ರೈತರ ಪ್ರತಿಭಟನೆ PTI
ದೇಶ

ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಲು ರೈತರಿಗೆ ಅವಕಾಶ ನೀಡಬೇಕು: ನರೇಶ್ ಟಿಕಾಯತ್

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅನಗತ್ಯ ಪ್ರತಿಭಟನೆ ಮತ್ತು ರಾಜಕೀಯ ಪಕ್ಷಗಳ ಗದ್ದಲದಿಂದ ರೈತರ ಸಮಸ್ಯೆಗಳು ಗೌಣವಾಗಿರುವುದು ದುರದೃಷ್ಟಕರ ಎಂದರು.

ನವದೆಹಲಿ: ರಾಜಕೀಯ ಪಕ್ಷಗಳಂತೆ ರೈತರು ಸಹ ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ಅಧ್ಯಕ್ಷ ನರೇಶ್ ಟಿಕಾಯತ್ ಅವರು ಸೋಮವಾರ ಒತ್ತಾಯಿಸಿದ್ದಾರೆ.

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಟಿಕಾಯತ್ ಅವರು, ಚೌಧರಿ ಚರಣ್ ಸಿಂಗ್ ಅವರು ರೈತರ ವಕ್ತಾರರಾಗಿದ್ದರು. ಆದರೆ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅನಗತ್ಯ ಪ್ರತಿಭಟನೆ ಮತ್ತು ರಾಜಕೀಯ ಪಕ್ಷಗಳ ಗದ್ದಲದಿಂದ ರೈತರ ಸಮಸ್ಯೆಗಳು ಗೌಣವಾಗಿರುವುದು ದುರದೃಷ್ಟಕರ ಎಂದರು.

BKU ಹವನ-ಯಜ್ಞ ಮಾಡುವ ಮೂಲಕ ಈ ದಿನವನ್ನು "ಕಿಸಾನ್ ಶಕ್ತಿ" ದಿವಸ್ ಎಂದು ಆಚರಿಸಿತು.

"ಯಾವುದೇ ರಾಜಕೀಯ ಪಕ್ಷವು ಗ್ರಾಮೀಣ ಭಾರತದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ರೈತರು ತಮ್ಮ ಬೇಡಿಕೆಗಳ ಕುರಿತು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆಗೆ ಅವಕಾಶ ನೀಡಬೇಕು" ಎಂದು ಅವರು ಹೇಳಿದರು.

ಗ್ರಾಮಗಳು ಮತ್ತು ರೈತರನ್ನು ಪ್ರತಿನಿಧಿಸುತ್ತೇವೆ ಎಂದು ಹೇಳಿಕೊಳ್ಳುವ ಎಲ್ಲಾ ಸಂಸದರು ಮತ್ತು ಶಾಸಕರು ಆಯಾ ಪಕ್ಷಗಳ ನಾಯಕರಾಗಿದ್ದಾರೆ ಹೊರತುಚೌಧರಿ ಚರಣ್ ಸಿಂಗ್ ಅವರಂತೆ ರೈತರ ನಾಯಕರಾಗಿಲ್ಲ ಎಂದು ಟಿಕಾಯತ್ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT