ಕ್ರಿಸ್ ಮಸ್ ಆಚರಣೆ ವೇಳೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ online desk
ದೇಶ

ಕ್ರಿಸ್ತನ ಬೋಧನೆಗಳು ಪ್ರೀತಿ, ಸಾಮರಸ್ಯ ಮತ್ತು ಸಹೋದರತ್ವವನ್ನು ಸಾರುತ್ತವೆ: ಕ್ರಿಸ್‌ಮಸ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ

ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಮಾತನಾಡಿದ ಮೋದಿ, ಹಿಂಸಾಚಾರವನ್ನು ಹರಡುವ ಮತ್ತು ಸಮಾಜದಲ್ಲಿ ವಿಘಟನೆಯನ್ನು ಉಂಟುಮಾಡುವ ಪ್ರಯತ್ನಗಳು ನಡೆದಾಗ ಅದು ತಮ್ಮ ಹೃದಯವನ್ನು ನೋಯಿಸುತ್ತದೆ ಎಂದು ಪ್ರತಿಪಾದಿಸಿದರು.

ನವದೆಹಲಿ: ಭಗವಾನ್ ಕ್ರಿಸ್ತನ ಬೋಧನೆಗಳು ಪ್ರೀತಿ, ಸೌಹಾರ್ದತೆ ಮತ್ತು ಭ್ರಾತೃತ್ವವನ್ನು ಕೊಂಡಾಡುತ್ತವೆ ಮತ್ತು ಈ ಚೈತನ್ಯವನ್ನು ಬಲಪಡಿಸಲು ಎಲ್ಲರೂ ಕೆಲಸ ಮಾಡುವುದು ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಮಾತನಾಡಿದ ಮೋದಿ, ಹಿಂಸಾಚಾರವನ್ನು ಹರಡುವ ಮತ್ತು ಸಮಾಜದಲ್ಲಿ ವಿಘಟನೆಯನ್ನು ಉಂಟುಮಾಡುವ ಪ್ರಯತ್ನಗಳು ನಡೆದಾಗ ಅದು ತಮ್ಮ ಹೃದಯವನ್ನು ನೋಯಿಸುತ್ತದೆ ಎಂದು ಪ್ರತಿಪಾದಿಸಿದರು.

ಭಾರತ ಅಳವಡಿಸಿಕೊಂಡ ಮಾನವ ಕೇಂದ್ರಿತ ವಿಧಾನ ಮಾತ್ರ 21ನೇ ಶತಮಾನದ ಜಗತ್ತನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂದು ಅವರು ಒತ್ತಿ ಹೇಳಿದರು.

ಜರ್ಮನಿಯಲ್ಲಿ ಕ್ರಿಸ್‌ಮಸ್ ಮಾರುಕಟ್ಟೆ ದಾಳಿ ಮತ್ತು ಶ್ರೀಲಂಕಾದಲ್ಲಿ 2019 ರ ಈಸ್ಟರ್ ಬಾಂಬ್ ದಾಳಿಯನ್ನು ಉಲ್ಲೇಖಿಸಿದ ಮೋದಿ, ಒಗ್ಗಟ್ಟಿನಿಂದ ಇಂತಹ ಸವಾಲುಗಳನ್ನು ಎದುರಿಸುವುದು ಮುಖ್ಯ ಎಂದು ಹೇಳಿದರು.

