ಚಿತ್ರವನ್ನು ಪ್ರಾತಿನಿಧಿಕ ಉದ್ದೇಶಗಳಿಗಾಗಿ ಮಾತ್ರ ಬಳಸಲಾಗಿದೆ. Express Illustrations
ದೇಶ

ಲೋಕಸಭೆ ಚುನಾವಣೆ ಹಿನ್ನೆಲೆ ಹರಿದು ಬಂದ ದೇಣಿಗೆ: ಬಿಜೆಪಿಗೆ 2,244 ಕೋಟಿ ರೂ, ಕಾಂಗ್ರೆಸ್ ಗೆ 289 ಕೋಟಿ ರೂ ಹಣ ಸಂಗ್ರಹ!

ಭಾರತೀಯ ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪಕ್ಷಗಳು ನೀಡಿದ ಮಾಹಿತಿಯನ್ನು ಅಪ್ಲೋಡ್‌ ಮಾಡಿದೆ. 2022-23 ರ ಹಣಕಾಸು ವರ್ಷದಲ್ಲಿ ಬಿಜೆಪಿ 719.85 ಕೋಟಿ ರೂ. ದೇಣಿಗೆ ಸ್ವೀಕರಿಸಿತ್ತು.

ನವದೆಹಲಿ: 2023-24 ಹಣಕಾಸು ವರ್ಷದಲ್ಲಿ ಬಿಜೆಪಿ ತನ್ನ ಘಟಕಗಳು, ವ್ಯಕ್ತಿಗಳು, ಟ್ರಸ್ಟ್ ಮತ್ತು ಕಾರ್ಪೊರೇಟ್ ಕಂಪನಿಗಳಿಂದ 20 ಸಾವಿರ ರೂ.ಗಿಂತ ಅಧಿಕ ಮೊತ್ತದ ಒಟ್ಟು 2,244 ಕೋಟಿ ರೂ. ದೇಣಿಗೆ ಸ್ವೀಕರಿಸಿದ್ದರೆ ಕಾಂಗ್ರೆಸ್‌ 289 ಕೋಟಿ ರೂ. ದೇಣಿಗೆ ಸ್ವೀಕರಿಸಿದೆ.

ಭಾರತೀಯ ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪಕ್ಷಗಳು ನೀಡಿದ ಮಾಹಿತಿಯನ್ನು ಅಪ್ಲೋಡ್‌ ಮಾಡಿದೆ. 2022-23 ರ ಹಣಕಾಸು ವರ್ಷದಲ್ಲಿ ಬಿಜೆಪಿ 719.85 ಕೋಟಿ ರೂ. ದೇಣಿಗೆ ಸ್ವೀಕರಿಸಿದ್ದರೆ ಕಾಂಗ್ರೆಸ್‌ 79.92 ಕೋಟಿ ರೂ. ಸ್ವೀಕರಿಸಿತ್ತು. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಬಿಜೆಪಿಗೆ ಸಿಕ್ಕಿದ ದೇಣಿಗೆ ಪ್ರಮಾಣ 212% ಏರಿಕೆಯಾಗಿದೆ.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ದೇಣಿಗೆಯ ವರದಿ ಪ್ರಕಾರ, ಬಿಜೆಪಿ 2023-24ನೇ ಹಣಕಾಸು ವರ್ಷದಲ್ಲಿ ಪ್ರುಡೆಂಟ್ ಎಲೆಕ್ಟೊರಲ್ ಟ್ರಸ್ಟ್‌ನಿಂದ 723.6 ಕೋಟಿ ರೂಪಾಯಿ ದೇಣಿಗೆ ಪಡೆದಿದೆ. ಈ ಟ್ರಸ್ಟ್ ಕಾಂಗ್ರೆಸ್ ಪಕ್ಷಕ್ಕೆ 156.4 ಕೋಟಿ ರೂಪಾಯಿ ದೇಣಿಗೆ ನೀಡಿದೆ.

ಅಂದರೆ ಬಿಜೆಪಿ ಪಡೆದ ಒಟ್ಟು ದೇಣಿಗೆಯ ಮೂರನೇ ಒಂದರಷ್ಟು ಭಾಗ ಮತ್ತು ಕಾಂಗ್ರೆಸ್ ದೇಣಿಗೆಯ ಅರ್ಧದಷ್ಟು ಭಾಗ ಈ ಟ್ರಸ್ಟ್‌ನಿಂದ ಬಂದಿದೆ. ಈ ಟ್ರಸ್ಟ್‌ಗೆ ದೇಣಿಗೆ ನೀಡಿದ ಅಗ್ರಗಣ್ಯ ಕಂಪನಿಗಳ ಪೈಕಿ ಮೆಘಾ ಎಂಜಿನಿಯರಿಂಗ್ ಅಂಡ್ ಇನ್ಫ್ರಾ ಲಿಮಿಟೆಡ್, ಸೆರಮ್ ಇನ್ಸ್ಟಿಟ್ಯೂಟ್, ಆರ್ಸೆಲರ್ ಮಿತ್ತಲ್ ಗ್ರೂಪ್ ಮತ್ತು ಭಾರ್ತಿ ಏರ್‌ಟೆಲ್ ಸೇರಿವೆ.

