ಪಂಜಾಬ್ ಸಿಎಂ ಭಗವಂತ್ ಮಾನ್ 
ದೇಶ

ಕೇಂದ್ರ ಸರ್ಕಾರ ಮೊಂಡುತನ ಬಿಟ್ಟು ಪ್ರತಿಭಟನಾ ನಿರತ ರೈತರೊಂದಿಗೆ ಮಾತನಾಡಲಿ: ಪಂಜಾಬ್ ಸಿಎಂ ಭಗವಂತ್ ಮಾನ್

ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ರೈತರು ಕಳೆದ ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ.

ಚಂಡೀಗಢ: ಕೇಂದ್ರ ಸರ್ಕಾರ ಮೊಂಡುತನ ಬಿಟ್ಟು ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಮಾತುಕತೆ ನಡೆಸಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮಂಗಳವಾರ ಆಗ್ರಹಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ರೈತರು ಕಳೆದ ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ.

ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಪಂಜಾಬ್‌ನ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ನವೆಂಬರ್ 26 ರಿಂದ ಖಾನೌರಿ ಗಡಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಅವರ ಉಪವಾಸವು ಭಾನುವಾರ 27ನೇ ದಿನಕ್ಕೆ ಕಾಲಿಟ್ಟಿದ್ದು, ವೈದ್ಯರು ಅವರ ಆರೋಗ್ಯ ಸ್ಥಿತಿ "ಚಿಂತಾಜನಕ"ವಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ತನ್ನ ಮೊಂಡುತನವನ್ನು ಬಿಟ್ಟು ರೈತ ಸಂಘಟನೆಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ಎಕ್ಸ್‌ನಲ್ಲಿ ಪಂಜಾಬ್ ಸಿಎಂ ಪೋಸ್ಟ್ ಮಾಡಿದ್ದಾರೆ.

"ಮೋದಿ ಜಿಯಿಂದ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ನಿಲ್ಲಿಸಲು ಸಾಧ್ಯವಾಗುವುದಾದರೆ ದೆಹಲಿಯಿಂದ 200 ಕಿಲೋಮೀಟರ್ ದೂರದಲ್ಲಿ ಕುಳಿತಿರುವ ರೈತರೊಂದಿಗೆ ಮಾತನಾಡಲು ಸಾಧ್ಯವಾಗುತ್ತಿಲ್ಲವೇ? ನೀವು ಯಾವ ಸಮಯಕ್ಕಾಗಿ ಕಾಯುತ್ತಿದ್ದೀರಿ?" ಎಂದು ಮಾನ್ ಪ್ರಶ್ನಿಸಿದ್ದಾರೆ.

ಇದು ಕೇಂದ್ರ ಸರ್ಕಾರದ ಕರ್ತವ್ಯವಾಗಿದ್ದು, ಯಾವುದೇ ಸಮಸ್ಯೆ ಇದ್ದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ಪಂಜಾಬ್ ಸಿಎಂ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!