ಕ್ಯಾಥೋಲಿಕ್ ಚರ್ಚ್ ಇನ್ ಇಂಡಿಯಾ (ಸಿಬಿಸಿಐ) ಪ್ರಧಾನ ಕಚೇರಿಯಲ್ಲಿ ಪ್ರಧಾನಿಯೊಬ್ಬರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಇದೇ ಮೊದಲಾಗಿದೆ. "ಒಂದು ದಶಕದ ಹಿಂದೆ ನಾವು ಯುದ್ಧಪೀಡಿತ ಅಫ್ಘಾನಿಸ್ತಾನದಿಂದ ಫಾದರ್ ಅಲೆಕ್ಸಿಸ್ ಪ್ರೇಮ್ ಕುಮಾರ್ ಅವರನ್ನು ಸುರಕ್ಷಿತವಾಗಿ ಕರೆತಂದಾಗ ನನಗೆ ಅದು ತುಂಬಾ ತೃಪ್ತಿಕರ ಕ್ಷಣವಾಗಿತ್ತು. ಅವರು ಎಂಟು ತಿಂಗಳ ಕಾಲ ಅಲ್ಲಿ ಸಿಲುಕಿಕೊಂಡರು ಮತ್ತು ಒತ್ತೆಯಾಳಾಗಿದ್ದರು. ನಮಗೆ, ಈ ಎಲ್ಲಾ ಕಾರ್ಯಾಚರಣೆಗಳು ಕೇವಲ ರಾಜತಾಂತ್ರಿಕವಲ್ಲ. ಮಿಷನ್‌ಗಳು, ಕುಟುಂಬ ಸದಸ್ಯರನ್ನು ಮರಳಿ ಕರೆತರುವ ಭಾವನಾತ್ಮಕ ಬದ್ಧತೆ" ಎಂದು ಮೋದಿ ಹೇಳಿದ್ದಾರೆ.

ಅವರು ಎಲ್ಲೇ ಇದ್ದರೂ ಅಥವಾ ಅವರು ಯಾವುದೇ ಬಿಕ್ಕಟ್ಟನ್ನು ಎದುರಿಸುತ್ತಿರಲಿ, ಇಂದಿನ ಭಾರತವು ತನ್ನ ನಾಗರಿಕರನ್ನು ಸುರಕ್ಷಿತವಾಗಿ ಕರೆತರುವುದು ತನ್ನ ಕರ್ತವ್ಯವೆಂದು ಪರಿಗಣಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗ ಬಂದಾಗ, ಮಾನವ ಹಕ್ಕುಗಳ ಬಗ್ಗೆ ದೊಡ್ಡದಾಗಿ ಮಾತನಾಡುವ ಅನೇಕ ದೇಶಗಳು ಬಡ ದೇಶಗಳಿಗೆ ಸಹಾಯ ಮಾಡುವುದರಿಂದ ಹಿಂದೆ ಸರಿದವು ಎಂದು ಮೋದಿ ಇದೇ ವೇಳೆ ಹೇಳಿದ್ದಾರೆ.

ಕೋವಿಡ್ ಸಮಯದಲ್ಲಿ ಬಡ ದೇಶಗಳಿಗೆ ಸಹಾಯ ಮಾಡಲು ಭಾರತ ತನ್ನ ಸಾಮರ್ಥ್ಯವನ್ನು ಮೀರಿ ಚಲಿಸಿದೆ ಮತ್ತು 150 ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಔಷಧಿಗಳನ್ನು, ಲಸಿಕೆಗಳನ್ನು ಒದಗಿಸಿದೆ ಎಂದು ಅವರು ಹೇಳಿದರು.

ವಿಕ್ಷಿತ್ ಭಾರತ್‌ನ ಕನಸು ಖಂಡಿತವಾಗಿ ನನಸಾಗಲಿದೆ ಎಂಬ ವಿಶ್ವಾಸವನ್ನು ನಮ್ಮ ಯುವಕರು ನೀಡಿದ್ದಾರೆ ಎಂದು ಮೋದಿ ಹೇಳಿದ್ದಾರೆ. ಪೋಪ್ ಫ್ರಾನ್ಸಿಸ್ ಅವರು ಜಾರ್ಜ್ ಕೂವಕಾಡ್ ಅವರನ್ನು ಹೋಲಿ ರೋಮನ್ ಕ್ಯಾಥೋಲಿಕ್ ಚರ್ಚ್‌ನ ಕಾರ್ಡಿನಲ್ ಆಗಿ ಮಾಡಿರುವುದು ಹೆಮ್ಮೆಯ ಕ್ಷಣವಾಗಿದೆ ಎಂದು ಮೋದಿ ಇದೇ ವೇಳೆ ತಿಳಿಸಿದ್ದಾರೆ.

ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (CBCI) ಅನ್ನು 1944 ರಲ್ಲಿ ಸ್ಥಾಪಿಸಲಾಯಿತು ಮತ್ತು ಇದು ಭಾರತದಾದ್ಯಂತ ಎಲ್ಲಾ ಕ್ಯಾಥೋಲಿಕ್‌ಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುವ ಸಂಸ್ಥೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT