ಹರ್ಷ ಮಾವ್ಜಿ ಅರೋಥಿಯಾ 
ದೇಶ

ಸಾವು ಹೀಗೂ ಬರುತ್ತಾ: 6 ವರ್ಷದ ಬಾಲಕನ ಜೀವ ತೆಗೆದ SUV ಕಾರಿನ ಏರ್ ಬ್ಯಾಗ್‌!

ಹರ್ಷ್ ಪ್ರಯಾಣಿಸುತ್ತಿದ್ದ ಎಸ್‌ಯುವಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಹೀಗಾಗಿ ಏರ್ ಬ್ಯಾಗ್ ಇದ್ದಕ್ಕಿದ್ದಂತೆ ತೆರೆದುಕೊಂಡಿದೆ. ಹೀಗಾಗಿ ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದ ಹರ್ಷ್ ಉಸಿರುಗಟ್ಟಿ ಮೃತಪಟ್ಟಿದ್ದಾನೆ.

ಮುಂಬೈ: ಅಪಘಾತದ ಸಮಯದಲ್ಲಿ ಕಾರಿನಲ್ಲಿರುವ ಏರ್ ಬ್ಯಾಗ್ ಪ್ರಯಾಣಿಕರಿಗೆ ವರದಾನ ಎಂದು ಹೇಳಲಾಗುತ್ತದೆ. ಆದರೆ ಅದೇ ಏರ್ ಬ್ಯಾಗ್ ವಾಶಿಯಲ್ಲಿ 6 ವರ್ಷದ ಮಗುವಿನ ಜೀವ ತೆಗೆದಿದೆ. ನವಿ ಮುಂಬೈನ ವಾಶಿ ಪ್ರದೇಶದಲ್ಲಿ ಈ ದಾರುಣ ಸಂಭವಿಸಿದೆ. ಅಪಘಾತದ ವೇಳೆ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಮಗು ಹರ್ಷ ಮಾವ್ಜಿ ಅರೋಥಿಯಾ ಅವರು ಪ್ರಾಣ ಕಳೆದುಕೊಂಡಿದ್ದಾನೆ.

ಹರ್ಷ್ ಪ್ರಯಾಣಿಸುತ್ತಿದ್ದ ಎಸ್‌ಯುವಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಹೀಗಾಗಿ ಏರ್ ಬ್ಯಾಗ್ ಇದ್ದಕ್ಕಿದ್ದಂತೆ ತೆರೆದುಕೊಂಡಿದೆ. ಹೀಗಾಗಿ ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದ ಹರ್ಷ್ ಉಸಿರುಗಟ್ಟಿ ಮೃತಪಟ್ಟಿದ್ದಾನೆ. ಈ ಅಪಘಾತದ ನಂತರ, ಎಸ್‌ಯುವಿ ಮಾಲೀಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹರ್ಷನ ತಂದೆ ಮಾವ್ಜಿ ಅರೋಥಿಯಾ ಪ್ರಕಾರ, ಹರ್ಷ ಮತ್ತು ಅವನ ಒಡಹುಟ್ಟಿದವರು ಪಾನಿಪುರಿ ತಿನ್ನಲು ಒತ್ತಾಯಿಸುತ್ತಿದ್ದರು. ಹೀಗಾಗಿ ಎಲ್ಲರೂ ಪಾನಿಪುರಿ ತಿನ್ನಲು ಹೋದೆವು ಎಂದು ಹರ್ಷನ ತಂದೆ ಹೇಳಿದರು.

ಮಾವ್ಜಿ ಕಾರು ಓಡಿಸುತ್ತಿದ್ದು ತಮ್ಮ ಪಕ್ಕದಲ್ಲಿ ಹರ್ಷ ಕುಳಿತಿದ್ದನು. ಉಳಿದವರು ಹಿಂದಿನ ಸೀಟಿನಲ್ಲಿ ಕುಳಿತಿದ್ದರು. ರಾತ್ರಿ 11.30ರ ಸುಮಾರಿಗೆ ವಾಶಿಯ ಸೆಕ್ಟರ್-28ರ ಬ್ಲೂ ಡೈಮಂಡ್ ಹೋಟೆಲ್ ಜಂಕ್ಷನ್ ಬಳಿ ಎಸ್‌ಯುವಿ ವೇಗವಾಗಿ ಮುಂದೆ ಸಾಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಆ ಆಘಾತದಿಂದ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದು, ಹರ್ಷ ಗಂಭೀರವಾಗಿ ಗಾಯಗೊಂಡಿದ್ದನು. ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ.

ಹರ್ಷನ ಮೈಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ವೈದ್ಯರ ಪ್ರಕಾರ, ಪಾಲಿಟ್ರಾಮಾ ಶಾಕ್‌ನಿಂದ ಹರ್ಷ್ ಸಾವನ್ನಪ್ಪಿದ್ದಾರೆ. ಪಾಲಿಟ್ರಾಮಾದಿಂದ ದೇಹದಲ್ಲಿ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಗಾಯವಾಗಿದೆ. ಆಂತರಿಕ ಗಾಯಗಳಿಂದ ರಕ್ತಸ್ರಾವ ಉಂಟಾಗಿ ಹರ್ಷ ಮೃತಪಟ್ಟಿದ್ದಾನೆ. ಅಪಘಾತದಲ್ಲಿ ಮಾವ್ಜಿ ಮತ್ತು ಹರ್ಷ ಅವರ ಒಡಹುಟ್ಟಿದವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದ ಮೇಲೆ ಬೆರಳು ತೋರಿಸೋದು ನಿಮ್ಮ ಹಳೆಯ ಚಾಳಿ, ಆರೋಪ ಮಾಡೋದು ಬಿಟ್ಟು ಆಂತರಿಕ ಭದ್ರತಾ ವೈಫಲ್ಯಗಳತ್ತ ಗಮನಹರಿಸಿ: ಪಾಕ್'ಗೆ ಭಾರತ ತಿರುಗೇಟು

ದಕ್ಷಿಣ ಪಿನಾಕಿನಿ ಜಲವಿವಾದ ಪ್ರಕರಣ: ನ್ಯಾಯಮಂಡಳಿ ಸ್ಥಾಪಿಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

'ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ': ರಂಜಾನ್ ವೇಳೆ ಉರ್ದು ಶಾಲೆಗಳ ಶಾಲಾ ಅವಧಿ ಬದಲಾವಣೆ, BJP ಕಿಡಿ!

ಪತಿಯ ಅಂತ್ಯಕ್ರಿಯೆ ಪೂರ್ಣಗೊಳ್ಳುವ ಮೊದಲೇ ಸುನೇತ್ರಾ ಪವಾರ್ DCM ಆಗಿ ನೇಮಕಗೊಂಡಿರುವುದರ ಹಿಂದೆ ಬಿಜೆಪಿ 'ಮಾಸ್ಟರ್ ಮೈಂಡ್' ಕೈವಾಡ!

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’: ಮೈಲಾರಲಿಂಗನ ಕಾರ್ಣಿಕ, ರೈತರ ಸಂತಸ? Video

SCROLL FOR NEXT