ಜಮ್ಮು ಕಾಶ್ಮೀರ ಹೈಕೋರ್ಟ್ 
ದೇಶ

ಮಹಿಳಾ ವಕೀಲರು ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ: ಜಮ್ಮು-ಕಾಶ್ಮೀರ ಹೈಕೋರ್ಟ್

ಡಿ.13ರಂದು ಸೈಯದ್ ಐನೈನ್ ಖಾದ್ರಿ ಎಂದು ಪರಿಚಯಿಸಿಕೊಂಡ ಮಹಿಳಾ ವಕೀಲರೊಬ್ಬರು ಮುಖ ಮುಚ್ಚಿಕೊಂಡು ನ್ಯಾಯಾಲಯದಲ್ಲಿ ವಾದ ಮಂಡಿಸಲು ಹಾಜರಾಗಿದ್ದರು.

ಶ್ರೀನಗರ: ಬಾರ್ ಕೌನ್ಸಿಲ್ ಆಫ್ ಇಂಡಿಯಾದ ವಸ್ತ್ರ ಸಂಹಿತೆ ನಿಯಮಗಳ ಪ್ರಕಾರ ಮಹಿಳಾ ವಕೀಲರು ಬುರ್ಖಾ ಧರಿಸಿ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ಆದೇಶಿಸಿದೆ.

