ಸಾಂದರ್ಭಿಕ ಚಿತ್ರ 
ದೇಶ

ತೃತೀಯ ಲಿಂಗಿ ಮದುವೆಯಾಗಲು ಪುತ್ರ ಮುಂದು; ಮನನೊಂದು ಪೋಷಕರು ಆತ್ಮಹತ್ಯೆ

ಕುಮಾರ್ ಮೂರು ವರ್ಷಗಳಿಂದ ತೃತೀಯಲಿಂಗಿಯೊಂದಿಗೆ ಸಂಬಂಧ ಹೊಂದಿದ್ದು, ಅವರನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದರು.

ನಂದ್ಯಾಲ್: ಆಂಧ್ರ ಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಮಧ್ಯವಯಸ್ಕ ದಂಪತಿಗಳು ತಮ್ಮ 24 ವರ್ಷದ ಮಗ ತೃತೀಯ ಲಿಂಗಿಯನ್ನು ಮದುವೆಯಾಗುವ ಇಚ್ಛೆ ವ್ಯಕ್ತಪಡಿಸಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸುಬ್ಬಾ ರಾಯುಡು(45) ಮತ್ತು ಸರಸ್ವತಿ(38) ಎಂಬ ದಂಪತಿ, ತಮ್ಮ ಮಗ ಸುನೀಲ್ ಕುಮಾರ್ ಕಳೆದ ಮೂರು ವರ್ಷಗಳಿಂದ ಸ್ಥಳೀಯ ತೃತೀಯಲಿಂಗಿ ಸಮುದಾಯದೊಂದಿಗೆ ಒಡನಾಟ ಹೊಂದಿದ್ದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಮತ್ತು ಈ ಸಂಬಂಧ ಮಗನೊಂದಿಗೆ ಜಗಳ ಮಾಡಿದ್ದಾರೆ ಎಂದು ನಂದ್ಯಾಲ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ಪಿ ಶ್ರೀನಿವಾಸ್ ರೆಡ್ಡಿ ಹೇಳಿದ್ದಾರೆ.

ಕುಮಾರ್ ಮೂರು ವರ್ಷಗಳಿಂದ ತೃತೀಯಲಿಂಗಿಯೊಂದಿಗೆ ಸಂಬಂಧ ಹೊಂದಿದ್ದು, ಅವರನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದರು. ಈ ಸಂಬಂಧ ಕುಮಾರ್, ತನ್ನ ಪೋಷಕರೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

ಈ ವಿಚಾರವಾಗಿ ಕುಮಾರ್ ಈ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಹೆಚ್ಚಿನ ತನಿಖೆಯಲ್ಲಿ ಕುಮಾರ್ ಟ್ರಾನ್ಸ್‌ಜೆಂಡರ್‌ಗಳಿಗೆ ಸೇರಿದ 1.5 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿದ್ದು, ಪೋಷಕರಿಗೆ ಆ ಹಣ ಕೊಡುವಂತೆ ಒತ್ತಾಯಿಸಿದ್ದಾನೆ. ಈ ಸಂಬಂಧ ತೃತೀಯ ಲಿಂಗಿ ಸಮುದಾಯದ ಸದಸ್ಯರು ಪೋಷಕರನ್ನು ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಇದರಿಂದ ನೊಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT