ರೈಲು ಚಕ್ರಗಳ ನಡುವೆ ಅವಿತು 290 ಕಿ.ಮೀ ಪ್ರಯಾಣಿಸಿದ ಭೂಪ 
ದೇಶ

ಟಿಕೆಟ್ ಗೆ ಹಣವಿಲ್ಲ: ರೈಲು ಚಕ್ರಗಳ ನಡುವೆ ಅವಿತು 290 ಕಿ.ಮೀ ಪ್ರಯಾಣಿಸಿದ ಭೂಪ, Video Viral

ಮಧ್ಯಪ್ರದೇಶದ ಜಬಲ್ಪುರ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ದಾನಪುರ ಎಕ್ಸ್‌ಪ್ರೆಸ್‌ನ ರೈಲಿನ ಕೆಳಗಿನಿಂದ ಹೊರಬರುತ್ತಿರುವ ವ್ಯಕ್ತಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಜಬಲ್ಪುರ: ಟಿಕೆಟ್ ಕೊಳ್ಳಲು ಹಣವಿಲ್ಲ ಎಂದು ಇಲ್ಲೊಬ್ಬ ಆಸಾಮಿ ರೈಲಿನ ಚಕ್ರಗಳ ನಡುವೆ ಅವಿತು ಬರೊಬ್ಬರಿ 290ಕಿ.ಮೀ ವರೆಗೂ ಪ್ರಯಾಣಿಸಿರುವ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ಜಬಲ್ಪುರ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ದಾನಪುರ ಎಕ್ಸ್‌ಪ್ರೆಸ್‌ನ ರೈಲಿನ ಕೆಳಗಿನಿಂದ ಹೊರಬರುತ್ತಿರುವ ವ್ಯಕ್ತಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಮೂಲಗಳ ಪ್ರಕಾರ ರೈಲು ಟಿಕೆಟ್ ಕೊಳ್ಳಲು ಹಣವಿಲ್ಲದೇ ಈತ ರೈಲಿನ ಕೆಳಗೆ ಅವಿತು ಬರೊಬ್ಬರಿ ಸುಮಾರು 290 ಕಿ.ಮೀ ವರೆಗೂ ಪ್ರಯಾಣಿಸಿದ್ದಾನೆ ಎನ್ನಲಾಗಿದೆ. ಈತ ಮಧ್ಯಪ್ರದೇಶದ ಇಟಾರ್ಸಿಯಿಂದ ಜಬಲ್‌ಪುರದವರೆಗೆ (290 ಕಿಮೀ) ರೈಲಿನ ಬೋಗಿಯ ಕೆಳಗೆ, ಚಕ್ರಗಳ ನಡುವೆ ಅಡಗಿ ಕುಳಿತುಕೊಂಡು ಪ್ರಯಾಣಿಸಿರುವುದು ತನಿಖೆಯ ವೇಳೆ ತಿಳಿದುಬಂದಿದೆ.

ಜಬಲ್ಪುರ ರೈಲು ನಿಲ್ದಾಣದ ಬಳಿ ರೋಲಿಂಗ್ ಪರೀಕ್ಷೆಯ ಸಮಯದಲ್ಲಿ ರೈಲಿನ ಸಿಬ್ಬಂದಿ S4 ಕೋಚ್ ಅಡಿಯಲ್ಲಿ ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಅಡಗಿರುವುದು ತಿಳಿಬಂದಿದೆ. ಆಘಾತಕ್ಕೊಳಗಾದ ನೌಕರರು ಕೂಡಲೇ ಸ್ಥಳಕ್ಕೆ ಆರ್‌ಪಿಎಫ್‌ಗೆ ಕರೆ ಮಾಡಿದ್ದು, ಸ್ಥಳಕ್ಕಾಗಮಿಸಿದ ಆರ್ ಪಿಎಫ್ ಸಿಬ್ಬಂದಿ ಆತನನ್ನು ಹೊರ ಬರುವಂತೆ ಹೇಳಿದ್ದಾರೆ. ಬಳಿಕ ಈ ವ್ಯಕ್ತಿ ನಿಧಾನವಾಗಿ ರೈಲಿನಡಿಯಿಂದ ಹೊರಬಂದಿದ್ದಾನೆ.

ಮಧ್ಯದ ಅಮಲು, ರೈಲಿನಡಿಯಲ್ಲೇ ಗಂಟೆಗಳ ಕಾಲ ನಿದ್ರೆ!

ಹೊರಗೆ ಬಂದ ಈತನನ್ನು ಸಿಬ್ಬಂದಿ ಪರೀಕ್ಷಹಿಸಿದ್ದು, ಈ ವೇಳೆ ಈತ ಮಧ್ಯಪಾನ ಮಾಡಿದ್ದ ವಿಚಾರ ತಿಳಿದಿದೆ. ಈ ಬಗ್ಗೆ ಕೇಳಿದಾಗ ಆತ ರೈಲಿನ ಕೆಳಗೆ ನಿದ್ರೆ ಮಾಡಿದ್ದೆ ಎಂದು ಹೇಳಿದ್ದಾನೆ. ಈ ವ್ಯಕ್ತಿ ಎಲ್ಲಿಂದ ಬಂದವನು ಅಥವಾ ರೈಲಿನ ಟ್ರಾಲಿಯನ್ನು ಹೇಗೆ ಪ್ರವೇಶಿಸಿದನು ಎಂಬುದು ಸ್ಪಷ್ಟವಾಗಿಲ್ಲ.

ಆದರೆ ಈತನ ಹಾವಭಾವಗಳನ್ನು ನೋಡಿದರೆ ಈತ ಮಾನಸಿಕ ಖಾಯಿಲೆಯಿಂದ ಬಳಲುತ್ತಿರಬಹುದು ಎಂದು ಸಿಬ್ಬಂದಿ ಶಂಕಿಸಿದ್ದಾರೆ. ಪ್ರಸ್ತುತ ಈತನನ್ನು ರೈಲ್ವೇ ರಕ್ಷಣಾ ಪಡೆ ಬಂಧಿಸಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT