ಸಾಂದರ್ಭಿಕ ಚಿತ್ರ 
ದೇಶ

ರಾಮೇಶ್ವರಂ: ಅಗ್ನಿತೀರ್ಥಂ ಬೀಚ್‌ ಬಳಿ ಹಿಡನ್ ಕ್ಯಾಮರಾ ಇಟ್ಟು ಮಹಿಳೆಯರ ಚಿತ್ರೀಕರಣ, ಇಬ್ಬರ ಬಂಧನ

ಬಂಧಿತ ಇಬ್ಬರನ್ನು ರಾಜೇಶ್ ಕಣ್ಣನ್ ಮತ್ತು ಆತನ ಸ್ನೇಹಿತ ಮೀರಾನ್ ಮೊಯ್ದೀನ್ ಎಂದು ಗುರುತಿಸಲಾಗಿದೆ.

ರಾಮೇಶ್ವರಂ: ಹಿಂದೂಗಳ ಪವಿತ್ರ ಕ್ಷೇತ್ರ ರಾಮೇಶ್ವರಂನ ಅಗ್ನಿತೀರ್ಥಂ ಬೀಚ್‌ನಲ್ಲಿ ಡ್ರೆಸ್ ಬದಲಾಯಿಸುವ ಕೊಠಡಿಯೊಳಗೆ ರಹಸ್ಯ ಕ್ಯಾಮೆರಾ ಬಳಸಿ ಮಹಿಳೆಯರನ್ನು ಚಿತ್ರೀಕರಿಸಿದ ಇಬ್ಬರನ್ನು ಬಂಧಿಸಲಾಗಿದೆ. ರಾಮೇಶ್ವಂರ ರಾಮನಾಥಸ್ವಾಮಿ ದೇವಾಲಯಕ್ಕೆ ಹೆಸರುವಾಸಿಯಾಗಿದೆ.

ಬಂಧಿತ ಇಬ್ಬರನ್ನು ರಾಜೇಶ್ ಕಣ್ಣನ್ ಮತ್ತು ಆತನ ಸ್ನೇಹಿತ ಮೀರಾನ್ ಮೊಯ್ದೀನ್ ಎಂದು ಗುರುತಿಸಲಾಗಿದೆ. ಸೋಮವಾರ ಪುದುಕೊಟ್ಟೈ ಮೂಲದ ಮಹಿಳೆಯೊಬ್ಬರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮೆರಾವನ್ನು ಪತ್ತೆ ಹಚ್ಚಿದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನು ಕಂಡು ಬೆಚ್ಚಿಬಿದ್ದ ಮಹಿಳೆ ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ಪೊಲೀಸರು ಹುಡುಕಾಟ ನಡೆಸಿದಾಗ ಹಿಡನ್ ಕ್ಯಾಮರಾ ಪತ್ತೆಯಾಗಿದೆ.

ರಾಮೇಶ್ವರಂ ಪಟ್ಟಣವು ಅರವತ್ತನಾಲ್ಕು 'ತೀರ್ಥಗಳು' ಅಥವಾ ಪವಿತ್ರ ಜಲಮೂಲಗಳನ್ನು ಒಳಗೊಂಡಿದೆ. ಇವುಗಳಲ್ಲಿ 22 ರಾಮನಾಥಸ್ವಾಮಿ ದೇವಸ್ಥಾನದ ವ್ಯಾಪ್ತಿಯಲ್ಲಿವೆ. ಈ ತೀರ್ಥಗಳಲ್ಲಿ ಸ್ನಾನ ಮಾಡುವುದು ತಪಸ್ಸಿಗೆ ಸಮ ಎಂಬುದು ನಂಬಿಕೆಯಾಗಿದೆ.

ಅಗ್ನಿತೀರ್ಥಂ ಬೀಚ್‌ ರಾಮೇಶ್ವರಂನ ಪ್ರಮುಖ ಯಾತ್ರಾ ಕ್ಷೇತ್ರಗಳಲ್ಲಿ ಒಂದಾಗಿದೆ. ಅಗ್ನಿ ತೀರ್ಥವನ್ನು ದೇವಾಲಯಕ್ಕೆ ಸಂಬಂಧಿಸಿದ ಪ್ರಾಥಮಿಕ ಕಡಲತೀರವೆಂದು ಪರಿಗಣಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT