ಪರೀಕ್ಷೆ (ಸಾಂಕೇತಿಕ ಚಿತ್ರ) Online desk
ದೇಶ

5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ 'ನೋ-ಡಿಟೆನ್ಷನ್ ನೀತಿ' ರದ್ದುಗೊಳಿಸಿದ ಕೇಂದ್ರ

2019 ರ ಶಿಕ್ಷಣ ಹಕ್ಕು ಕಾಯಿದೆ(ಆರ್‌ಟಿಇ) ತಿದ್ದುಪಡಿಯ ನಂತರ, ಕನಿಷ್ಠ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಈ ಎರಡು ತರಗತಿಗಳಿಗೆ 'ನೋ-ಡೆಟೆನ್ಷನ್ ನೀತಿ'ಯನ್ನು ತೆಗೆದುಹಾಕಿವೆ.

ನವದೆಹಲಿ: ವರ್ಷಾಂತ್ಯದ ಪರೀಕ್ಷೆಯಲ್ಲಿ ತೇರ್ಗಡೆಯಾಗದ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ 'ನೋ ಡಿಟೆನ್ಷನ್ ನೀತಿ'ಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2019 ರ ಶಿಕ್ಷಣ ಹಕ್ಕು ಕಾಯಿದೆ(ಆರ್‌ಟಿಇ) ತಿದ್ದುಪಡಿಯ ನಂತರ, ಕನಿಷ್ಠ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಈ ಎರಡು ತರಗತಿಗಳಿಗೆ 'ನೋ-ಡೆಟೆನ್ಷನ್ ನೀತಿ'ಯನ್ನು ತೆಗೆದುಹಾಕಿವೆ.

ಗೆಜೆಟ್ ಅಧಿಸೂಚನೆಯ ಪ್ರಕಾರ, ನಿಯಮಿತ ವಾರ್ಷಿಕ ಪರೀಕ್ಷೆ ನಡೆಸಿದ ನಂತರ, ಪರೀಕ್ಷೆಯಲ್ಲಿ ಅನುತ್ತೀರ್ಣವಾದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಸೂಚನೆ ಮತ್ತು ಮರು ಪರೀಕ್ಷೆಗೆ ಅವಕಾಶವನ್ನು ನೀಡಲಾಗುತ್ತದೆ. ಫಲಿತಾಂಶ ಪ್ರಕಟವಾದ ದಿನಾಂಕದಿಂದ ಎರಡು ತಿಂಗಳ ಅವಧಿಯಲ್ಲಿ ಮರು ಪರೀಕ್ಷೆ ನಡೆಸಲಾಗುತ್ತದೆ.

ಮರುಪರೀಕ್ಷೆಯಲ್ಲೂ ಪಾಸ್ ಆಗಲು ವಿಫಲವಾದರೆ, ಆ ವಿದ್ಯಾರ್ಥಿಗಳು ಅದೇ ತರಗತಿಯಲ್ಲಿ ಮುಂದುವರೆಯಲು ಅವಕಾಶ ನೀಡಲಾಗುತ್ತದೆ. ಪ್ರಾಥಮಿಕ ಶಿಕ್ಷಣ ಮುಗಿಯುವವರೆಗೆ ಯಾವುದೇ ಶಾಲೆಯಿಂದ ಯಾವುದೇ ಮಗುವನ್ನು ಹೊರಹಾಕುವಂತಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳ ಪ್ರಕಾರ, ಕೇಂದ್ರೀಯ ವಿದ್ಯಾಲಯಗಳು, ನವೋದಯ ವಿದ್ಯಾಲಯಗಳು ಮತ್ತು ಸೈನಿಕ ಶಾಲೆಗಳು ಸೇರಿದಂತೆ ಕೇಂದ್ರ ಸರ್ಕಾರ ನಡೆಸುತ್ತಿರುವ 3,000 ಶಾಲೆಗಳಿಗೆ ಈ ಅಧಿಸೂಚನೆ ಅನ್ವಯಿಸುತ್ತದೆ.

"ಶಾಲಾ ಶಿಕ್ಷಣವು ರಾಜ್ಯದ ವಿಷಯವಾಗಿರುವುದರಿಂದ, ರಾಜ್ಯಗಳು ಈ ವಿಷಯದಲ್ಲಿ ತಮ್ಮ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಈಗಾಗಲೇ ದೆಹಲಿ ಸೇರಿದಂತೆ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಎರಡು ವರ್ಗಗಳಿಗೆ ನೋ-ಡೆಟೆನ್ಷನ್ ನೀತಿಯನ್ನು ತೆಗೆದುಹಾಕಿವೆ" ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT