ಮನಮೋಹನ್ ಸಿಂಗ್ 
ದೇಶ

ನಾಳೆ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಮಿಲಿಟರಿ ಗೌರವಗಳೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ: ಕೇಂದ್ರ

ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವಾಲಯ ತಿಳಿಸಿದೆ.

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಡಿ.28 ಅಂದರೆ ಶನಿವಾರ ಬೆಳಗ್ಗೆ 11.45ಕ್ಕೆ ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ಮಿಲಿಟರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವಾಲಯ ತಿಳಿಸಿದೆ. ಸಂಪೂರ್ಣ ಮಿಲಿಟರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲು ರಕ್ಷಣಾ ಸಚಿವಾಲಯವನ್ನು ಕೋರಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಇದಕ್ಕೂ ಮೊದಲು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕವನ್ನು ನಿರ್ಮಿಸುವ ಸ್ಥಳದಲ್ಲಿ ಅವರ ಅಂತ್ಯಕ್ರಿಯೆಯನ್ನು ನಡೆಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದರು. ಪ್ರಧಾನಿಯವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಪತ್ರ ಬರೆದು ಈ ಮನವಿ ಮಾಡಿದರು.

ರಾಷ್ಟ್ರನಾಯಕರು ಮತ್ತು ಮಾಜಿ ಪ್ರಧಾನಿಗಳ ಅಂತ್ಯಕ್ರಿಯೆಯ ಸ್ಥಳದಲ್ಲಿಯೇ ಸ್ಮಾರಕ ನಿರ್ಮಿಸುವ ಸಂಪ್ರದಾಯವಿದೆ. ಅದರಂತೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿಯೇ ಎರಡು ಬಾರಿಗೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಅಂತ್ಯ ಸಂಸ್ಕಾರ ನಡೆಯಬೇಕು ಎಂದು ಖರ್ಗೆ ಮನವಿ ಮಾಡಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್‌ ಗವರ್ನರ್ ಆಗಿ, ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಸೇರಿದಂತೆ ಇತರ ಅನೇಕ ಕೆಲಸಗಳನ್ನು ನಿಬಾಯಿಸಿ ದೇಶದ ಆರ್ಥಿಕ ಮತ್ತು ಹಣಕಾಸಿನ ವಿಷಯಗಳ ಅಪಾರ ಪಾಂಡಿತ್ಯ ಹೊಂದಿದ್ದ ಡಾ. ಮನ್ ಮೋಹನ್ ಸಿಂಗ್ ಅವರ ಬಗ್ಗೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಸೇರಿದಂತೆ ಹಲವು ವಿಶ್ವ ನಾಯಕರು ಗೌರವಿಸುತ್ತಿದ್ದರು ಎಂದಿದ್ದಾರೆ.

ಜಾಗತಿಕ ಆರ್ಥಿಕ ಆರ್ಥಿಕ ಬಿಕ್ಕಟ್ಟನ್ನು ತಗ್ಗಿಸುವಲ್ಲಿ ಸಿಂಗ್ ಅವರ ಸಲಹೆ, ನಾಯಕತ್ವ ಮತ್ತು ಕೊಡುಗೆ ಪ್ರಮುಖವಾದದ್ದು, ರಾಷ್ಟ್ರ ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದಾಗ, ಮಾಜಿ ಪ್ರಧಾನಿ ಪಿ ವಿ ನರಸಿಂಹರಾವ್ ಅವರೊಂದಿಗೆ ಡಾ. ಮನಮೋಹನ್ ಸಿಂಗ್ ಅವರು ದೇಶವನ್ನು ಬಿಕ್ಕಟ್ಟಿನಿಂದ ಹೊರತೆಗೆದು ಆರ್ಥಿಕ ಸಮೃದ್ಧಿ ಮತ್ತು ಸ್ಥಿರತೆಯತ್ತ ಕೊಂಡೊಯ್ದಿದ್ದರು ಎಂದು ಪತ್ರದಲ್ಲಿ ಖರ್ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT