ವೈಷ್ಣೋದೇವಿ ರೋಪ್ ವೇ ಯೋಜನೆ ವಿರೋಧಿಸಿ ಪ್ರತಿಭಟನೆ 
ದೇಶ

ವೈಷ್ಣೋದೇವಿ ರೋಪ್ ವೇ ಯೋಜನೆಗೆ ವಿರೋಧ; 72 ಗಂಟೆ ಕತ್ರಾ ಬಂದ್, ಯಾತ್ರಾರ್ಥಿಗಳಿಗೆ ಸಂಕಷ್ಟ

ವ್ಯಾಪಾರಿಗಳು, ಅಂಗಡಿಕಾರರು, ಕೂಲಿ ಕಾರ್ಮಿಕರು ಸೇರಿದಂತೆ ಸ್ಥಳೀಯರು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ತಮ್ಮ ಜೀವನೋಪಾಯವನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಶ್ರೀನಗರ: ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳ ಮೂಲ ಶಿಬಿರವಾದ ಕತ್ರಾ ಪಟ್ಟಣದಿಂದ ದೇಗುಲದವರೆಗೆ ಪ್ರಸ್ತಾವಿತ ರೋಪ್‌ವೇ ಯೋಜನೆ ವಿರುದ್ಧ ಬುಧವಾರದಿಂದ 72 ಗಂಟೆಗಳ ಕಾಲ ಬಂದ್ ನಡೆಸಲಾಗುತ್ತಿದೆ.

ವ್ಯಾಪಾರಿಗಳು, ಅಂಗಡಿಕಾರರು, ಪೋನಿ ಆಪರೇಟರ್‌ಗಳು, ಕೂಲಿ ಕಾರ್ಮಿಕರು ಸೇರಿದಂತೆ ಸ್ಥಳೀಯರು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ತಮ್ಮ ಜೀವನೋಪಾಯವನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಬಂದ್‌ನಿಂದಾಗಿ ಯಾತ್ರಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಅಂಗಡಿ ಮುಂಗಟ್ಟುಗಳು ಹಾಗೂ ಇತರೆ ವ್ಯಾಪಾರ ಸಂಸ್ಥೆಗಳು ಕೂಡ ಬಂದ್ ಆಗಿವೆ. ರೋಪ್‌ವೇ ಯೋಜನೆ ವಿರುದ್ಧ ಆಂದೋಲನದ ನೇತೃತ್ವ ವಹಿಸಿರುವ ಶ್ರೀ ಮಾತಾ ವೈಷ್ಣೋದೇವಿ ಸಂಘರ್ಷ ಸಮಿತಿಯು ಈ ಬಂದ್‌ಗೆ ಕರೆ ನೀಡಿದೆ.

ಪ್ರಸ್ತಾವಿತ `250 ಕೋಟಿ ರೂ. ರೋಪ್‌ವೇ ಯೋಜನೆಯು ತಾರಾಕೋಟ್ ಮಾರ್ಗವನ್ನು ಸಂಜಿ ಛಾಟ್‌ಗೆ ಸಂಪರ್ಕಿಸುತ್ತದೆ. ಶ್ರೀ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯು ವಯೋವೃದ್ಧರು ಮತ್ತು ಇತರರು ದೇವಸ್ಥಾನ ಪ್ರವೇಶಿಸಲು ಅನುಕೂಲವಾಗುವಂತೆ ರೋಪ್‌ವೇ ನಿರ್ಮಿಸಲು ನಿರ್ಧರಿಸಿದೆ.

ವೈಷ್ಣೋದೇವಿ ಸಂಘರ್ಷ ಸಮಿತಿ ಮುಖಂಡರ ಪ್ರಕಾರ, ರೋಪ್‌ವೇ ಯೋಜನೆಯು ಸ್ಥಳೀಯರ ಜೀವನೋಪಾಯವನ್ನು ಕಸಿದುಕೊಳ್ಳುತ್ತದೆ. ಪಟ್ಟಣದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. "ಇದು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುತ್ತದೆ ಮತ್ತು ನಮ್ಮ ಪರಿಸರವನ್ನು ಹಾಳು ಮಾಡುತ್ತದೆ" ಎಂದು ಸಂಘರ್ಷ ಸಮಿತಿಯ ನಾಯಕರೊಬ್ಬರು ಹೇಳಿದ್ದಾರೆ.

ಈ ಸಂಬಂಧ ರಿಯಾಸಿ ಜಿಲ್ಲಾಧಿಕಾರಿ ಅವರೊಂದಿಗೆ ನಡೆಸಿದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಸಮಿತಿಯು 72 ಗಂಟೆಗಳ ಕಾಲ ಬಂದ್‌ಗೆ ಕರೆ ನೀಡಿದೆ.

ಕತ್ರಾ ಪಟ್ಟಣದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಸಮಿತಿ ಮುಖಂಡರು ಮತ್ತು ವ್ಯಾಪಾರಿಗಳನ್ನು ವಶಕ್ಕೆ ಪಡೆಯಲಾಗಿದೆ ಮತ್ತು "ಅನೇಕ ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕ್ರಮ ಅನಪೇಕ್ಷಿತ ಮತ್ತು ಅನಗತ್ಯ. ಇದು ಜನರ ಕೋಪವನ್ನು ಹೆಚ್ಚಿಸಿದೆ ಎಂದು ಮಾಜಿ ಶಾಸಕ ಜುಗಲ್ ಶರ್ಮಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT