ಅರ್ಜು ರಾಣಾ ದೇವುಬಾ  
ದೇಶ

ದೆಹಲಿಗೆ ಆಗಮಿಸಿದ್ದ ನೇಪಾಳದ ವಿದೇಶಾಂಗ ಸಚಿವೆ ಜೊತೆ ಸಭೆ ನಡೆಸಲು ಆಸಕ್ತಿ ತೋರದ ಭಾರತೀಯ ಅಧಿಕಾರಿಗಳು!

ಆರೋಗ್ಯ ತಪಾಸಣೆಗಾಗಿ ಅವರು ದೆಹಲಿಯಲ್ಲಿದ್ದರೂ, ಪ್ರಸ್ತುತ ನೇಪಾಳದ ಪ್ರಧಾನಿ ಕೆಪಿ ಒಲಿ ಅವರಿಗೆ ಆಹ್ವಾನ ನಿಗದಿಪಡಿಸುವ ಉದ್ದೇಶದಿಂದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಅವರು ಆಶಿಸುತ್ತಿದ್ದರು.

ನವದೆಹಲಿ: ನೇಪಾಳದ ವಿದೇಶಾಂಗ ಸಚಿವ ಅರ್ಜು ರಾಣಾ ದೇವುಬಾ ಅವರು ಕಳೆದ ವಾರ ದೆಹಲಿಗೆ ವೈಯಕ್ತಿಕ ಕಾರಣಗಳಿಗಾಗಿ ಭೇಟಿ ನೀಡಿದ್ದರು, ಈ ವೇಳೆ ಅವರು ಭಾರತ ಸರ್ಕಾರದ ಕೆಲವು ಅಧಿಕಾರಿಗಳನ್ನು ಭೇಟಿ ಮಾಡಲು ಬಯಸಿದ್ದರು, ಆದರೆ ಅಗು ಸಾಧ್ಯವಾಗಲಿಲ್ಲ.

ಆರೋಗ್ಯ ತಪಾಸಣೆಗಾಗಿ ಅವರು ದೆಹಲಿಯಲ್ಲಿದ್ದರೂ, ಪ್ರಸ್ತುತ ನೇಪಾಳದ ಪ್ರಧಾನಿ ಕೆಪಿ ಒಲಿ ಅವರಿಗೆ ಆಹ್ವಾನವನ್ನು ನಿಗದಿಪಡಿಸುವ ಉದ್ದೇಶದಿಂದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಅವರು ಆಶಿಸುತ್ತಿದ್ದರು"ಎಂದು ಮೂಲವೊಂದು ತಿಳಿಸಿದೆ. ಈ ವರ್ಷ ಜುಲೈ 15 ರಂದು ಅಧಿಕಾರಕ್ಕೆ ಬಂದ ನಂತರ ಪಿಎಂ ಒಲಿ ಭಾರತಕ್ಕೆ ಭೇಟಿ ನೀಡಲು ಉತ್ಸುಕರಾಗಿದ್ದಾರೆ ಎಂದು ತಿಳಿದುಬಂದಿದೆ.

ಸೋಮವಾರ, ಕಠ್ಮಂಡುವಿಗೆ ಹಿಂತಿರುಗುವ ಮೊದಲು, ದೇವುಬಾ ಅವರು ಭಾರತೀಯ ಜನತಾ ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ನೇತೃತ್ವದಲ್ಲಿ ಇಂಡಿಯಾ ಫೌಂಡೇಶನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೇಬಾ ಅವರು ಆಗಸ್ಟ್‌ನಲ್ಲಿ ಅಧಿಕೃತವಾಗಿ ಭಾರತಕ್ಕೆ ಭೇಟಿ ನೀಡಿದಾಗ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರನ್ನು ಭೇಟಿಯಾಗಿದ್ದರು.

ಈ ತಿಂಗಳ ಆರಂಭದಲ್ಲಿ ಪ್ರಧಾನಿ ಒಲಿ ಅವರು ಚೀನಾಕ್ಕೆ ಭೇಟಿ ನೀಡಿ ಒಂಬತ್ತು ಅಂಶಗಳ ಒಪ್ಪಂದಕ್ಕೆ ಸಹಿ ಹಾಕಿದ್ದರು. ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿಯಾಗಿದ್ದರು. ಇಬ್ಬರ ನಡುವಿನ ಮಾತುಕತೆಗಳು ವ್ಯಾಪಾರ ಮತ್ತು ಪ್ರವಾಸೋದ್ಯಮದ ಇತರ ವಿಷಯಗಳ ಮೇಲೆ ಕೇಂದ್ರೀಕೃತವಾಗಿತ್ತು. ಪಿಎಂ ಓಲಿ ಅವರ ಹಿಂದಿನ ಪ್ರಧಾನಿ ಪ್ರಚಂಡ ಅವರು ಭಾರತಕ್ಕೆ ತಮ್ಮ ಮೊದಲ ಅಧಿಕೃತ ಸಾಗರೋತ್ತರ ಭೇಟಿ ನೀಡಿದ್ದರು ಮತ್ತು ಆ ವೇಳೆ ಅವರಿಗೆ ಉತ್ತಮ ಸ್ವಾಗತ ದೊರೆತಿತ್ತು ಎಂಬುದನ್ನು ಸ್ಮರಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT