ವೈಷ್ಣೋದೇವಿ ರೋಪ್ ವೇ ಯೋಜನೆ ವಿರೋಧಿಸಿ ಪ್ರತಿಭಟನೆ 
ದೇಶ

ವೈಷ್ಣೋದೇವಿ ರೋಪ್ ವೇ ಯೋಜನೆಗೆ ವಿರೋಧ; 72 ಗಂಟೆ ಕತ್ರಾ ಬಂದ್, ಯಾತ್ರಾರ್ಥಿಗಳಿಗೆ ಸಂಕಷ್ಟ

ವ್ಯಾಪಾರಿಗಳು, ಅಂಗಡಿಕಾರರು, ಕೂಲಿ ಕಾರ್ಮಿಕರು ಸೇರಿದಂತೆ ಸ್ಥಳೀಯರು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ತಮ್ಮ ಜೀವನೋಪಾಯವನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಶ್ರೀನಗರ: ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳ ಮೂಲ ಶಿಬಿರವಾದ ಕತ್ರಾ ಪಟ್ಟಣದಿಂದ ದೇಗುಲದವರೆಗೆ ಪ್ರಸ್ತಾವಿತ ರೋಪ್‌ವೇ ಯೋಜನೆ ವಿರುದ್ಧ ಬುಧವಾರದಿಂದ 72 ಗಂಟೆಗಳ ಕಾಲ ಬಂದ್ ನಡೆಸಲಾಗುತ್ತಿದೆ.

ವ್ಯಾಪಾರಿಗಳು, ಅಂಗಡಿಕಾರರು, ಪೋನಿ ಆಪರೇಟರ್‌ಗಳು, ಕೂಲಿ ಕಾರ್ಮಿಕರು ಸೇರಿದಂತೆ ಸ್ಥಳೀಯರು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ತಮ್ಮ ಜೀವನೋಪಾಯವನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಬಂದ್‌ನಿಂದಾಗಿ ಯಾತ್ರಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಅಂಗಡಿ ಮುಂಗಟ್ಟುಗಳು ಹಾಗೂ ಇತರೆ ವ್ಯಾಪಾರ ಸಂಸ್ಥೆಗಳು ಕೂಡ ಬಂದ್ ಆಗಿವೆ. ರೋಪ್‌ವೇ ಯೋಜನೆ ವಿರುದ್ಧ ಆಂದೋಲನದ ನೇತೃತ್ವ ವಹಿಸಿರುವ ಶ್ರೀ ಮಾತಾ ವೈಷ್ಣೋದೇವಿ ಸಂಘರ್ಷ ಸಮಿತಿಯು ಈ ಬಂದ್‌ಗೆ ಕರೆ ನೀಡಿದೆ.

ಪ್ರಸ್ತಾವಿತ `250 ಕೋಟಿ ರೂ. ರೋಪ್‌ವೇ ಯೋಜನೆಯು ತಾರಾಕೋಟ್ ಮಾರ್ಗವನ್ನು ಸಂಜಿ ಛಾಟ್‌ಗೆ ಸಂಪರ್ಕಿಸುತ್ತದೆ. ಶ್ರೀ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯು ವಯೋವೃದ್ಧರು ಮತ್ತು ಇತರರು ದೇವಸ್ಥಾನ ಪ್ರವೇಶಿಸಲು ಅನುಕೂಲವಾಗುವಂತೆ ರೋಪ್‌ವೇ ನಿರ್ಮಿಸಲು ನಿರ್ಧರಿಸಿದೆ.

ವೈಷ್ಣೋದೇವಿ ಸಂಘರ್ಷ ಸಮಿತಿ ಮುಖಂಡರ ಪ್ರಕಾರ, ರೋಪ್‌ವೇ ಯೋಜನೆಯು ಸ್ಥಳೀಯರ ಜೀವನೋಪಾಯವನ್ನು ಕಸಿದುಕೊಳ್ಳುತ್ತದೆ. ಪಟ್ಟಣದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. "ಇದು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುತ್ತದೆ ಮತ್ತು ನಮ್ಮ ಪರಿಸರವನ್ನು ಹಾಳು ಮಾಡುತ್ತದೆ" ಎಂದು ಸಂಘರ್ಷ ಸಮಿತಿಯ ನಾಯಕರೊಬ್ಬರು ಹೇಳಿದ್ದಾರೆ.

ಈ ಸಂಬಂಧ ರಿಯಾಸಿ ಜಿಲ್ಲಾಧಿಕಾರಿ ಅವರೊಂದಿಗೆ ನಡೆಸಿದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಸಮಿತಿಯು 72 ಗಂಟೆಗಳ ಕಾಲ ಬಂದ್‌ಗೆ ಕರೆ ನೀಡಿದೆ.

ಕತ್ರಾ ಪಟ್ಟಣದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಸಮಿತಿ ಮುಖಂಡರು ಮತ್ತು ವ್ಯಾಪಾರಿಗಳನ್ನು ವಶಕ್ಕೆ ಪಡೆಯಲಾಗಿದೆ ಮತ್ತು "ಅನೇಕ ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕ್ರಮ ಅನಪೇಕ್ಷಿತ ಮತ್ತು ಅನಗತ್ಯ. ಇದು ಜನರ ಕೋಪವನ್ನು ಹೆಚ್ಚಿಸಿದೆ ಎಂದು ಮಾಜಿ ಶಾಸಕ ಜುಗಲ್ ಶರ್ಮಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!