ಬಿಜೆಪಿ ಹಾಗೂ ಕಾಂಗ್ರೆಸ್ ಘೋಷಿಸಿರುವ ಒಟ್ಟು ದೇಣಿಗೆಗಳಲ್ಲಿ ಎಲೆಕ್ಟೊರಲ್ ಬಾಂಡ್ ಮೂಲಕ ಪಡೆದ ಹಣ ಸೇರಿಲ್ಲ. ನಿಯಮಾನುಸಾರ ಈ ರಾಜಕೀಯ ಪಕ್ಷಗಳು ತಮ್ಮ ವಾರ್ಷಿಕ ಪರಿಶೋಧಿತ ವರದಿಗಳಲ್ಲಿ ಮಾತ್ರ ಇದನ್ನು ಉಲ್ಲೇಖಿಸಬೇಕಾಗುತ್ತದೆ. ದೇಣಿಗೆ ವರದಿಗಳಲ್ಲಿ ಇವುಗಳನ್ನು ಉಲ್ಲೇಖಿಸುವಂತಿಲ್ಲ. 2024ರ ಫೆಬ್ರವರಿಯಲ್ಲಿ ಚುನಾವಣಾ ಬಾಂಡ್ ಯೋಜನೆಯನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದ್ದು, ರಾಜಕೀಯ ಪಕ್ಷಗಳು ದೇಣಿಗೆಯನ್ನು ನೇರವಾಗಿ ಅಥವಾ ಚುನಾವಣಾ ಟ್ರಸ್ಟ್ ಮಾರ್ಗದಲ್ಲಿ ಸ್ವೀಕರಿಸಬೇಕು ಎಂದು ಸೂಚಿಸಿತ್ತು.

ಆದರೆ ಕೆಲ ಪ್ರಾದೇಶಿಕ ಪಕ್ಷಗಳು ಚುನಾವಣಾ ಬಾಂಡ್ ಮೂಲಕ ಪಡೆದ ದೇಣಿಗೆಯನ್ನು ಸ್ವಯಂಪ್ರೇರಿತವಾಗಿ ಪ್ರಕಟಿಸಿವೆ. ಇವುಗಳಲ್ಲಿ ಬಿಆರ್‌ಎಸ್ ಚುನಾವಣಾ ಬಾಂಡ್ ಮೂಲಕ 495.5 ಕೋಟಿ, ಡಿಎಂಕೆ 60 ಕೋಟಿ ಹಾಗೂ ವೈಎಸ್ಆರ್ ಕಾಂಗ್ರೆಸ್ 125.5 ಕೋಟಿ ರೂಪಾಯಿ ದೇಣಿಗೆ ಪಡೆದಿವೆ. ಜೆಎಂಎಂ ಚುನಾವಣಾ ಬಾಂಡ್ ಮೂಲಕ 11.5 ಕೋಟಿ ರೂಪಾಯಿ ಪಡೆದಿದ್ದು, ಇತರ ದೇಣಿಗೆಗಳಾಗಿ 64 ಲಕ್ಷ ರೂಪಾಯಿ ಗಳಿಸಿದೆ. ಬಿಜೆಪಿ ಪಡೆದ ದೇಣಿಗೆ ಶೇಕಡ 212ರಷ್ಟು ಏರಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ನಿರ್ಗಮಿಸಿದ ಕೆಲ ನಿಮಿಷದಲ್ಲೇ ಕಾರ್‌ ಬ್ಲಾಸ್ಟ್‌, ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!

Delhi Red Fort blast- UAPA ಕೇಸು ದಾಖಲು, ಇಬ್ಬರ ಬಂಧನ, ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ

ದೆಹಲಿ ಸ್ಫೋಟ: ಕಾರಿನ ಮಾಲೀಕನಿಗೆ ಫರಿದಾಬಾದ್ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ?

Delhi Red Fort Blast: ಸ್ಥಳಕ್ಕೆ NIA-NSG ಭೇಟಿ; ಸಮಗ್ರ ತನಿಖೆ ಆರಂಭ, ಉನ್ನತ ಮಟ್ಟದ ಸಭೆ ಕರೆದ ಅಮಿತ್ ಶಾ

'ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸುತ್ತಿವೆ, ನನ್ನ ತಂದೆ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ': ಇಶಾ ಡಿಯೋಲ್

SCROLL FOR NEXT