ಡಿ.13ರಂದು ಸೈಯದ್ ಐನೈನ್ ಖಾದ್ರಿ ಎಂದು ಪರಿಚಯಿಸಿಕೊಂಡ ಮಹಿಳಾ ವಕೀಲರೊಬ್ಬರು ಮುಖ ಮುಚ್ಚಿಕೊಂಡು ನ್ಯಾಯಾಲಯದಲ್ಲಿ ವಾದ ಮಂಡಿಸಲು ಹಾಜರಾಗಿದ್ದರು. ಇದನ್ನು ಗಮನಿಸಿದ ನ್ಯಾಯಾಲಯ, ಬುರ್ಖಾ ಧರಿಸಿ ನ್ಯಾಯಾಲಯದಲ್ಲಿ ಹಾಜರಾಗುವಂತಿಲ್ಲ ಎಂದು ಹೇಳಿತು. ನ್ಯಾಯಮೂರ್ತಿ ಮೋಕ್ಷಾ ಖಜುರಿಯಾ ಕಜ್ಮಿ ಅವರು ಡಿಸೆಂಬರ್ 13 ರ ಆದೇಶದಲ್ಲಿ ಅವಲೋಕನಗಳನ್ನು ಮಾಡುವಾಗ ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಅಡಿಯಲ್ಲಿ ನಿಬಂಧನೆಗಳನ್ನು ಉಲ್ಲೇಖಿಸಿದ್ದಾರೆ.ಈ ಆದೇಶವು ನವೆಂಬರ್ 27 ರಂದು ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿ ರಾಹುಲ್ ಭಾರ್ತಿ ಅವರು , ಸೈಯದ್ ಐನೈನ್ ಖಾದ್ರಿ ಎಂಬ ಮಹಿಳೆ ತನ್ನನ್ನು ತಾನು ವಕೀಲೆ ಎಂದು ಗುರುತಿಸಿಕೊಂಡ ಘಟನೆಗೆ ಸಂಬಂಧಿಸಿದೆ. ಮುಖವನ್ನು ಮುಚ್ಚಿಕೊಂಡು ಕಾಣಿಸಿಕೊಳ್ಳುವುದು ತನ್ನ ಹಕ್ಕು ಎಂದು ಮಹಿಳೆ ಹೇಳಿಕೊಂಡಿದ್ದು, ಮುಸುಕು ತೆಗೆಯುವಂತೆ ನ್ಯಾಯಾಲಯವು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕೌಟುಂಬಿಕ ಹಿಂಸಾಚಾರದ ದೂರು ರದ್ದುಗೊಳಿಸುವಂತೆ ಕೋರಿದ ಪ್ರಕರಣದಲ್ಲಿ ತಾನು ಅರ್ಜಿದಾರರನ್ನು ಪ್ರತಿನಿಧಿಸುತ್ತಿದ್ದೇನೆ ಎಂದು ಅವರು ನ್ಯಾಯಾಲಯಕ್ಕೆ ಹೇಳಿದರು. ಆದರೆ ಬುರ್ಖಾ ತೆಗೆದು ವಾದ ಮಂಡಿಸುವಂತೆ ನ್ಯಾಯಮೂರ್ತಿ ರಾಹುಲ್ ಭಾರತಿ ಸೂಚಿಸಿದಾಗ, ಅದು ತನ್ನ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಹೇಳಿ ಬುರ್ಖಾ ತೆಗೆಯಲು ನಿರಾಕರಿಸಿದ್ದರು. ಹೀಗಾಗಿ ಮಹಿಳಾ ವಕೀಲರ ಗುರುತು ಪರಿಚಯಗಳನ್ನು ಖಾತರಿಪಡಿಸಿಕೊಳ್ಳಲು ಸಾಧ್ಯವಾಗದ್ದರಿಂದ ನ್ಯಾಯಾಲಯ ಆಕೆ ವಾದ ಮಂಡನೆ ಮಾಡದಂತೆ ನಿರ್ಬಂಧಿಸಿತು. ವ್ಯಕ್ತಿಯಾಗಿ ಮತ್ತು ವೃತ್ತಿಪರವಾಗಿ ಅವರ ನಿಜವಾದ ಗುರುತನ್ನು ದೃಢೀಕರಿಸಲು ಈ ನ್ಯಾಯಾಲಯಕ್ಕೆ ಸಾಧ್ಯವಾಗದಿರುವುದರಿಂದ ತನ್ನನ್ನು ವಕೀಲೆ ಸೈಯದ್ ಐನೈನ್ ಖಾದ್ರಿ ಎಂದು ಗುರುತಿಸಿಕೊಳ್ಳುವ ವ್ಯಕ್ತಿಯು ಅರ್ಜಿದಾರರ ವಕೀಲರೆಂದು ಈ ನ್ಯಾಯಾಲಯವು ಪರಿಗಣಿಸುವುದಿಲ್ಲ." ಎಂದು ನ್ಯಾಯಮೂರ್ತಿ ಭಾರತಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ತರುವಾಯ ಪ್ರಕರಣವನ್ನು ಮುಂದೂಡಿದ ನ್ಯಾಯಾಲಯ, ಬುರ್ಖಾ ಧರಿಸಿ ವಾದ ಮಾಡಲು ಅವಕಾಶವಿದೆಯೇ ಎಂಬುದನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ರಿಜಿಸ್ಟ್ರಾರ್ ಜನರಲ್​ಗೆ ಆದೇಶಿಸಿತು. ಈ ಬಗ್ಗೆ ಪರಿಶೀಲನೆ ನಡೆಸಿದ ರಿಜಿಸ್ಟ್ರಾರ್ ಜನರಲ್ ಬುರ್ಖಾ ಧರಿಸಿ ವಾದ ಮಾಡಲು ಅವಕಾಶ ನೀಡುವಂಥ ಯಾವುದೇ ನಿಬಂಧನೆ ಇಲ್ಲ ಎಂದು ಡಿಸೆಂಬರ್ 5 ರಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು. ರಿಜಿಸ್ಟ್ರಾರ್ ವರದಿಯನ್ನು ಪರಿಶೀಲಿಸಿದ ನಂತರ, ಬಾರ್ ಕೌನ್ಸಿಲ್ ಆಫ್ ಇಂಡಿಯಾ ಸೂಚಿಸಿದ ನಿಯಮಗಳು ಅಂತಹ ಯಾವುದೇ ಹಕ್ಕನ್ನು ಉಲ್ಲೇಖಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ, ವಕೀಲರು ಮತ್ತೆ ಹಾಜರಾಗದಿರಲು ನಿರ್ಧರಿಸಿದ್ದರಿಂದ ನ್ಯಾಯಾಲಯವು ವಿಷಯಕ್ಕೆ ಹೋಗಲಿಲ್ಲ. ನಂತರ, ಮತ್ತೊಬ್ಬ ವಕೀಲರು ಅರ್ಜಿದಾರರನ್ನು ಪ್ರತಿನಿಧಿಸಲು ಮುಂದಾದರು, ಡಿಸೆಂಬರ್ 13 ರಂದು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT