡ್ಡಿಪಡಿಸಲು ಯತ್ನಿಸಿದ ಇಬ್ಬರು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಒಬ್ಬ ಬಜರಂಗದಳ ಕಾರ್ಯಕರ್ತರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕ್ರಿಸ್‌ಮಸ್ ಹಬ್ಬವನ್ನಷ್ಟೇ ಏಕೆ ಆಚರಿಸುತ್ತಿದ್ದಾರೆ ಎಂದು ಪ್ರಶ್ನಿಸಿ ಮೂವರು ಆರೋಪಿಗಳು ನಲ್ಲೇಪಿಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಶ್ರೀಕೃಷ್ಣ ಜಯಂತಿಯನ್ನೂ ಆಚರಿಸಬೇಕು ಎಂದು ಒತ್ತಾಯಿಸಿದರು. ಮೂವರು ಆರೋಪಿಗಳನ್ನು ನಲ್ಲೆಪಿಲ್ಲಿ ನಿವಾಸಿಗಳಾದ ವಡಕ್ಕುಂತಾರ ಕೆ ಅನಿಲ್‌ಕುಮಾರ್, ಮನಂಕುಜಿ ಸುಶಾಸನನ್ ಮತ್ತು ತೆಕ್ಕುಮುರಿ ವೇಲಾಯುಧನ್ ಎಂದು ಗುರುತಿಸಲಾಗಿದೆ.

ಪಾಲಕ್ಕಾಡ್‌ನ ನಲ್ಲೆಪಿಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮೂವರು ಶಾಲೆಯ ಕ್ರಿಸ್‌ಮಸ್ ಆಚರಣೆಗೆ ಅಡ್ಡಿಪಡಿಸಿದರು, ಕ್ರಿಸ್‌ಮಸ್ ಕ್ಯಾರೋಲ್‌ಗಾಗಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಅವರ ಉಡುಪಿನ ಬಗ್ಗೆ ಪ್ರಶ್ನಿಸಿದರು. ಅಲ್ಲದೇ ವಿದ್ಯಾರ್ಥಿಗಳ ಎದುರೇ ಶಿಕ್ಷಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಆರೋಪಿ ಕೆ.ಅನಿಲ್‌ಕುಮಾರ್‌ ವಿಶ್ವ ಹಿಂದೂ ಪರಿಷತ್‌ ಜಿಲ್ಲಾ ಕಾರ್ಯದರ್ಶಿ, ವಿ.ಸುಶಾಸನನ್‌ ಭಜರಂಗದಳ ಜಿಲ್ಲಾ ಸಂಯೋಜಕ, ಕೆ.ವೇಲಾಯುಧನ್‌ ವಿಶ್ವ ಹಿಂದೂ ಪರಿಷತ್‌ ಪಂಚಾಯಿತಿ ಸಮಿತಿ ಅಧ್ಯಕ್ಷರಾಗಿದ್ದಾರೆ.

"ಮೂವರನ್ನು ಶನಿವಾರ ಬಂಧಿಸಿ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಬೆದರಿಕೆ ಹಾಕಿರುವ ಆರೋಪದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ. ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ" ಎಂದು ಚಿತ್ತೂರು ಪೊಲೀಸ್ ಠಾಣೆಯ ಎಸ್‌ಎಚ್‌ಒ ಕೆ ಮ್ಯಾಥ್ಯೂ ತಿಳಿಸಿದ್ದಾರೆ.

ಕೇರಳದಲ್ಲಿ ಕ್ರಿಶ್ಚಿಯನ್ ಸಮುದಾಯವನ್ನು ಗೆಲ್ಲಲು ಬಿಜೆಪಿ ಪ್ರಯತ್ನಿಸುತ್ತಿರುವಾಗ ಈ ಘಟನೆ ನಡೆದಿದೆ, ಆದರೆ ರಾಜ್ಯ ಬಿಜೆಪಿ ನಾಯಕತ್ವವು ಈ ವಿಷಯದಲ್ಲಿ ಮೌನವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT