ಕೆಮಿಕಲ್ ಟ್ಯಾಂಕರ್ ಗೆ ಬೆಂಕಿ 
ದೇಶ

Mumbai-Pune highway: ಕೆಮಿಕಲ್ ಟ್ಯಾಂಕರ್ ಗೆ ಬೆಂಕಿ; ಸಂಚಾರ ಅಸ್ತವ್ಯಸ್ಥ!

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಹೆದ್ದಾರಿಯ ಬಳಿ ಬುಧವಾರ ಬೆಳಿಗ್ಗೆ ರಾಸಾಯನಿಕ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ.

ಮುಂಬೈ: ಜೈಪುರ ಟ್ಯಾಂಕರ್ ಸ್ಫೋಟ ಪ್ರಕರಣ ಹಸಿರಾಗಿರುವಂತೆಯೇ ಇತ್ತ ಮಹಾರಾಷ್ಟ್ರದಲ್ಲೂ ಅಂತಹುದೇ ಘಟನೆಯೊಂದು ವರದಿಯಾಗಿದೆ.

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಹೆದ್ದಾರಿಯ ಬಳಿ ಬುಧವಾರ ಬೆಳಿಗ್ಗೆ ರಾಸಾಯನಿಕ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಖೋಪೋಲಿ ಪ್ರದೇಶದ ಹೆದ್ದಾರಿ ನಿರ್ಗಮನದ ಬಳಿಯ ಶಿಲ್ಪಾಟಾದ ಪಟೇಲ್ ನಗರದಲ್ಲಿ ಬೆಳಿಗ್ಗೆ 6.15 ಕ್ಕೆ ಈ ಘಟನೆ ನಡೆದಿದ್ದು, ಮೊದಲು ಟ್ಯಾಂಕರ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದ್ದು ಬಳಿಕ ಟ್ಯಾಂಕರ್ ನಲ್ಲಿದ್ದ ರಾಸಾಯನಿಕ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ.

ವಿಷಯ ತಿಳಿದ ಕೂಡಲೇ ಖೋಪೋಲಿ ಪೊಲೀಸರು ಸ್ಥಳಕ್ಕಾಗಮಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಟಾಟಾ, ಗೋದ್ರೇಜ್ ಗುಂಪುಗಳು, HPCL ಮತ್ತು JSW ನ ಅಗ್ನಿಶಾಮಕ ವಾಹನಗಳು ಸಹ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಚರಣೆ ನಡೆಸಿದವು. ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಅಧಿಕಾರಿ ಹೇಳಿದರು.

ಟ್ಯಾಂಕರ್ ಗೆ ಬೆಂಕಿಹೊತ್ತಿಕೊಂಡ ಪರಿಣಾಮ ಹೆದ್ದಾರಿಯಲ್ಲಿ ಸಂಚಾರಕ್ಕೆ ಒಂದೆರಡು ಗಂಟೆಗಳ ಕಾಲ ತೊಂದರೆಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ: ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!

ರನ್‌ವೇಯಿಂದ ಜಾರಿದ ಅಮೆಜಾನ್ ಕಾರ್ಗೋ ವಿಮಾನ; ವಾಹನಗಳಿಗೆ ಡಿಕ್ಕಿ, ಕನಿಷ್ಠ ಐವರು ಸಾವು!

Varanasi: ತೆಲುಗು ರಾಜ್ಯಗಳಲ್ಲಿ ಬರೋಬ್ಬರಿ 320 ಕೋಟಿಗೆ ಥಿಯೇಟ್ರಿಕಲ್ ಹಕ್ಕುಗಳ ಮಾರಾಟ? ರಾಜಮೌಳಿಗೆ ತಲೆಬಿಸಿ!