ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: ನ್ಯಾಯಾಧೀಶರತ್ತ ಚಪ್ಪಲಿ ಎಸೆದ ಕೊಲೆ ಆರೋಪಿ! ಪ್ರಕರಣ ದಾಖಲು

ಕಲ್ಯಾಣ್ ಪಟ್ಟಣದ ಕೋರ್ಟ್ ನಲ್ಲಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ.ತದನಂತರ ಆರೋಪಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಹೀಗೆ ಮಾಡಿದ ಆರೋಪಿಯನ್ನು ಕಿರಣ್ ಸಂತೋಷ್ ಭರಮ್ ಎಂದು ಗುರುತಿಸಲಾಗಿದೆ.

ಥಾಣೆ: ಪ್ರಕರಣವೊಂದರ ವಿಚಾರಣೆ ವೇಳೆಯಲ್ಲಿ 22 ವರ್ಷದ ಕೊಲೆ ಆರೋಪಿಯೊಬ್ಬ ನ್ಯಾಯಾಧೀಶರತ್ತ ಚಪ್ಪಲಿ ಎಸೆದಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಜಿಲ್ಲಾ ಸೆಷನ್ಸ್ ಕೋರ್ಟಿನಲ್ಲಿ ನಡೆದಿದೆ. ಚಪ್ಪಲಿ ಜಡ್ಜ್ ಗೆ ತಾಕಿಲ್ಲ. ಬದಲಿಗೆ ಅವರ ಮೇಜಿನ ಮುಂಭಾಗದ ಮರದ ಪಟ್ಟಿಗೆ ಹೊಡೆದಿದ್ದು, ಕ್ಲರ್ಕ್ ಬೆಂಚ್ ಕಡೆಯಿಂದ ಕೆಳಗೆ ಬಿದ್ದಿದೆ.

ಕಲ್ಯಾಣ್ ಪಟ್ಟಣದ ಕೋರ್ಟ್ ನಲ್ಲಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ.ತದನಂತರ ಆರೋಪಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಹೀಗೆ ಮಾಡಿದ ಆರೋಪಿಯನ್ನು ಕಿರಣ್ ಸಂತೋಷ್ ಭರಮ್ ಎಂದು ಗುರುತಿಸಲಾಗಿದೆ.

ಕೊಲೆ ಪ್ರಕರಣವೊಂದರ ವಿಚಾರಣೆಗಾಗಿ ಆತನನ್ನು ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಆರ್. ಜಿ ವಾಗ್ಮರೆ ಅವರ ಮುಂದೆ ಹಾಜರುಪಡಿಸಿದಾಗ ಅವರತ್ತ ಆರೋಪಿ ಚಪ್ಪಲಿ ಎಸೆದಿರುವುದಾಗಿ ಮಹಾತ್ಮ ಪುಲೆ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮತ್ತೊಂದು ಕೋರ್ಟ್ ಗೆ ತನ್ನ ಕೇಸ್ ನ್ನು ವರ್ಗಾಯಿಸುವಂತೆ ಆರೋಪಿ ನ್ಯಾಯಾಧೀಶರ ಬಳಿ ಮನವಿ ಮಾಡಿದ್ದಾನೆ. ಇದೇ ರೀತಿಯಲ್ಲಿ ವಕೀಲರ ಮೂಲಕ ಅರ್ಜಿ ಸಲ್ಲಿಸುವಂತೆ ನ್ಯಾಯಾಧೀಶರು ಆರೋಪಿಗೆ ಹೇಳಿದ್ದಾರೆ. ಬಳಿಕ ಆರೋಪಿ ಪರ ವಕೀಲರನ್ನು ಕರೆಯಲಾಗಿದೆ. ಆದರೆ ವಕೀಲರು ನ್ಯಾಯಾಲಯದಲ್ಲಿ ಇರಲಿಲ್ಲ. ಹೀಗಾಗಿ ವಕಾಲತ್ತು ವಹಿಸಲು ಮತ್ತೊಬ್ಬ ವಕೀಲರ ಹೆಸರನ್ನು ನೀಡುವಂತೆ ಹೇಳಿ, ನ್ಯಾಯಾಲಯ ಹೊಸ ದಿನಾಂಕವನ್ನು ನೀಡಿದೆ. ಇದರಿಂದ ರೊಚ್ಚಿದ ಆರೋಪಿ ಜಡ್ಜ್ ಅವರತ್ತ ಚಪ್ಪಲಿ ಎಸೆದಿದ್ದಾರೆ.

ಈ ಅನಿರೀಕ್ಷಿತ ಘಟನೆ ಕಂಡು ಕೋರ್ಟ್ ನಲ್ಲಿದ್ದವರೆಲ್ಲಾ ದಂಗಾದರು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 132 ( ಹಲ್ಲೆ ಅಥವಾ ಕ್ರಿಮಿನಲ್ ಶಕ್ತಿಯಿಂದ ಸರ್ಕಾರಿ ಸೇವಕ ಕರ್ತವ್ಯ ನಿರ್ವಹಣೆಗೆ ಅಡ್ಡಿ) 125 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕ್ರಿಯೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT