ರೈತರ ಪ್ರತಿಭಟನೆ PTI
ದೇಶ

ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಲು ರೈತರಿಗೆ ಅವಕಾಶ ನೀಡಬೇಕು: ನರೇಶ್ ಟಿಕಾಯತ್

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅನಗತ್ಯ ಪ್ರತಿಭಟನೆ ಮತ್ತು ರಾಜಕೀಯ ಪಕ್ಷಗಳ ಗದ್ದಲದಿಂದ ರೈತರ ಸಮಸ್ಯೆಗಳು ಗೌಣವಾಗಿರುವುದು ದುರದೃಷ್ಟಕರ ಎಂದರು.

ನವದೆಹಲಿ: ರಾಜಕೀಯ ಪಕ್ಷಗಳಂತೆ ರೈತರು ಸಹ ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ಅಧ್ಯಕ್ಷ ನರೇಶ್ ಟಿಕಾಯತ್ ಅವರು ಸೋಮವಾರ ಒತ್ತಾಯಿಸಿದ್ದಾರೆ.

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಟಿಕಾಯತ್ ಅವರು, ಚೌಧರಿ ಚರಣ್ ಸಿಂಗ್ ಅವರು ರೈತರ ವಕ್ತಾರರಾಗಿದ್ದರು. ಆದರೆ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅನಗತ್ಯ ಪ್ರತಿಭಟನೆ ಮತ್ತು ರಾಜಕೀಯ ಪಕ್ಷಗಳ ಗದ್ದಲದಿಂದ ರೈತರ ಸಮಸ್ಯೆಗಳು ಗೌಣವಾಗಿರುವುದು ದುರದೃಷ್ಟಕರ ಎಂದರು.

BKU ಹವನ-ಯಜ್ಞ ಮಾಡುವ ಮೂಲಕ ಈ ದಿನವನ್ನು "ಕಿಸಾನ್ ಶಕ್ತಿ" ದಿವಸ್ ಎಂದು ಆಚರಿಸಿತು.

"ಯಾವುದೇ ರಾಜಕೀಯ ಪಕ್ಷವು ಗ್ರಾಮೀಣ ಭಾರತದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ರೈತರು ತಮ್ಮ ಬೇಡಿಕೆಗಳ ಕುರಿತು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆಗೆ ಅವಕಾಶ ನೀಡಬೇಕು" ಎಂದು ಅವರು ಹೇಳಿದರು.

ಗ್ರಾಮಗಳು ಮತ್ತು ರೈತರನ್ನು ಪ್ರತಿನಿಧಿಸುತ್ತೇವೆ ಎಂದು ಹೇಳಿಕೊಳ್ಳುವ ಎಲ್ಲಾ ಸಂಸದರು ಮತ್ತು ಶಾಸಕರು ಆಯಾ ಪಕ್ಷಗಳ ನಾಯಕರಾಗಿದ್ದಾರೆ ಹೊರತುಚೌಧರಿ ಚರಣ್ ಸಿಂಗ್ ಅವರಂತೆ ರೈತರ ನಾಯಕರಾಗಿಲ್ಲ ಎಂದು ಟಿಕಾಯತ್ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT