ಸಂಸತ್ ಆವರಣದಲ್ಲಿ ಹೈಡ್ರಾಮಾ-ಗಾಯಗೊಂಡ ಬಿಜೆಪಿ ಸಂಸದ 
ದೇಶ

ಸಂಸತ್ ಆವರಣದಲ್ಲಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ ಪ್ರಕರಣ: ಗಾಯಗೊಂಡಿದ್ದ ಇಬ್ಬರು BJP ಸಂಸದರು ಆಸ್ಪತ್ರೆಯಿಂದ ಡಿಸ್ಚಾರ್ಜ್

ಒಡಿಶಾದ ಪ್ರತಾಪ್ ಸಾರಂಗಿ (69) ಮತ್ತು ಉತ್ತರ ಪ್ರದೇಶದ ಮುಖೇಶ್ ರಜಪೂತ್ ಅವರು ರಾಮ್ ಮನೋಹರ್ ಲೋಹಿಯಾ (ಆರ್‌ಎಂಎಲ್) ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ನವದೆಹಲಿ: 'ಸಂವಿಧಾನ ಶಿಲ್ಪಿ' ಡಾ. ಬಿ.ಆರ್‌ ಅಂಬೇಡ್ಕರ್‌ ಅವರ ವಿಚಾರವಾಗಿ ಸಂಸತ್ ಭವನದ ಆವರಣದಲ್ಲಿ ನಡೆದ ಪ್ರತಿಭಟನೆ ವೇಳೆ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಬಿಜೆಪಿ ಸಂಸದರು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಒಡಿಶಾದ ಪ್ರತಾಪ್ ಸಾರಂಗಿ (69) ಮತ್ತು ಉತ್ತರ ಪ್ರದೇಶದ ಮುಖೇಶ್ ರಜಪೂತ್ ಅವರು ರಾಮ್ ಮನೋಹರ್ ಲೋಹಿಯಾ (ಆರ್‌ಎಂಎಲ್) ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇಬ್ಬರು ಸಂಸದರ ಆರೋಗ್ಯ ಸ್ಥಿತಿ ಈಗ ಸುಧಾರಿಸಿದ್ದು, ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇಬ್ಬರಿಗೂ ಐಸಿಯುನಲ್ಲಿರಿಸಿ ನಿಗಾ ಇರಿಸಲಾಗಿತ್ತು. ಶನಿವಾರ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಸಾರಂಗಿ ಅವರಿಗೆ ಹೃದಯದ ಸಮಸ್ಯೆ ಇದ್ದು, ಸ್ಟೆಂಟ್ ಹಾಕಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಎಂಆರ್‌ಐ ಮತ್ತು ಸಿಟಿ ಸ್ಕ್ಯಾನ್‌ಗಳಲ್ಲಿ ದೊಡ್ಡ ಸಮಸ್ಯೆಗಳು ಕಂಡು ಬಂದಿಲ್ಲ. ಆಸ್ಪತ್ರೆಗೆ ಕರೆತಂದಾಗ ಸಾರಂಗಿ ಅವರ ತಲೆಯಿಂದ ತೀವ್ರ ರಕ್ತಸ್ರಾವವಾಗುತ್ತಿತ್ತು. ಹಣೆಯ ಮೇಲೆ ಆಳವಾಗ ಗಾಯವಾಗಿತ್ತು. ನಂತರ ಹೊಲಿಗೆ ಹಾಕಬೇಕಾಗಿತ್ತು. ರಜಪೂತ್ ಅವರ ತಲೆಗೂ ಗಾಯವಾಗಿತ್ತು, ಪ್ರಜ್ಞೆ ಕಳೆದುಕೊಂಡಿದ್ದರು. ಆದರೆ, ಆಸ್ಪತ್ರೆಗೆ ಕರೆತರುವಾಗ ಪ್ರಜ್ಞೆ ಬಂದಿತ್ತು. ರಕ್ತದೊತ್ತಡದ ಹೆಚ್ಚಾಗಿರುವುದು ಕಂಡು ಬಂದಿತ್ತು. ಇಬ್ಬರ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನ್‌ಗಳಲ್ಲಿ ದೊಡ್ಡ ಸಮಸ್ಯೆಗಳೇನು ಕಂಡುಬಂದಿರಲಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

SCROLL FOR NEXT