ಜೈಪುರ- ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ್ದ ಗ್ಯಾಸ್ ಟ್ಯಾಂಕರ್ ಅಪಘಾತ 
ದೇಶ

ಜೈಪುರ ಗ್ಯಾಸ್ ಟ್ಯಾಂಕರ್ ಅಪಘಾತ: ಮೃತರ ಸಂಖ್ಯೆ 17ಕ್ಕೆ ಏರಿಕೆ, ಮೂವರ ಪರಿಸ್ಥಿತಿ ಚಿಂತಾಜನಕ

ಡಿಸೆಂಬರ್ 20 ರಂದು ಜೈಪುರ- ಅಜ್ಮೀರ್ ಹೆದ್ದಾರಿಯಲ್ಲಿ ಅಡುಗೆ ಅನಿಲ ತುಂಬಿದ ಟ್ಯಾಂಕರ್ ಹಲವು ವಾಹನಗಳಿಗೆ ಗುದ್ದಿದ್ದ ಪರಿಣಾಮ ಅಗ್ನಿ ಅವಘಡ ಸಂಭವಿಸಿತ್ತು.

ಜೈಪುರ: ರಾಜಸ್ಥಾನದ ಜೈಪುರದಲ್ಲಿ ಕಳೆದ ಶುಕ್ರವಾರ ಗ್ಯಾಸ್ ಟ್ಯಾಂಕರ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಬುಧವಾರ ಮೃತಪಟ್ಟಿದ್ದಾರೆ. ಈ ಮೂಲಕ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಇತರ 16 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಗಳು ಪೈಕಿ ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಎಸ್ ಎಂಎಸ್ ಆಸ್ಪತ್ರೆಯ ಅಧೀಕ್ಷಕರಾದ ಸುಶೀಲ್ ಭಾಟಿಯಾ ತಿಳಿಸಿದ್ದಾರೆ.

ಡಿಸೆಂಬರ್ 20 ರಂದು ಜೈಪುರ- ಅಜ್ಮೀರ್ ಹೆದ್ದಾರಿಯಲ್ಲಿ ಅಡುಗೆ ಅನಿಲ ತುಂಬಿದ ಟ್ಯಾಂಕರ್ ಹಲವು ವಾಹನಗಳಿಗೆ ಗುದ್ದಿದ್ದ ಪರಿಣಾಮ ಅಗ್ನಿ ಅವಘಡ ಸಂಭವಿಸಿತ್ತು.

ಬಳಿಕ ನೋಡ ನೋಡುತ್ತಿದ್ದಂತೆ ಉಂಟಾದ ಬೆಂಕಿಯ ಜ್ವಾಲೆಯಲ್ಲಿ ಸಿಲುಕಿ 11 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಘಟನೆಯಲ್ಲಿ 30 ಕ್ಕೂ ಅಧಿಕ ವಾಹನಗಳು ಬೆಂಕಿಗೆ ಆಹುತಿಯಾಗಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!