ಆರೀಫ್ ಮೊಹಮ್ಮದ್ ಖಾನ್ (ಎಡಭಾಗದ ಚಿತ್ರ), ಮಾಜಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ  
ದೇಶ

ಆರೀಫ್ ಮೊಹಮ್ಮದ್ ಖಾನ್ ಕೇರಳದಿಂದ ಬಿಹಾರಕ್ಕೆ, ಗಲಭೆಪೀಡಿತ ಮಣಿಪುರಕ್ಕೆ ಮಾಜಿ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ರಾಜ್ಯಪಾಲರಾಗಿ ನೇಮಕ

ರಾಷ್ಟ್ರಪತಿ ಭವನ ಈ ಬಗ್ಗೆ ಅಧಿಕೃತ ಆದೇಶ ಪ್ರಕಟಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಕೇರಳದ ರಾಜ್ಯಪಾಲರಾಗಿದ್ದ ಆರೀಫ್ ಮೊಹಮ್ಮದ್ ಖಾನ್ ಅವರನ್ನು ಬಿಹಾರಕ್ಕೆ ವರ್ಗಾವಣೆ ಮಾಡಲಾಗಿದೆ.

ಪಾಟ್ನಾ: ರಾಷ್ಟ್ರಪತಿ ದ್ರೌಪದಿ ಮುರ್ಮು ಹಲವು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.

ರಾಷ್ಟ್ರಪತಿ ಭವನ ಈ ಬಗ್ಗೆ ಅಧಿಕೃತ ಆದೇಶ ಪ್ರಕಟಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಕೇರಳದ ರಾಜ್ಯಪಾಲರಾಗಿದ್ದ ಆರೀಫ್ ಮೊಹಮ್ಮದ್ ಖಾನ್ ಅವರನ್ನು ಬಿಹಾರಕ್ಕೆ ವರ್ಗಾವಣೆ ಮಾಡಲಾಗಿದೆ.

ಕೇರಳದಲ್ಲಿ ಆರೀಫ್ ಮೊಹಮ್ಮದ್ ಖಾನ್ ಅವರ ಅವಧಿಯಲ್ಲಿ ಹಲವು ವಿವಾದಗಳು ಉಂಟಾಗಿದ್ದವು, ಪ್ರಮುಖವಾಗಿ ಸಿಪಿಐ(ಎಂ) ಸರ್ಕಾರದೊಂದಿಗೆ ಅವರ ತಿಕ್ಕಾಟ ಸುದ್ದಿಯಲ್ಲಿರುತ್ತಿತ್ತು.

ಬಿಹಾರದ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಮತ್ತೊಂದು ಪ್ರಮುಖ ಬೆಳವಣಿಗೆಯಲ್ಲಿ, ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರನ್ನು ಮಣಿಪುರದ ನೂತನ ಗವರ್ನರ್ ಆಗಿ ನೇಮಿಸಲಾಗಿದೆ.

ಮಣಿಪುರ ಕಳೆದ ವರ್ಷ ಮೇ ತಿಂಗಳಿನಿಂದ ಮೈಟೈಸ್ ಮತ್ತು ಕುಕಿ-ಜೋ ಗುಂಪುಗಳ ನಡುವಿನ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಇದರ ಪರಿಣಾಮವಾಗಿ 250 ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು, ಸಾವಿರಾರು ಮಂದಿ ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ.

ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿಜಯ್ ಕುಮಾರ್ ಸಿಂಗ್ ಅವರನ್ನು ಮಿಜೋರಾಂ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಹೆಚ್ಚುವರಿಯಾಗಿ, ಮಿಜೋರಾಂನ ಗವರ್ನರ್ ಡಾ. ಹರಿ ಬಾಬು ಕಂಬಂಪತಿ ಅವರನ್ನು ಒಡಿಶಾದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಒಡಿಶಾದ ರಾಜ್ಯಪಾಲರಾಗಿರುವ ರಘುಬರ್ ದಾಸ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!