ಲೋಕಸಭೆ ಸಾಂದರ್ಭಿಕ ಚಿತ್ರ 
ದೇಶ

'ಒಂದು ರಾಷ್ಟ್ರ ಒಂದು ಚುನಾವಣೆ': ಜನವರಿ 8ಕ್ಕೆ ಜಂಟಿ ಸದನ ಸಮಿತಿ ಮೊದಲ ಸಭೆ

ಬಿಜೆಪಿ ಸದಸ್ಯ ಪಿ ಪಿ ಚೌಧರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಅಧಿಕಾರಿಗಳು ಮಸೂದೆ ಕುರಿತು ವಿವರ ನೀಡಲಿದ್ದಾರೆ.

ನವದೆಹಲಿ: ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶದ ಚುನಾವಣಾ ಸುಧಾರಣೆಯ ಮಸೂದೆ ಕುರಿತು ಚರ್ಚಿಸಲು ಜನವರಿ 8 ರಂದು 39 ಸದಸ್ಯರ ಮೊದಲ ಜಂಟಿ ಸಂಸದೀಯ ಸಮಿತಿಯ ಸಭೆ ನಡೆಯಲಿದೆ.

ಬಿಜೆಪಿ ಸದಸ್ಯ ಪಿ ಪಿ ಚೌಧರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಅಧಿಕಾರಿಗಳು ಮಸೂದೆ ಕುರಿತು ವಿವರ ನೀಡಲಿದ್ದಾರೆ.

ಸಂವಿಧಾನ (129 ನೇ ತಿದ್ದುಪಡಿ) ಮಸೂದೆ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ಕಳೆದ ವಾರ ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಸಂಸತ್ತಿನ ಜಂಟಿ ಸದನ ಸಮಿತಿಗೆ ಒಪ್ಪಿಸಲಾಗಿತ್ತು.

ಏಕಕಾಲದಲ್ಲಿ ಚುನಾವಣೆ ನಡೆಸುವ ಎರಡು ಕರಡು ಶಾಸನಗಳನ್ನು ಪರಿಶೀಲಿಸುವ ಭಾಗವಾಗಲು ಹೆಚ್ಚಿನ ರಾಜಕೀಯ ಪಕ್ಷಗಳು ಇಚ್ಛೆ ವ್ಯಕ್ತಪಡಿಸಿದ್ದರಿಂದ ಸಮಿತಿಯ ಸದಸ್ಯರ ಸಂಖ್ಯೆಯನ್ನು 31 ರಿಂದ 39 ಕ್ಕೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿತ್ತು.

ಸಮಿತಿಯಲ್ಲಿ ಮಾಜಿ ಕೇಂದ್ರ ಸಚಿವರಾದ ಅನುರಾಗ್ ಠಾಕೂರ್, ಪುರುಷೋತ್ತಮ್ ರೂಪಾಲಾ ಮತ್ತು ಮನೀಶ್ ತಿವಾರಿ ಹಾಗೂ ಹೊಸದಾಗಿ ಸಂಸದರಾಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಬಾನ್ಸುರಿ ಸ್ವರಾಜ್ ಮತ್ತು ಸಂಬಿತ್ ಪಾತ್ರ ಸೇರಿದಂತೆ ಹಲವು ಮಂದಿ ಸದಸ್ಯರಾಗಿದ್ದಾರೆ. ಲೋಕಸಭೆಯಿಂದ 27 ಮತ್ತು ರಾಜ್ಯಸಭೆಯಿಂದ 12 ಸದಸ್ಯರನ್ನು ಸಮಿತಿ ಹೊಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

ಇರಾನ್ ವಿದೇಶಾಂಗ ಸಚಿವ- ಎಸ್ ಜೈಶಂಕರ್ ಮಾತುಕತೆ: ಪ್ರಾದೇಶಿಕ ಸಮರದ ಬಗ್ಗೆ ಆತಂಕ, ಹಡಗುಗಳ ಮೇಲೆ ದಾಳಿ ನಡೆಸದಂತೆ ಒತ್ತಾಯ

ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!

'ಕರ್ನಾಟಕಕ್ಕೆ ನೀರು ನೀಡಲು ನಮ್ಮ ವಿರೋಧವಿಲ್ಲ.. ಆದ್ರೆ ಮೇಕೆದಾಟು ಬೇಡ": ಕಾವೇರಿ ವಿವಾದ ಕುರಿತು AIADMK ಸಂಸದ ಎಂ. ತಂಬಿದುರೈ

ಭಾರಿ ಮಳೆಗೆ ಉತ್ತರ ತತ್ತರ; ಹಿಮಾಚಲದಲ್ಲಿ ವರುಣನ ಅಬ್ಬರ, ಧರ್ಮಶಾಲಾದಲ್ಲಿ ದಾಖಲೆಯ 149 ಮಿ.ಮೀ. ಮಳೆ